AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲಿಯಾ ಮಗು ನೇರವಾಗಿ ಕರಣ್​ ಜೋಹರ್​ ಕಚೇರಿಗೆ​ ಹೋಗುತ್ತೆ ಅಂದ್ಕೊಂಡಿದ್ವಿ’:​ ಟ್ರೋಲ್​ ಮಾಡಿದ ನೆಟ್ಟಿಗರು

Alia Bhatt | Ranbir Kapoor: ಆಲಿಯಾ ಭಟ್​ ಅವರಿಗೆ ಟ್ರೋಲ್​ ಕಾಟ ಹೊಸದೇನೂ ಅಲ್ಲ. ವೃತ್ತಿಜೀವನದ ಆರಂಭದ ದಿನಗಳಿಂದಲೂ ಅನೇಕ ಕಾರಣಕ್ಕಾಗಿ ಅವರನ್ನು ಟ್ರೋಲ್​ ಮಾಡುತ್ತಾ ಬರಲಾಗಿದೆ.

‘ಆಲಿಯಾ ಮಗು ನೇರವಾಗಿ ಕರಣ್​ ಜೋಹರ್​ ಕಚೇರಿಗೆ​ ಹೋಗುತ್ತೆ ಅಂದ್ಕೊಂಡಿದ್ವಿ’:​ ಟ್ರೋಲ್​ ಮಾಡಿದ ನೆಟ್ಟಿಗರು
ಕರಣ್​ ಜೋಹರ್​, ರಣಬೀರ್ ಕಪೂರ್, ಆಲಿಯಾ ಭಟ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 11, 2022 | 3:46 PM

ಆಲಿಯಾ ಭಟ್​ ಮತ್ತು ರಣಬೀರ್ ಕಪೂರ್​ (Ranbir Kapoor) ಜೀವನದಲ್ಲಿ ಸಂತಸ ಮನೆ ಮಾಡಿದೆ. ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಈ ದಂಪತಿಗೆ ಹೆಣ್ಣು ಮಗು ಜನಿಸಿದೆ. ನವೆಂಬರ್​ 6ರಂದು ಆಲಿಯಾ ಭಟ್​ (Alia Bhatt) ಅವರು ಮುದ್ದಾದ ಮಗುವಿಗೆ ಜನ್ಮ ನೀಡಿದರು. ಈಗ ಆಸ್ಪತ್ರೆಯಿಂದ ಮಗುವನ್ನು (Alia Bhat Baby) ಮನೆಗೆ ಕರೆದುಕೊಂಡು ಬರಲಾಗಿದೆ. ಕಪೂರ್​ ಕುಟುಂಬಕ್ಕೆ ಇದು ಸಂತಸದ ಸುದ್ದಿ. ಆದರೆ ಬೇರೊಂದು ಕಾರಣಕ್ಕಾಗಿ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ. ಮಗುವನ್ನು ಮನೆಗೆ ಕರೆದುಕೊಂಡು ಬಂದಿದ್ದರ ಬಗ್ಗೆ ಸುದ್ದಿ ಹಂಚಿಕೊಂಡ ನ್ಯೂಸ್​ ಏಜೆನ್ಸಿ ಕುರಿತು ನೆಟ್ಟಿಗರು ಹಾಸ್ಯ ಮಾಡುತ್ತಿದ್ದಾರೆ. ಅದಕ್ಕೆ ಕಾರಣ ಏನು? ಇಲ್ಲಿದೆ ಉತ್ತರ..

‘ಆಸ್ಪತ್ರೆಯಿಂದ ಮಗುವನ್ನು ಮನೆಗೆ ಕರೆದುಕೊಂಡು ಹೊರಟ ಆಲಿಯಾ ಭಟ್​-ರಣಬೀರ್​ ಕಪೂರ್​’ ಎಂಬ ಕ್ಯಾಪ್ಷನ್​ನೊಂದಿಗೆ ಸೋಶಿಯಲ್​ ಮೀಡಿಯಾದಲ್ಲಿ ಸುದ್ದಿ ಹಂಚಿಕೊಳ್ಳಲಾಗಿದೆ. ಇದನ್ನು ನೋಡಿ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಓಹ್ ಇದು ಶಾಕಿಂಗ್​ ಸುದ್ದಿ.. ಮಗುವನ್ನು ನೇರವಾಗಿ ಕರಣ್​ ಜೋಹರ್​ ಅವರ ಆಫೀಸ್​ಗೆ ಕರೆದುಕೊಂಡು ಹೋಗ್ತಾರೆ ಅಂತ ನಾವು ಅಂದುಕೊಂಡಿದ್ವಿ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?
Image
ಮದುವೆ ಬಳಿಕ ಕೆಲಸಕ್ಕೆ ಹೊರಟ ಆಲಿಯಾ ಭಟ್​; ವಿಮಾನ ನಿಲ್ದಾಣದ ಎದುರು ಕಾಣಿಸಿಕೊಂಡ ಸುಂದರಿ
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
Image
ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

‘ನಾವೆಲ್ಲರೂ ಮಕ್ಕಳನ್ನು ಆಸ್ಪತ್ರೆಯಿಂದ ನೇರವಾಗಿ ಶಾಲೆಗೆ ಕರೆದುಕೊಂಡು ಹೋಗುತ್ತೇವೆ’ ಎಂದು ನೆಟ್ಟಿಗರೊಬ್ಬರು ಲೇವಡಿ ಮಾಡಿದ್ದಾರೆ. ‘ನ್ಯೂಸ್​ ಏಜೆನ್ಸಿ ಈ ರೀತಿ ಕ್ಯಾಪ್ಷನ್​ ನೀಡಿದ್ದು ಸರಿಯಿದೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮಗುವನ್ನು ಆಸ್ಪತ್ರೆಯಿಂದ ನೇರವಾಗಿ ಕರಣ್​ ಜೋಹರ್​ ಅವರ ಮುಂದಿನ ಸಿನಿಮಾ ಸೆಟ್​ಗೆ ಕರೆದುಕೊಂಡು ಹೋಗ್ತಾರೆ ಅಂತ ಅನೇಕರು ಭಾವಿಸಿದ್ದರು’ ಎಂದು ಕೂಡ ಕಾಲೆಳೆಯಲಾಗಿದೆ.

ಆಲಿಯಾ ಭಟ್​ ಅವರಿಗೆ ಟ್ರೋಲ್​ ಕಾಟ ಹೊಸದೇನೂ ಅಲ್ಲ. ವೃತ್ತಿಜೀವನದ ಆರಂಭದ ದಿನಗಳಿಂದಲೂ ಒಂದಿಲ್ಲೊಂದು ಕಾರಣಕ್ಕಾಗಿ ಅವರನ್ನು ಟ್ರೋಲ್​ ಮಾಡುತ್ತಾ ಬರಲಾಗಿದೆ. ಈಗ ಅವರು ಮಗುವಿನ ಮುಖ ತೋರಿಸದೇ ಇರಲು ನಿರ್ಧರಿಸಿದ್ದಾರೆ. ಹಾಗಾಗಿ ಮಗುವಿನ ಯಾವುದೇ ಫೋಟೋ ಬಹಿರಂಗ ಆಗಿಲ್ಲ. ನಟಿ ಅನುಷ್ಕಾ ಶರ್ಮಾ ಕೂಡ ತಮ್ಮ ಮಗಳ ವಿಚಾರದಲ್ಲಿ ಇದೇ ನಿಯಮ ಪಾಲಿಸುತ್ತಿದ್ದಾರೆ.

ಮಗು ಜನಿಸಿ ಇನ್ನೂ ವಾರವೂ ಕಳೆದಿಲ್ಲ. ಅಷ್ಟರಲ್ಲಾಗಲೇ ರಣಬೀರ್​ ಕಪೂರ್​ ಅವರು ಶೂಟಿಂಗ್​ ಸೆಟ್​ಗೆ ಮರಳಿದ್ದಾರೆ. ಈ ವಿಚಾರಕ್ಕೂ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ಹೆಂಡತಿ ಮತ್ತು ಮಗುವಿನ ಜೊತೆ ಇದ್ದು ಆರೈಕೆ ಮಾಡೋದು ಬಿಟ್ಟು ಕೆಲಸಕ್ಕೆ ಬಂದಿದ್ದು ಸರಿಯಲ್ಲ ಅಂತ ಅನೇಕರು ಟೀಕೆ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಹಲವು ಮೀಮ್ಸ್​ ಹರಿದಾಡುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:46 pm, Fri, 11 November 22

ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು