AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಕ್​ ಸಿಟಿಯಲ್ಲಿ ಆಲಿಯಾ-ರಣಬೀರ್​ ಮದುವೆ? ರಾಜಸ್ಥಾನದಲ್ಲಿ ಸ್ಟಾರ್​ ಜೋಡಿ

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು.

ಪಿಂಕ್​ ಸಿಟಿಯಲ್ಲಿ ಆಲಿಯಾ-ರಣಬೀರ್​ ಮದುವೆ? ರಾಜಸ್ಥಾನದಲ್ಲಿ ಸ್ಟಾರ್​ ಜೋಡಿ
ರಣಬಿರ್​-ಆಲಿಯಾ
TV9 Web
| Edited By: |

Updated on:Sep 27, 2021 | 9:49 PM

Share

ರಣಬೀರ್​ ಕಪೂರ್ ಹಾಗೂ ಆಲಿಯಾ ಭಟ್​ ಪರಸ್ಪರ ಪ್ರೀತಿಸುತ್ತಿದ್ದಾರೆ. ಇಬ್ಬರೂ ಡೇಟಿಂಗ್​ ಆರಂಭಿಸಿ ಅನೇಕ ವರ್ಷಗಳೇ ಕಳೆದಿವೆ. 2019ರಿಂದಲೂ ಇಬ್ಬರ ಮದುವೆ ವಿಚಾರ ಚರ್ಚೆ ಆಗುತ್ತಲೇ ಇದೆ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ವಿಚಾರ ಎಂದರೆ ಆಲಿಯಾ ಹಾಗೂ ರಣಬೀರ್​ ರಾಜಸ್ಥಾನದಲ್ಲಿ ಮದುವೆ ಆಗಲಿದ್ದಾರೆ ಎಂಬ ಗುಸುಗುಸು ಕೇಳಿ ಬಂದಿದೆ. ಇದಕ್ಕಾಗಿ ಅವರು ಸ್ಥಳ ಹುಡುಕುವ ಕಾರ್ಯದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ರಣಬೀರ್​ ಹಾಗೂ ಆಲಿಯಾ ಪ್ರೀತಿ ವಿಚಾರಕ್ಕೆ ಮನೆಯವರ ಒಪ್ಪಿಗೆ ಸಿಕ್ಕಿ ವರ್ಷಗಳೇ ಕಳೆದಿವೆ. 2020ರಲ್ಲಿ ಇಬ್ಬರೂ ಮದುವೆ ಆಗುವ ಆಲೋಚನೆ ಇಟ್ಟುಕೊಂಡಿದ್ದರು. ಇವರದ್ದು ಡೆಸ್ಟಿನೇಷನ್​ ಮದುವೆ ಎನ್ನುವ ಮಾತು ಕೂಡ ಕೇಳಿ ಬಂದಿತ್ತು. ಆದರೆ, ಕೊರೊನಾ ಇವರ ಪ್ಲ್ಯಾನ್​ಅನ್ನು ತಲೆಕೆಳಗೆ ಮಾಡಿತ್ತು. ಹೀಗಿರುವಾಗಲೇ 2020ರ ಏಪ್ರಿಲ್​ 30ರಂದು ರಣಬೀರ್​ ತಂದೆ ರಿಷಿ ಕಪೂರ್​ ಮೃತಪಟ್ಟಿದ್ದರು. ಇದು ಕಪೂರ್​ ಕುಟುಂಬಕ್ಕೆ ಆಘಾತ ಉಂಟು ಮಾಡಿತ್ತು. ಹೀಗಾಗಿ, ರಣಬೀರ್​ ಮದುವೆಯನ್ನು ಮುಂದೂಡಿದ್ದರು. ಈಗ ಇಬ್ಬರೂ ರಾಜಸ್ಥಾನದಲ್ಲಿ ಮದುವೆ ಆಗೋಕೆ ಪ್ಲ್ಯಾನ್​ ರೂಪಿಸಿದ್ದಾರೆ ಎನ್ನಲಾಗಿದೆ.

ಮಂಗಳವಾರ (ಸೆಪ್ಟೆಂಬರ್​ 28) ರಣಬೀರ್​ ಕಪೂರ್​ 39ನೇ ಹುಟ್ಟುಹಬ್ಬ. ಈ ದಿನವನ್ನು ವಿಶೇಷವಾಗಿ ಆಚರಿಸಲು ಆಲಿಯಾ ಹಾಗೂ ರಣಬೀರ್​ ಜೋಧ್​ಪುರ್​ಗೆ ತೆರಳಿದ್ದಾರೆ. ಮಂಗಳವಾರ ಅಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಅಲ್ಲಿ ಅದ್ದೂರಿಯಾಗಿ ಹುಟ್ಟು ಹಬ್ಬ ಆಚರಣೆ ನಡೆಯಲಿದೆ. ಇದೇ ವೇಳೆ ಇಬ್ಬರೂ ಮದುವೆ ಏರ್ಪಡಿಸೋಕೆ ಸೂಕ್ತ ಸ್ಥಳ ಹುಡುಕುತ್ತಿದ್ದಾರೆ ಎನ್ನಲಾಗಿದೆ.

ರಣಬೀರ್​ ಮದುವೆ ವಯಸ್ಸು ಈಗಾಗಲೇ ಮೀರಿದೆ. ಇವರ ಮದುವೆಗೆ ನಾನಾ ವಿಘ್ನಗಳು ಎದುರಾಗುತ್ತಲೇ ಇವೆ. ಇದರಿಂದ ಕುಟುಂಬದವರು ಕೊಂಚ ಚಿಂತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಶೀಘ್ರವೇ ಮದುವೆ ಮಾಡಿ ಮುಗಿಸುವ ಆಲೋಚನೆ ಕುಟುಂಬದ್ದು.

ಇದನ್ನೂ ಓದಿ:3D ರಾಮಾಯಣ: ರಾಮನ ಪಾತ್ರಕ್ಕೆ ಮಹೇಶ್​ ಬಾಬು ಬದಲಿಗೆ ರಣಬೀರ್ ಕಪೂರ್​? 

ಐಟಮ್​ ಸಾಂಗ್​ಗೆ ಹೆಜ್ಜೆ ಹಾಕಲಿದ್ದಾರೆ ರಣಬೀರ್​ ಕಪೂರ್

Published On - 9:46 pm, Mon, 27 September 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು