AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಫೋಟೋ ತೆಗೆದರೆ ಕಾನೂನು ಕ್ರಮ: ಎಚ್ಚರಿಕೆ ನೀಡಿದ ರಣಬೀರ್, ಆಲಿಯಾ ಭಟ್

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್​ ದಂಪತಿಯ ಮಗಳು ರಹಾ ಫೋಟೋ ಮತ್ತು ವಿಡಿಯೋಗಳು ಈಗಾಗಲೇ ವೈರಲ್ ಆಗಿವೆ. ಆದರೆ ಇನ್ಮುಂದೆ ಮಗಳ ಫೋಟೋ ತೆಗೆಯುವಂತಿಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಮಗಳ ಫೋಟೋವನ್ನು ಅನಧಿಕೃತವಾಗಿ ಪ್ರಕಟ ಮಾಡಬಾರದು ಎಂದು ಕೂಡ ಅವರು ಹೇಳಿದ್ದಾರೆ.

ಮಗಳ ಫೋಟೋ ತೆಗೆದರೆ ಕಾನೂನು ಕ್ರಮ: ಎಚ್ಚರಿಕೆ ನೀಡಿದ ರಣಬೀರ್, ಆಲಿಯಾ ಭಟ್
Ranbir Kapoor, Raha, Alia Bhatt
ಮದನ್​ ಕುಮಾರ್​
|

Updated on: Mar 13, 2025 | 4:05 PM

Share

ಸೆಲೆಬ್ರಿಟಿಗಳು ಎಲ್ಲಿಯೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಅದರಲ್ಲೂ ಬಾಲಿವುಡ್ (Bollywood) ಸೆಲೆಬ್ರಿಟಿಗಳ ಹಿಂದೆ ಪಾಪರಾಜಿಗಳು ಇದ್ದೇ ಇರುತ್ತಾರೆ. ಸೆಲೆಬ್ರಿಟಿಗಳ ಮಕ್ಕಳ ಮೇಲೂ ಪಾಪರಾಜಿಗಳ ಕ್ಯಾಮೆರಾ ಕಣ್ಣು ನೆಟ್ಟಿರುತ್ತದೆ. ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್​ ಖಾನ್ ದಂಪತಿಯ ಮಗ ತೈಮೂರ್ ಅಲಿ ಖಾನ್ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದು ಇದೇ ಕಾರಣದಿಂದ. ಈಗ ಆಲಿಯಾ ಭಟ್ (Alia Bhatt) ಮತ್ತು ರಣಬೀರ್ ಕಪೂರ್​ ದಂಪತಿಯ ಮಗಳು ರಹಾ ಫೋಟೋಗಳು ಕೂಡ ವೈರಲ್ ಆಗುತ್ತಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ದಂಪತಿ ಒಂದು ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಮಾರ್ಚ್​ 15ರಂದು ಆಲಿಯಾ ಭಟ್ ಅವರ ಹುಟ್ಟುಹಬ್ಬ. ಎರಡು ದಿನ ಮುಂಚಿತವಾಗಿಯೇ ಮಾಧ್ಯಮ ಪ್ರತಿನಿಧಿಗಳು ಹಾಗೂ ಪಾಪರಾಜಿಗಳ ಜೊತೆ ಆಲಿಯಾ ಭಟ್ ಅವರು ಬರ್ತ್​ಡೇ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಈ ವೇಳೆ ಆಲಿಯಾ ಮತ್ತು ರಣಬೀರ್ ಕಪೂರ್ ಅವರು ಮಗಳ ಬಗ್ಗೆ ಒಂದು ಮನವಿ ಮಾಡಿದ್ದಾರೆ. ಯಾರೂ ಕೂಡ ತಮ್ಮ ಮಗಳ ಫೋಟೋ ತೆಗೆಯಬಾರದು ಮತ್ತು ಅನಧಿಕೃತವಾಗಿ ಬಳಸಬಾರದು ಎಂದು ಅವರು ಹೇಳಿದ್ದಾರೆ.

ಪಾಪರಾಜಿಗಳ ವೃತ್ತಿಗೆ ಆಲಿಯಾ ಭಟ್​ ಮತ್ತು ರಣಬೀರ್ ಕಪೂರ್ ಅವರು ಗೌರವ ನೀಡುತ್ತಾರೆ. ಎಲ್ಲರನ್ನೂ ತಮ್ಮ ಕುಟುಂಬದ ರೀತಿ ಎಂದು ಅವರು ಪರಿಗಣಿಸಿದ್ದಾರೆ. ಹಾಗಾಗಿ ಮಗಳ ಫೋಟೋ ತೆಗೆಯುವುದು ಬೇಡ ಎಂದು ಮನವಿ ಮಾಡಿದ್ದಾರೆ. ಈ ಮನವಿಯನ್ನು ಎಲ್ಲರೂ ಪರಿಗಣಿಸುತ್ತಾರೆ ಎಂಬ ನಂಬಿಕೆ ಅವರಿಗೆ ಇದೆ. ಒಂದು ವೇಳೆ ಕೆಲವರು ಮಾತು ಕೇಳದೇ ಇದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳದೇ ಬೇರೆ ಯಾವುದೇ ಆಯ್ಕೆ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಕೋಟ್ಯಂತರ ರೂಪಾಯಿ ಕಾರು ಇದ್ದರೂ ಆಟೋದಲ್ಲಿ ಪ್ರಯಾಣ ಮಾಡಿದ ಆಲಿಯಾ ಭಟ್
Image
ಮುಖದ ಅಂದ ಹೆಚ್ಚಿಸಿಕೊಳ್ಳಲು ಹೋಗಿ ಪಾರ್ಶ್ವವಾಯುಗೆ ಗುರಿಯಾದ ಆಲಿಯಾ?
Image
ಆಲಿಯಾ ಭಟ್ ಎರಡನೇ ಮಗು ಹೊಂದೋದು ಯಾವಾಗ? ಉತ್ತರ ಕೊಟ್ಟ ನಟಿ
Image
ಮದುವೆ ಆದ ಬಳಿಕ ಹೆಸರು ಬದಲಿಸಿಕೊಂಡ ಆಲಿಯಾ; ಈಗ ಇರೋ ಹೆಸರೇನು?

ಆಲಿಯಾ ಭಟ್, ರಣಬೀರ್ ಕಪೂರ್ ಅವರು ವಿಮಾನ ನಿಲ್ದಾಣದಂತಹ ಜಾಗಗಳಲ್ಲಿ ಕಾಣಿಸಿಕೊಂಡಾಗ ಅವರ ಜೊತೆ ಪುತ್ರಿ ಕೂಡ ಇರುತ್ತಾಳೆ. ಆಕೆಗೆ ಈಗಿನ್ನೂ 2 ವರ್ಷ ವಯಸ್ಸು. ಮಗಳು ಅಲ್ಲಿಂದ ದಾಟಿ ಹೋಗುವ ತನಕ ಅಥವಾ ಆಕೆಯ ಮುಖ ಮುಚ್ಚಿಕೊಳ್ಳುವ ತನಕ ಪಾಪರಾಜಿಗಳು ಕಾಯಬೇಕು ಎಂದು ಆಲಿಯಾ ಹೇಳಿದ್ದಾರೆ. ಮಗಳ ಖಾಸಗಿತನಕ್ಕೆ ಧಕ್ಕೆ ಆಗಬಾರದು ಎಂಬ ಕಾರಣಕ್ಕೆ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ನೋಡಿ: ಬಂಗಾರದಂತೆ ಪಳಪಳನೆ ಹೊಳೆದ ನಟಿ ಆಲಿಯಾ ಭಟ್

ಇತ್ತೀಚೆಗೆ ಒಂದು ವಿಡಿಯೋ ವೈರಲ್ ಆಗಿತ್ತು. ವಿಮಾನ ನಿಲ್ದಾಣದಲ್ಲಿ ರಹಾ ಹೆಸರನ್ನು ಪಾಪರಾಜಿಗಳು ಜೋರಾಗಿ ಕೂಗಿದ್ದರು. ಆಗ ಪಾಪರಾಜಿಗಳ ಕಡೆಗೆ ರಹಾ ಕೈ ಬೀಸಿದಳು. ಆ ಕ್ಷಣ ತುಂಬ ಕ್ಯೂಟ್ ಆಗಿತ್ತು. ಆದರೆ ಎಲ್ಲ ಸಂದರ್ಭ ಒಂದೇ ರೀತಿ ಇರುವುದಿಲ್ಲ. ಹಾಗಾಗಿ ಮಗಳನ್ನು ಪಾಪರಾಜಿಗಳ ಕ್ಯಾಮೆರಾ ಕಣ್ಣಿನಿಂದ ದೂರ ಇಡಲು ಈ ದಂಪತಿ ನಿರ್ಧರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ