AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಕ್​ ಸಿಟಿಯಲ್ಲಿ ಆಲಿಯಾ-ರಣಬೀರ್​ ಮದುವೆ? ರಾಜಸ್ಥಾನದಲ್ಲಿ ಸ್ಟಾರ್​ ಜೋಡಿ

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು.

ಪಿಂಕ್​ ಸಿಟಿಯಲ್ಲಿ ಆಲಿಯಾ-ರಣಬೀರ್​ ಮದುವೆ? ರಾಜಸ್ಥಾನದಲ್ಲಿ ಸ್ಟಾರ್​ ಜೋಡಿ
ರಣಬಿರ್​-ಆಲಿಯಾ
TV9 Web
| Edited By: |

Updated on:Sep 27, 2021 | 9:49 PM

Share

ರಣಬೀರ್​ ಕಪೂರ್ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರೂ ಡೇಟಿಂಗ್​ ಆರಂಭಿಸಿ ಅನೇಕ ವರ್ಷಗಳೇ ಕಳೆದಿವೆ. 2019ರಿಂದಲೂ ಇಬ್ಬರ ಮದುವೆ ವಿಚಾರ ಚರ್ಚೆ ಆಗುತ್ತಲೇ ಇದೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ ಆಲಿಯಾ ಹಾಗೂ ರಣಬೀರ್​ ರಾಜಸ್ಥಾನದಲ್ಲಿ ಮದುವೆ ಆಗಲಿದ್ದಾರೆ ಎಂಬ ಗುಸುಗುಸು ಕೇಳಿ ಬಂದಿದೆ. ಇದಕ್ಕಾಗಿ ಅವರು ಸ್ಥಳ ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು. ಹೀಗಿರುವಾಗಲೇ 2020ರ ಏಪ್ರಿಲ್​ 30ರಂದು ರಣಬೀರ್​ ತಂದೆ ರಿಷಿ ಕಪೂರ್​ ಮೃತಪಟ್ಟಿದ್ದರು. ಇದು ಕಪೂರ್​ ಕುಟುಂಬಕ್ಕೆ ಆಘಾತ ಉಂಟು ಮಾಡಿತ್ತು. ಹೀಗಾಗಿ, ರಣಬೀರ್​ ಮದುವೆಯನ್ನು ಮುಂದೂಡಿದ್ದರು. ಈಗ ಇಬ್ಬರೂ ರಾಜಸ್ಥಾನದಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದಾರೆ ಎನ್ನಲಾಗಿದೆ.

ಮಂಗಳವಾರ (ಸೆಪ್ಟೆಂಬರ್​ 28) ರಣಬೀರ್​ ಕಪೂರ್​ 39ನೇ ಹುಟ್ಟುಹಬ್ಬ. ಈ ದಿನವನ್ನು ವಿಶೇಷವಾಗಿ ಆಚರಿಸಲು ಆಲಿಯಾ ಹಾಗೂ ರಣಬೀರ್​ ಜೋಧ್​ಪುರ್​ಗೆ ತೆರಳಿದ್ದಾರೆ. ಮಂಗಳವಾರ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಅಲ್ಲಿ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಇದೇ ವೇಳೆ ಇಬ್ಬರೂ ಮದುವೆ ಏರ್ಪಡಿಸೋಕೆ ಸೂಕ್ತ ಸ್ಥಳ ಹುಡುಕುತ್ತಿದ್ದಾರೆ ಎನ್ನಲಾಗಿದೆ.

ರಣಬೀರ್​ ಮದುವೆ ವಯಸ್ಸು ಈಗಾಗಲೇ ಮೀರಿದೆ. ಇವರ ಮದುವೆಗೆ ನಾನಾ ವಿಘ್ನಗಳು ಎದುರಾಗುತ್ತಲೇ ಇವೆ. ಇದರಿಂದ ಕುಟುಂಬದವರು ಕೊಂಚ ಚಿಂತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರವೇ ಮದುವೆ ಮಾಡಿ ಮುಗಿಸುವ ಆಲೋಚನೆ ಕುಟುಂಬದ್ದು.

ಇದನ್ನೂ ಓದಿ:3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​? 

ಐಟಮ್​ ಸಾಂಗ್​ಗೆ ಹೆಜ್ಜೆ ಹಾಕಲಿದ್ದಾರೆ ರಣಬೀರ್​ ಕಪೂರ್

Published On - 9:46 pm, Mon, 27 September 21

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್