AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುರೋಪ್​ಗೆ ಹಾರಿದ ಆಲಿಯಾ, ​ರಾಮ್ ಚರಣ್​, ಜ್ಯೂ. ಎನ್​ಟಿಆರ್, ರಾಜಮೌಳಿ

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಾಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ.

ಯುರೋಪ್​ಗೆ ಹಾರಿದ ಆಲಿಯಾ, ​ರಾಮ್ ಚರಣ್​, ಜ್ಯೂ. ಎನ್​ಟಿಆರ್, ರಾಜಮೌಳಿ
ರಾಮ್​ ಚರಣ್​ - ಆಲಿಯಾ ಭಟ್​
TV9 Web
| Edited By: |

Updated on: Aug 02, 2021 | 6:08 PM

Share

ಆರ್​ಆರ್​ಆರ್​ ಸಿನಿಮಾ ದೊಡ್ಡಮಟ್ಟದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಫ್ರೆಂಡ್​ಶಿಪ್​ ಡೇ ದಿನ ರಿಲೀಸ್​ ಆದ ಈ ಚಿತ್ರದ ಹಾಡು ಲಕ್ಷಲಕ್ಷ ವೀಕ್ಷಣೆ ಕಾಣುತ್ತಿರುವಾಗಲೇ ಇಡೀ ಚಿತ್ರತಂಡ ಯುರೋಪ್​ಗೆ ಪ್ರಯಾಣ ಬೆಳೆಸಿದೆ. ಇಂದು ಮುಂಜಾನೆಯೇ ಆಲಿಯಾ ಭಟ್​, ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ರಾಜಮೌಳಿ ಹಾಗೂ ಆರ್​ಆರ್​ಆರ್​ ತಂಡ ಪೂರ್ವ ಯುರೋಪ್​ಗೆ ಪ್ರಯಾಣ ಬೆಳೆಸಿದೆ.

ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಾಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚುತ್ತಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ. ಈ ಚಿತ್ರದಲ್ಲಿ ವಿಶೇಷ ಹಾಡೊಂದು ಬರಲಿದ್ದು, ಇದರ ಶೂಟಿಂಗ್​ ಯುರೋಪ್​ನಲ್ಲಿ ನಡೆಯಲಿದೆ.

ಇಂದು ಮುಂಜಾನೆ ಆರ್​​ಆರ್​ಆರ್​ ತಂಡ ವಿಮಾನ ಏರಿದೆ. ಸದ್ಯ, ಭಾರತದಲ್ಲಿ ಕೊವಿಡ್​ ಪ್ರಕರಣ ಹೆಚ್ಚುತ್ತಿದೆ. ಮತ್ತೆ ಲಾಕ್​ಡೌನ್​ ಆಗುವ ಭಯವೂ ಚಿತ್ರತಂಡಕ್ಕೆ ಕಾಡಿದೆ. ಈ ಕಾರಣಕ್ಕೆ ಕೊಂಚ ಬೇಗವೇ ಚಿತ್ರತಂಡ ಯುರೋಪ್​ ವಿಮಾನ ಏರಿದೆ ಎನ್ನಲಾಗಿದೆ. ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿದ್ದರಿಂದ ಸಿನಿಮಾ ಶೂಟಿಂಗ್​ ವಿಳಂಬವಾಗಿತ್ತು. ಈಗ ಕೊನೆಯ ಹಂತದ ಚಿತ್ರೀಕರಣಕ್ಕೆ ಸಿನಿಮಾ ತಂಡ ಚುರುಕುಮುಟ್ಟಿಸಿದೆ.

ಅಕ್ಟೋಬರ್​ 13ರಂದು ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಆಗಸ್ಟ್ 1ರಂದು ದೋಸ್ತಿ ಹಾಡು ರಿಲೀಸ್​ ಆಗಿತ್ತು. ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಈ ಹಾಡು ಮೂಡಿಬಂದಿದೆ. ಎಲ್ಲ ಭಾಷೆಯಲ್ಲೂ ಬೇರೆ ಬೇರೆ ಗಾಯಕರು ಹಾಡಿದ್ದಾರೆ. ಕನ್ನಡ ವರ್ಷನ್​ಗೆ ಯಾಸಿನ್​ ನಿಜಾರ್​ ಧ್ವನಿ ನೀಡಿದ್ದಾರೆ. ಅವರು ಮೂಲತಃ ಕನ್ನಡದವರಲ್ಲ. ಈವರೆಗೂ ಕನ್ನಡದ ಕೆಲವೇ ಕೆಲವು ಹಾಡುಗಳನ್ನು ಅವರು ಹಾಡಿದ್ದಾರಷ್ಟೇ. ಹಾಗಾಗಿ ‘ದೋಸ್ತಿ’ ಗೀತೆಯಲ್ಲಿ ಹೆಚ್ಚು ಕನ್ನಡದ ಫ್ಲೇವರ್​ ಕೇಳಿಸುತ್ತಿಲ್ಲ ಎಂದು ಕೆಲವು ಸಿನಿಪ್ರಿಯರು ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಫ್ರೆಂಡ್​ಶಿಪ್​ ಡೇ ಪ್ರಯುಕ್ತ RRR​ ಚಿತ್ರದ ‘ದೋಸ್ತಿ’ ಹಾಡು ರಿಲೀಸ್​; ಕನ್ನಡಿಗರಿಗೆ ಕಾಡಿದೆ ಒಂದು ಕೊರತೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್