AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಬಾಲಿವುಡ್​ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಮದುವೆ ಆಗುವುದು ಟ್ರೆಂಡ್​. ರಾಜಸ್ಥಾನ, ಗೋವಾ ಮುಂತಾದ ಸ್ಥಳಗಳಲ್ಲೂ ಸೆಲೆಬ್ರಿಟಿಗಳ ಮದುವೆ ನೆರವೇರುತ್ತವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಕೂಡ ಅದೇ ರೀತಿ ಪ್ಲ್ಯಾನ್​ ಇಟ್ಟುಕೊಂಡಿದ್ದರು. ಆದರೆ ಈಗ​ ಬೇರೆ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇರೆಲ್ಲಿಗೂ ತೆರಳದೇ, ಮುಂಬೈನಲ್ಲೇ ಸಪ್ತಪದಿ ತುಳಿಯಲು ತೀರ್ಮಾನಿಸಿದ್ದಾರೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ
ರಣಬೀರ್ ಕಪೂರ್, ಆಲಿಯಾ ಭಟ್
TV9 Web
| Edited By: |

Updated on:Jul 03, 2026 | 2:49 PM

Share

ಬಾಲಿವುಡ್​ನಲ್ಲೀಗ ಮದುವೆ ಸೀಸನ್​ ಶುರು ಆಗಿದೆ. ಅನೇಕ ಸ್ಟಾರ್​ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಕೊರೊನಾ ವೈರಸ್​ ಕಾರಣದಿಂದ ಮುಂದೂಡಲ್ಪಟ್ಟಿದ್ದ ಮದುವೆಗಳೆಲ್ಲ ಈಗ ನಡೆಯುತ್ತಿವೆ. ಇತ್ತೀಚೆಗಷ್ಟೇ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರು ಅದ್ದೂರಿಯಾಗಿ ಸಪ್ತಪದಿ ತುಳಿದರು. ಈಗ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ ಅವರು ವಿಕ್ಕಿ ಜೈನ್​ ಜತೆ ಮದುವೆ ಆಗುತ್ತಿದ್ದಾರೆ. ಈ ನಡುವೆ ಆಲಿಯಾ ಭಟ್​ (Alia Bhatt) ಮತ್ತು ರಣಬೀರ್​ ಕಪೂರ್​ (Ranbir Kapoor) ವಿವಾಹದ ಕುರಿತು ಹೊಸ ಸುದ್ದಿ ಹರಿದಾಡುತ್ತಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಈ ಜೋಡಿಯ ಮದುವೆ ಆಗಿರಬೇಕಿತ್ತು. ಆದರೆ ಕಾರಣಂತರಗಳಿಂದ ಮದುವೆ ದಿನಾಂಕ ಪದೇಪದೇ ಮುಂದೂಡಲ್ಪಡುತ್ತಲೇ ಇದೆ. ಅದೇ ರೀತಿ ಮದುವೆ ನಡೆಯುವ ಸ್ಥಳದ ಬಗ್ಗೆಯೂ ಈ ಜೋಡಿಹಕ್ಕಿಗಳು ಒಂದು ಮಹತ್ವದ ನಿರ್ಧಾರ ತೆಗೆದುಕೊಂಡಿವೆ ಎನ್ನಲಾಗಿದೆ.

ಬಾಲಿವುಡ್​ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಮದುವೆ ಆಗುವುದು ಟ್ರೆಂಡ್​. ರಾಜಸ್ಥಾನ, ಗೋವಾ ಮುಂತಾದ ಸ್ಥಳಗಳಲ್ಲೂ ಸೆಲೆಬ್ರಿಟಿಗಳ ಮದುವೆ ನೆರವೇರುತ್ತವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಕೂಡ ಅದೇ ರೀತಿ ಪ್ಲ್ಯಾನ್​ ಇಟ್ಟುಕೊಂಡಿದ್ದರು. ಆದರೆ ಈಗ​ ಬೇರೆ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇರೆಲ್ಲಿಗೂ ತೆರಳದೇ, ಮುಂಬೈನಲ್ಲೇ ಸಪ್ತಪದಿ ತುಳಿಯಲು ತೀರ್ಮಾನಿಸಿದ್ದಾರೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

ಆಲಿಯಾ ಭಟ್​ ತಂದೆ ಮಹೇಶ್​ ಭಟ್​ ಅವರಿಗೆ ಈಗ ವಿದೇಶಕ್ಕೆ ಪ್ರಯಾಣ ಮಾಡುವುದು ಕಷ್ಟ ಆಗುತ್ತಿದೆ ಎನ್ನಲಾಗಿದೆ. ಆ ಕಾರಣದಿಂದ ಮದುವೆಯನ್ನು ಮುಂಬೈನಲ್ಲೇ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಮದುವೆಗೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗುವುದು ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ವಿಚಾರಗಳ ಬಗ್ಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ನೇರವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ.

ಆಲಿಯಾ ಮತ್ತು ರಣಬೀರ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಈಗಾಗಲೇ ಸಾಬೀತಾಗಿದೆ. ಅವರಿಬ್ಬರ ಸೋಶಿಯಲ್​ ಮೀಡಿಯಾ ಪೋಸ್ಟ್​ ಗಮನಿಸಿದರೆ ಗೊತ್ತಾಗುತ್ತದೆ. ಈ ವರ್ಷ ದೀಪಾವಳಿ ಹಬ್ಬವನ್ನು ಅವರು ಜೊತೆಯಾಗಿ ಆಚರಿಸಿದ್ದರು. ಅನೇಕ ಪಾರ್ಟಿಗಳಿಗೆ ಒಟ್ಟಾಗಿ ತೆರಳಿದ್ದುಂಟು. ‘ಒಂದು ವೇಳೆ ಲಾಕ್​ಡೌನ್​ ಇಲ್ಲದೇ ಇದ್ದಿದ್ದರೆ ಇಷ್ಟುಹೊತ್ತಿಗಾಗಲೇ ನಮ್ಮ ಮದುವೆ ಆಗಿರುತ್ತಿತ್ತು’ ಎಂದು ಒಂದು ಸಂದರ್ಶನದಲ್ಲಿ ರಣಬೀರ್​ ಹೇಳಿಕೊಂಡಿದ್ದರು.

ಇದನ್ನೂ ಓದಿ: ಆಲಿಯಾಗೆ ಲಿಪ್​ ಲಾಕ್​ ಮಾಡಲ್ಲ ಎಂದು ದೀಪಿಕಾಗೆ ಪ್ರಾಮಿಸ್​ ಮಾಡಿದ ರಣವೀರ್​ ಸಿಂಗ್? ಏನಿದು ಕಥೆ?

Published On - 5:38 pm, Tue, 14 December 21

Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ