AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪರಾಜಿಗಳಿಗೆ ಕ್ಯೂಟ್​ ಆಗಿ ಪೋಸ್​ ನೀಡುವುದು ಕಲಿತ ಆಲಿಯಾ ಭಟ್​ ಮಗಳು ರಹಾ ಕಪೂರ್​

ಮಗಳ ಪಾಲನೆಯಲ್ಲಿ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ತೊಡಗಿಕೊಂಡಿದ್ದಾರೆ. ಸಿನಿಮಾ ಕೆಲಸಗಳ ನಡುವೆ ಅವರು ಮಗಳ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಭಾನುವಾರ (ಜುಲೈ 28) ರಣಬೀರ್​ ಕಪೂರ್​ ಅವರು ಪುತ್ರಿ ರಹಾ ಕಪೂರ್​ ಜೊತೆ ಸುತ್ತಾಡಿದ್ದಾರೆ. ಈ ವೇಳೆ ಪಾಪರಾಜಿಗಳ ಕ್ಯಾಮೆರಾ ನೋಡಿ ರಹಾ ಮುದ್ದಾಗಿ ಪೋಸ್​ ನೀಡಿದ್ದಾಳೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ...

ಪಾಪರಾಜಿಗಳಿಗೆ ಕ್ಯೂಟ್​ ಆಗಿ ಪೋಸ್​ ನೀಡುವುದು ಕಲಿತ ಆಲಿಯಾ ಭಟ್​ ಮಗಳು ರಹಾ ಕಪೂರ್​
ರಹಾ ಕಪೂರ್​
ಮದನ್​ ಕುಮಾರ್​
|

Updated on: Jul 28, 2024 | 6:36 PM

Share

ಸೆಲೆಬ್ರಿಟಿಗಳು ಎಲ್ಲಿಯೇ ಹೋದರೂ ಪಾಪರಾಜಿಗಳು ಹಿಂಬಾಲಿಸುತ್ತಾರೆ. ಮುಂಬೈನಲ್ಲಿ ಪಾಪರಾಜಿಗಳ ಹಾವಳಿ ಜಾಸ್ತಿಯೇ ಇದೆ. ಸ್ಟಾರ್​ಗಳ ಫೋಟೋ ಮತ್ತು ವಿಡಿಯೋ ತೆಗೆಯುವ ಸಲುವಾಗಿ ಪಾಪರಾಜಿಗಳ ನಡುವೆ ಸಖತ್​ ಪೈಪೋಟಿ ಇರುತ್ತದೆ. ಇನ್ನು, ಸ್ಟಾರ್​ ಕಿಡ್​ಗಳು ಸಿಕ್ಕರೆ ಪಾಪರಾಜಿಗಳಿಗೆ ತುಂಬ ಖುಷಿ. ಅದೇ ಕಾರಣಕ್ಕಾಗಿ ಸೈಫ್​ ಅಲಿ ಖಾನ್​ ಹಾಗೂ ಕರೀನಾ ಕಪೂರ್​ ಖಾನ್​ ದಂಪತಿಯ ಮಕ್ಕಳಾದ ತೈಮೂರ್​ ಹಾಗೂ ಜಹಂಗೀರ್ ಕಂಡರೆ ಪಾಪರಾಜಿಗಳು ಫುಲ್​ ಹ್ಯಾಪಿ ಆಗ್ತಾರೆ. ಹಾಗೆಯೇ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ದಂಪತಿಯ ಪುತ್ರಿ ರಹಾ ಕಪೂರ್​ ಕೂಡ ಈಗ ಕ್ಯೂಟ್​ ಆಗಿ ಪೋಸ್​ ನೀಡಲು ಶುರು ಮಾಡಿದ್ದಾಳೆ.

ರಣಬೀರ್​ ಕಪೂರ್​ ಅವರು ತುಂಬ ಬ್ಯುಸಿ ಆಗಿದ್ದಾರೆ. ಹಾಗಿದ್ದರೂ ಕೂಡ ಅವರು ಫ್ಯಾಮಿಲಿಗೆ ಸಮಯ ನೀಡುವುದನ್ನು ತಪ್ಪಿಸುತ್ತಿಲ್ಲ. ಇಂದು (ಜುಲೈ 28) ಭಾನುವಾರ ಆದ್ದರಿಂದ ರಣಬೀರ್​ ಕಪೂರ್ ಅವರು ಮಗಳ ಜೊತೆ ಕಾಲ ಕಳೆದಿದ್ದಾರೆ. ರಣಬೀರ್​ ಕಪೂರ್​ ಹೊರಗೆ ಬರುವುದಕ್ಕೂ ಮುನ್ನ ರಹಾ ಕಪೂರ್​ ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಟ್ಟು ಓಡಾಡಿದ್ದಾಳೆ. ಪಾಪರಾಜಿಗಳನ್ನು ನೋಡಿ ನಗು ಚೆಲ್ಲಿದ್ದಾಳೆ.

2022ರ ಏಪ್ರಿಲ್​ 14ರಂದು ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮದುವೆ ಆದರು. ಅದೇ ವರ್ಷ ನವೆಂಬರ್​ನಲ್ಲಿ ಆಲಿಯಾ ಭಟ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಮಗುವಿಗೆ ರಹಾ ಕಪೂರ್​ ಎಂದರು ಹೆಸರು ಇಟ್ಟರು. ಆರಂಭದಲ್ಲಿ ಮಗಳ ಮುಖವನ್ನು ಅವರು ತೋರಿಸಿರಲಿಲ್ಲ. ಮಗಳ ಫೋಟೋ, ವಿಡಿಯೋ ತೆಗೆಯಬೇಡಿ ಎಂದು ಪಾಪರಾಜಿಗಳಲ್ಲಿ ಅವರು ಮನವಿ ಮಾಡಿಕೊಂಡಿದ್ದರು. ಬಳಿಕ ಅವರೇ ಪುತ್ರಿಯ ಮುಖವನ್ನು ರಿವೀಲ್​ ಮಾಡಿದರು.

ಇದನ್ನೂ ಓದಿ: ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್​ 1; ಕಂಗನಾ, ಆಲಿಯಾಗೆ ಎಷ್ಟನೇ ಸ್ಥಾನ?

ಸಿನಿಮಾ ವಿಚಾರಕ್ಕೆ ಬರುವುದಾದರೆ, ರಣಬೀರ್​ ಕಪೂರ್​ ಅವರು ‘ಅನಿಮಲ್​’ ಚಿತ್ರದಿಂದ ಭಾರಿ ಸಕ್ಸಸ್​ ಕಂಡರು. ಈಗ ಅವರು ನಿತೇಶ್​ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಆಲಿಯಾ ಭಟ್​ ಕೂಡ ತುಂಬ ಬ್ಯುಸಿ ಆಗಿದ್ದಾರೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ‘ಲವ್​ ಆ್ಯಂಡ್​ ವಾರ್​’ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ. ‘ಯಶ್​ ರಾಜ್​ ಫಿಲ್ಮ್ಸ್​’ ನಿರ್ಮಾಣದ ‘ಆಲ್ಫಾ’ ಸಿನಿಮಾದಲ್ಲಿ ಆಲಿಯಾ ಭಟ್​ ಅವರು ಪ್ರಮುಖ ಪಾತ್ರ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ