AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​-ರಣಬೀರ್​ ಕಪೂರ್​ ಮದುವೆಗೆ ಸಕಲ ಸಿದ್ಧತೆ; ಮೆಹಂದಿ, ಸಂಗೀತ್​ ಸಮಾರಂಭದ ಡೇಟ್​ ಬಹಿರಂಗ

Alia Bhatt Ranbir Kapoor Marriage: ಆಲಿಯಾ ಭಟ್​-ರಣಬೀರ್​ ಕಪೂರ್​ ವಿವಾಹದಲ್ಲಿ ಮೆಹಂದಿ ಮತ್ತು ಸಂಗೀತ್​ ಸಮಾರಂಭ ಬಹಳ ಗ್ರ್ಯಾಂಡ್​ ಆಗಿರಲಿದೆ. ಅವುಗಳ ದಿನಾಂಕ ಕೂಡ ಈಗ ಬಹಿರಂಗ ಆಗಿದೆ.

ಆಲಿಯಾ ಭಟ್​-ರಣಬೀರ್​ ಕಪೂರ್​ ಮದುವೆಗೆ ಸಕಲ ಸಿದ್ಧತೆ; ಮೆಹಂದಿ, ಸಂಗೀತ್​ ಸಮಾರಂಭದ ಡೇಟ್​ ಬಹಿರಂಗ
ರಣಬೀರ್​ ಕಪೂರ್​, ಆಲಿಯಾ ಭಟ್
TV9 Web
| Edited By: |

Updated on: Apr 08, 2022 | 1:05 PM

Share

ಬಾಲಿವುಡ್​ನ ಸ್ಟಾರ್​ ಜೋಡಿ ಎನಿಸಿಕೊಂಡಿರುವ ಆಲಿಯಾ ಭಟ್​ (Alia Bhatt) ಮತ್ತು ರಣಬೀರ್​ ಕಪೂರ್​ ಅವರು ಶೀಘ್ರವೇ ಹಸೆಮಣೆ ಏರಲಿದ್ದಾರೆ. ಅವರಿಬ್ಬರು ಪರಸ್ಪರ ಪ್ರೀತಿಸುತ್ತಿರುವ ವಿಷಯ ಬಹಳ ಹಿಂದೆಯೇ ಬಹಿರಂಗ ಆಗಿತ್ತು. ಕೆಲವು ಸಂದರ್ಶನಗಳಲ್ಲಿ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ ಅವರು ಈ ಬಗ್ಗೆ ಹೇಳಿಕೊಂಡಿದ್ದುಂಟು. ಅವರಿಬ್ಬರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕು ಹಲವು ದಿನಗಳೇ ಕಳೆದಿವೆ. ಈಗ ಮದುವೆಗೆ ಸಂಬಂಧಿಸಿದ ಸುದ್ದಿಗಳು ಜೋರಾಗಿ ಕೇಳಿಬರುತ್ತಿವೆ. ಶೀಘ್ರದಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ (Alia Bhatt Ranbir Kapoor Marriage) ಆಗಲಿದ್ದಾರೆ. ಈ ಕುರಿತು ಕುಟುಂಬದವರಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲವಾದರೂ ಹಲವು ಬಗೆಯ ವರದಿಗಳು ಪ್ರಕಟ ಆಗಿವೆ. ಮೂಲಗಳ ಪ್ರಕಾರ ಏ.15ರಂದು ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅದ್ದೂರಿಯಾಗಿ ಮದುವೆ ಆಗಲು ಈ ಜೋಡಿ ನಿರ್ಧರಿಸಿದಂತಿದೆ. ಕೊವಿಡ್ ಬಳಿಕ ಕೆಲವು ಸೆಲೆಬ್ರಿಟಿಗಳು ಸಿಂಪಲ್​ ವಿವಾಹವನ್ನು ಇಷ್ಟಪಡುತ್ತಿದ್ದಾರೆ. ಆದರೆ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ (Ranbir Kapoor) ಅವರು ಆ ರೀತಿ ಅಲ್ಲ. ಮೆಹಂದಿ, ಸಂಗೀತ್​ ಸಮಾರಂಭ ಮುಂತಾದ್ದನ್ನು ಭರ್ಜರಿಯಾಗಿ ಮಾಡಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಉತ್ತರ ಭಾರತದಲ್ಲಿ ಮೆಹಂದಿ ಮತ್ತು ಸಂಗೀತ್​ ಸಮಾರಂಭವನ್ನು ಬಹಳ ಗ್ರ್ಯಾಂಡ್​ ಆಗಿ ಮಾಡಲಾಗುತ್ತದೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ವಿವಾಹದಲ್ಲಿ ಈ ಸಮಾರಂಭಗಳು ಅದ್ದೂರಿಯಾಗಿ ಇರಲಿವೆ. ಅವುಗಳ ದಿನಾಂಕ ಕೂಡ ಈಗ ಬಹಿರಂಗ ಆಗಿದೆ. ಆಲಿಯಾ ಭಟ್​ ಅವರ ಬಾಂದ್ರಾದ ಮನೆಯಲ್ಲಿ ಏ.13ರಂದು ಮೆಹಂದಿ ಶಾಸ್ತ್ರ ನೆರವೇರಲಿದೆ. ಅದೇ ದಿನ ರಣಬೀರ್​ ಕಪೂರ್​ ಮನೆಯಲ್ಲಿ ಮೆಹಂದಿ ಶಾಸ್ತ್ರ ನಡೆಯಲಿದೆ. ಏ.14ರಂದು ಹಳದಿ ಹಾಗೂ ಸಂಗೀತ್​ ಸಮಾರಂಭ ಇರಲಿದೆ. ಏ.15ರಂದು ವಿಜೃಂಭಣೆಯಿಂದ ಮದುವೆ ನಡೆಯಲಿದೆ ಎಂದು ‘ಇಂಡಿಯಾ ಟಿವಿ ನ್ಯೂಸ್​’ ವರದಿ ಮಾಡಿದೆ.

ಆಲಿಯಾಗೆ ಬಾಲ್ಯದಲ್ಲೇ ರಣಬೀರ್​ ಮೇಲೆ ಕ್ರಶ್​:

ಆಲಿಯಾ ಭಟ್​ ಅವರು ರಣಬೀರ್​ ಕಪೂರ್​ಗೆ ಮನಸೋತಿದ್ದು ಯಾಕೆ? ಇದು ಕೌತುಕ ಪ್ರಶ್ನೆ. ರಣಬೀರ್​ ಕಪೂರ್​ ಇತಿಹಾಸ ಏನು ಎಂಬುದು ಜಗತ್ತಿಗೆ ತಿಳಿದಿದೆ. ದೀಪಿಕಾ ಪಡುಕೋಣೆ ಜೊತೆಗೆ ಅವರು ಡೇಟಿಂಗ್​ ಮಾಡುತ್ತಿದ್ದರು. ನಂತರ ಅದು ಬ್ರೇಕಪ್​ನಲ್ಲಿ ಅಂತ್ಯವಾಯ್ತು. ಕತ್ರಿನಾ ಕೈಫ್​ ಜೊತೆಯೂ ರಣಬೀರ್​ ಕಪೂರ್ ಪ್ರೀತಿಸುತ್ತಿದ್ದರು. ಆ ಲವ್​ ಕೂಡ ಮದುವೆವರೆಗೆ ಮುಂದುವರಿಯಲಿಲ್ಲ. ಹೀಗೆ ಅನೇಕ ಬ್ರೇಕಪ್​ ಮಾಡಿಕೊಂಡಿರುವ ರಣಬೀರ್​ ಕಪೂರ್​ ಜೊತೆ ಆಲಿಯಾ ಭಟ್​ ಅವರಿಗೆ ಪ್ರೀತಿ ಚಿಗುರಿದ್ದು ಯಾಕೆ ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಆ ಬಗ್ಗೆ ಆಲಿಯಾ ಇತ್ತೀಚಿಗೆ ಹೇಳಿಕೊಂಡಿದ್ದರು.

ಹಲವು ವರ್ಷಗಳ ಹಿಂದೆಯೇ ಆಲಿಯಾ ಭಟ್​ ಅವರು ರಣಬೀರ್​ ಕಪೂರ್​ಗೆ ಮನಸೋತಿದ್ದರು. ಆಗಿನ್ನೂ ಅವರು ಚಿಕ್ಕ ಬಾಲಕಿ ಆಗಿದ್ದರು. ‘ಪ್ರಾಮಾಣಿಕವಾಗಿ ಹೇಳಬೇಕು ಎಂದರೆ ನಾನು ಮಾನಸಿಕವಾಗಿ ರಣಬೀರ್​ ಕಪೂರ್​ ಜೊತೆ ಈಗಾಗಲೇ ಮದುವೆ ಆಗಿದ್ದೇನೆ. ಅದನ್ನೂ ಬಿಡಿ, ನಾನು ಮೊಟ್ಟ ಮೊದಲ ಬಾರಿಗೆ ಅವರನ್ನು ತೆರೆಮೇಲೆ ನೋಡಿದಾಗಲೇ ಮದುವೆ ಆದರೆ ಇವರನ್ನೇ ಆಗೋದು ಅಂತ ನಿರ್ಧಾರ ಮಾಡಿದ್ದೆ. ಆಗಿನ್ನೂ ನಾನು ಚಿಕ್ಕ ಹುಡುಗಿ ಆಗಿದ್ದೆ. ಆದರೂ ಆಗ ನಾನು ಆ ನಿರ್ಧಾರ ತೆಗೆದುಕೊಂಡಿದ್ದೆ. ಅದು ಒಂದು ರೀತಿಯ ಮನಸ್ಥಿತಿ. ನನ್ನ ಬದುಕಿನಲ್ಲಿ ನಾನು ಕಂಡು ಅತಿ ಆಕರ್ಷಕ ವ್ಯಕ್ತಿಗಳಲ್ಲಿ ರಣಬೀರ್​ ಕಪೂರ್​ ಕೂಡ ಒಬ್ಬರು. ಅವರ ಮೇಲೆ ನನಗೆ ತುಂಬ ಪ್ರೀತಿ-ಗೌರವ ಇದೆ. ಅವರು ನನಗೆ ಸಖತ್​ ಬೆಂಬಲ ನೀಡುತ್ತಾರೆ. ನನ್ನ ಬಗ್ಗೆ ಮಾತನಾಡಲು ಕೂಡ ಅವರಲ್ಲಿ ಸಾಕಷ್ಟು ವಿಷಯ ಇದೆ ಅಂದುಕೊಂಡಿದ್ದೇನೆ. ಆದರೆ ಅದೆಲ್ಲವೂ ಆಗಬೇಕು ಎಂದರೆ ಸೂಕ್ತ ಸಮಯ ಬರಬೇಕು’ ಎಂದು ಆಲಿಯಾ ಹೇಳಿದ್ದರು.

ಇದನ್ನೂ ಓದಿ:

ರಾಜಮೌಳಿ ಬಗ್ಗೆ ಆಲಿಯಾಗೆ ನಿಜಕ್ಕೂ ಬೇಸರವಾಗಿದೆಯೇ?; ಪೋಸ್ಟ್ ಡಿಲೀಟ್​ ಮಾಡಿದ್ದಕ್ಕೆ ಕಾರಣ ನೀಡಿದ ನಟಿ

ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್