AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raha: ಮೊದಲ ಬಾರಿ ಮಗಳ ಮುಖ ತೋರಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ರಹಾ ಫೋಟೋ ವೈರಲ್​

ಈ ವರ್ಷ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಮುಂಬೈನ ಜುಹೂನಲ್ಲಿ ಕಪೂರ್​ ಕುಟುಂಬದವರು ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಭಾಗಿಯಾದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ಮಗಳನ್ನು ಕೂಡ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಅವರು ಪುತ್ರಿಯ ಮುಖವನ್ನು ತೋರಿಸಿದ್ದಾರೆ.

Raha: ಮೊದಲ ಬಾರಿ ಮಗಳ ಮುಖ ತೋರಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ರಹಾ ಫೋಟೋ ವೈರಲ್​
ರಣಬೀರ್​ ಕಪೂರ್​, ರಹಾ, ಆಲಿಯಾ ಭಟ್
ಮದನ್​ ಕುಮಾರ್​
|

Updated on: Dec 25, 2023 | 4:14 PM

Share

ನಟಿ ಆಲಿಯಾ ಭಟ್​ ಮತ್ತು ನಟ ರಣಬೀರ್​ ಕಪೂರ್​ (Ranbir Kapoor) ದಂಪತಿಯ ಅಭಿಮಾನಿಗಳಿಗೆ ಈ ವರ್ಷದ ಕ್ರಿಸ್​ಮಸ್​ ತುಂಬ ಸ್ಪೆಷಲ್​ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳು ಇವೆ. ಇದೇ ಮೊದಲ ಬಾರಿಗೆ ಆಲಿಯಾ ಭಟ್​ (Alia Bhatt) ಮತ್ತು ರಣಬೀರ್​ ಕಪೂರ್​ ಅವರು ಮಗಳ ಮುಖವನ್ನು ಜಗತ್ತಿಗೆ ತೋರಿಸಿದ್ದಾರೆ. ಪುತ್ರಿಗೆ ರಹಾ ಎಂದು ಹೆಸರು ಇಟ್ಟಿರುವ ಈ ದಂಪತಿ, ಮೊದಲ ಬಾರಿಗೆ ಮಾಧ್ಯಮಗಳ ಕ್ಯಾಮೆರಾ ಎದುರು ಮಗಳ ಜೊತೆ ಪೋಸ್​ ನೀಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್​ ಆಗಿವೆ. ಸಖತ್​ ಕ್ಯೂಟ್​ ಆಗಿರುವ ರಹಾ (Raha) ಮುಖವನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ.

ಬಾಲಿವುಡ್​ ಮಂದಿ ಎಲ್ಲ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷದ ಕ್ರಿಸ್​ಮಸ್​ ಹಬ್ಬದ ಪ್ರಯುಕ್ತ ಮುಂಬೈನ ಜುಹೂನಲ್ಲಿ ಕಪೂರ್​ ಕುಟುಂಬದವರು ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಭಾಗಿಯಾದ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಅವರು ಮಗಳನ್ನು ಕೂಡ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಅವರು ಪುತ್ರಿಯ ಮುಖವನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಬಂಗಾರದ ಬಣ್ಣದಲ್ಲಿ ಹೊಳೆದ ಬಾಲಿವುಡ್ ಕ್ವೀನ್ ಆಲಿಯಾ ಭಟ್

ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಪರಸ್ಪರ ಪ್ರೀತಿಸಿ, 2022ರ ಏಪ್ರಿಲ್​ 14ರಂದು ಮದುವೆಯಾದರು. ಅದೇ ವರ್ಷ ನವೆಂಬರ್​ 6ರಂದು ಹೆಣ್ಣು ಮಗುವಿಗೆ ಆಲಿಯಾ ಭಟ್​ ಜನ್ಮ ನೀಡಿದರು. ಅವರು ಮನೆಯಲ್ಲಿ ಮಗಳನ್ನು ಹಲವು ಹೆಸರುಗಳಿಂದ ಕರೆಯುತ್ತಿದ್ದಾರೆ. ರಹು, ರಾರಾ, ಲಾಲಿಪಾಪ್ ಅಂತ ಮಗಳನ್ನು ಮುದ್ದಾಗಿ ಕರೆಯುತ್ತೇವೆ ಎಂದು ಇತ್ತೀಚಿಗೆ ಆಲಿಯಾ ಭಟ್​ ಹೇಳಿದ್ದರು.

ರಣಬೀರ್​ ಕಪೂರ್​ ಅವರು ಈ ವರ್ಷ ಭರ್ಜರಿ ಯಶಸ್ಸು ಕಂಡಿದ್ದಾರೆ. ಅವರು ನಟಿಸಿದ ‘ಅನಿಮಲ್​’ ಸಿನಿಮಾ ಡಿಸೆಂಬರ್​ 1ರಂದು ಬಿಡುಗಡೆಯಾಗಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಇನ್ನೂ ಹಲವು ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕೆಲವರು ಈ ಚಿತ್ರವನ್ನು ಟೀಕಿಸಿದ್ದರೂ ಕೂಡ ಬಾಕ್ಸ್​ ಆಫೀಸ್​ ಕಲೆಕ್ಷನ್​ ಚೆನ್ನಾಗಿಯೇ ಆಗಿದೆ. ಈ ಖುಷಿಯಲ್ಲಿ ಅವರು ಕ್ರಿಸ್​ಮಸ್​ ಆಚರಿಸಿದ್ದಾರೆ. ಅವರ ಮುಂದಿನ ಸಿನಿಮಾಗಳ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?