AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಕ್​ ಸಿಟಿಯಲ್ಲಿ ಆಲಿಯಾ-ರಣಬೀರ್​ ಮದುವೆ? ರಾಜಸ್ಥಾನದಲ್ಲಿ ಸ್ಟಾರ್​ ಜೋಡಿ

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು.

ಪಿಂಕ್​ ಸಿಟಿಯಲ್ಲಿ ಆಲಿಯಾ-ರಣಬೀರ್​ ಮದುವೆ? ರಾಜಸ್ಥಾನದಲ್ಲಿ ಸ್ಟಾರ್​ ಜೋಡಿ
ರಣಬಿರ್​-ಆಲಿಯಾ
TV9 Web
| Edited By: |

Updated on:Sep 27, 2021 | 9:49 PM

Share

ರಣಬೀರ್​ ಕಪೂರ್ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರೂ ಡೇಟಿಂಗ್​ ಆರಂಭಿಸಿ ಅನೇಕ ವರ್ಷಗಳೇ ಕಳೆದಿವೆ. 2019ರಿಂದಲೂ ಇಬ್ಬರ ಮದುವೆ ವಿಚಾರ ಚರ್ಚೆ ಆಗುತ್ತಲೇ ಇದೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ ಆಲಿಯಾ ಹಾಗೂ ರಣಬೀರ್​ ರಾಜಸ್ಥಾನದಲ್ಲಿ ಮದುವೆ ಆಗಲಿದ್ದಾರೆ ಎಂಬ ಗುಸುಗುಸು ಕೇಳಿ ಬಂದಿದೆ. ಇದಕ್ಕಾಗಿ ಅವರು ಸ್ಥಳ ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು. ಹೀಗಿರುವಾಗಲೇ 2020ರ ಏಪ್ರಿಲ್​ 30ರಂದು ರಣಬೀರ್​ ತಂದೆ ರಿಷಿ ಕಪೂರ್​ ಮೃತಪಟ್ಟಿದ್ದರು. ಇದು ಕಪೂರ್​ ಕುಟುಂಬಕ್ಕೆ ಆಘಾತ ಉಂಟು ಮಾಡಿತ್ತು. ಹೀಗಾಗಿ, ರಣಬೀರ್​ ಮದುವೆಯನ್ನು ಮುಂದೂಡಿದ್ದರು. ಈಗ ಇಬ್ಬರೂ ರಾಜಸ್ಥಾನದಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದಾರೆ ಎನ್ನಲಾಗಿದೆ.

ಮಂಗಳವಾರ (ಸೆಪ್ಟೆಂಬರ್​ 28) ರಣಬೀರ್​ ಕಪೂರ್​ 39ನೇ ಹುಟ್ಟುಹಬ್ಬ. ಈ ದಿನವನ್ನು ವಿಶೇಷವಾಗಿ ಆಚರಿಸಲು ಆಲಿಯಾ ಹಾಗೂ ರಣಬೀರ್​ ಜೋಧ್​ಪುರ್​ಗೆ ತೆರಳಿದ್ದಾರೆ. ಮಂಗಳವಾರ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಅಲ್ಲಿ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಇದೇ ವೇಳೆ ಇಬ್ಬರೂ ಮದುವೆ ಏರ್ಪಡಿಸೋಕೆ ಸೂಕ್ತ ಸ್ಥಳ ಹುಡುಕುತ್ತಿದ್ದಾರೆ ಎನ್ನಲಾಗಿದೆ.

ರಣಬೀರ್​ ಮದುವೆ ವಯಸ್ಸು ಈಗಾಗಲೇ ಮೀರಿದೆ. ಇವರ ಮದುವೆಗೆ ನಾನಾ ವಿಘ್ನಗಳು ಎದುರಾಗುತ್ತಲೇ ಇವೆ. ಇದರಿಂದ ಕುಟುಂಬದವರು ಕೊಂಚ ಚಿಂತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರವೇ ಮದುವೆ ಮಾಡಿ ಮುಗಿಸುವ ಆಲೋಚನೆ ಕುಟುಂಬದ್ದು.

ಇದನ್ನೂ ಓದಿ:3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​? 

ಐಟಮ್​ ಸಾಂಗ್​ಗೆ ಹೆಜ್ಜೆ ಹಾಕಲಿದ್ದಾರೆ ರಣಬೀರ್​ ಕಪೂರ್

Published On - 9:46 pm, Mon, 27 September 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್