AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

Alia Bhatt Ranbir Kapoor Wedding: ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ ಬಗ್ಗೆ ಹೊಸ ಹೊಸ ಅಪ್​ಡೇಟ್​ ಕೇಳಿಬರುತ್ತಿದೆ. ವಿವಾಹ ನಡೆಯುವ ಸ್ಥಳದ ಬಗ್ಗೆ ಈ ಜೋಡಿ ಒಂದು ಮುಖ್ಯ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ
ರಣಬೀರ್ ಕಪೂರ್, ಆಲಿಯಾ ಭಟ್
Follow us
TV9 Web
| Updated By: ಮದನ್​ ಕುಮಾರ್​

Updated on: Dec 14, 2021 | 5:38 PM

ಬಾಲಿವುಡ್​ನಲ್ಲೀಗ ಮದುವೆ ಸೀಸನ್​ ಶುರು ಆಗಿದೆ. ಅನೇಕ ಸ್ಟಾರ್​ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಕೊರೊನಾ ವೈರಸ್​ ಕಾರಣದಿಂದ ಮುಂದೂಡಲ್ಪಟ್ಟಿದ್ದ ಮದುವೆಗಳೆಲ್ಲ ಈಗ ನಡೆಯುತ್ತಿವೆ. ಇತ್ತೀಚೆಗಷ್ಟೇ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರು ಅದ್ದೂರಿಯಾಗಿ ಸಪ್ತಪದಿ ತುಳಿದರು. ಈಗ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ ಅವರು ವಿಕ್ಕಿ ಜೈನ್​ ಜತೆ ಮದುವೆ ಆಗುತ್ತಿದ್ದಾರೆ. ಈ ನಡುವೆ ಆಲಿಯಾ ಭಟ್​ (Alia Bhatt) ಮತ್ತು ರಣಬೀರ್​ ಕಪೂರ್​ (Ranbir Kapoor) ವಿವಾಹದ ಕುರಿತು ಹೊಸ ಸುದ್ದಿ ಹರಿದಾಡುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಈ ಜೋಡಿಯ ಮದುವೆ ಆಗಿರಬೇಕಿತ್ತು. ಆದರೆ ಕಾರಣಂತರಗಳಿಂದ ಮದುವೆ ದಿನಾಂಕ ಪದೇಪದೇ ಮುಂದೂಡಲ್ಪಡುತ್ತಲೇ ಇದೆ. ಅದೇ ರೀತಿ ಮದುವೆ ನಡೆಯುವ ಸ್ಥಳದ ಬಗ್ಗೆಯೂ ಈ ಜೋಡಿಹಕ್ಕಿಗಳು ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿವೆ ಎನ್ನಲಾಗಿದೆ.

ಬಾಲಿವುಡ್​ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಮದುವೆ ಆಗುವುದು ಟ್ರೆಂಡ್​. ರಾಜಸ್ಥಾನ, ಗೋವಾ ಮುಂತಾದ ಸ್ಥಳಗಳಲ್ಲೂ ಸೆಲೆಬ್ರಿಟಿಗಳ ಮದುವೆ ನೆರವೇರುತ್ತವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಕೂಡ ಅದೇ ರೀತಿ ಪ್ಲ್ಯಾನ್​ ಇಟ್ಟುಕೊಂಡಿದ್ದರು. ಆದರೆ ಈಗ​ ಬೇರೆ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇರೆಲ್ಲಿಗೂ ತೆರಳದೇ, ಮುಂಬೈನಲ್ಲೇ ಸಪ್ತಪದಿ ತುಳಿಯಲು ತೀರ್ಮಾನಿಸಿದ್ದಾರೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

ಆಲಿಯಾ ಭಟ್​ ತಂದೆ ಮಹೇಶ್​ ಭಟ್​ ಅವರಿಗೆ ಈಗ ವಿದೇಶಕ್ಕೆ ಪ್ರಯಾಣ ಮಾಡುವುದು ಕಷ್ಟ ಆಗುತ್ತಿದೆ ಎನ್ನಲಾಗಿದೆ. ಆ ಕಾರಣದಿಂದ ಮದುವೆಯನ್ನು ಮುಂಬೈನಲ್ಲೇ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಮದುವೆಗೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗುವುದು ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ವಿಚಾರಗಳ ಬಗ್ಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ನೇರವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ.

ಆಲಿಯಾ ಮತ್ತು ರಣಬೀರ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಈಗಾಗಲೇ ಸಾಬೀತಾಗಿದೆ. ಅವರಿಬ್ಬರ ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗೊತ್ತಾಗುತ್ತದೆ. ಈ ವರ್ಷ ದೀಪಾವಳಿ ಹಬ್ಬವನ್ನು ಅವರು ಜೊತೆಯಾಗಿ ಆಚರಿಸಿದ್ದರು. ಅನೇಕ ಪಾರ್ಟಿಗಳಿಗೆ ಒಟ್ಟಾಗಿ ತೆರಳಿದ್ದುಂಟು. ‘ಒಂದು ವೇಳೆ ಲಾಕ್​ಡೌನ್​ ಇಲ್ಲದೇ ಇದ್ದಿದ್ದರೆ ಇಷ್ಟುಹೊತ್ತಿಗಾಗಲೇ ನಮ್ಮ ಮದುವೆ ಆಗಿರುತ್ತಿತ್ತು’ ಎಂದು ಒಂದು ಸಂದರ್ಶನದಲ್ಲಿ ರಣಬೀರ್​ ಹೇಳಿಕೊಂಡಿದ್ದರು.

ಇದನ್ನೂ ಓದಿ:

RRR​ ಸುದ್ದಿಗೋಷ್ಠಿ: ಕರುನಾಡಿಗೆ ಬಂದ ರಾಜಮೌಳಿ, ಆಲಿಯಾ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ಹೇಳಿದ್ದೇನು?

ಆಲಿಯಾಗೆ ಲಿಪ್​ ಲಾಕ್​ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್​ ಮಾಡಿದ ರಣವೀರ್​ ಸಿಂಗ್? ಏನಿದು ಕಥೆ?

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್