AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಕಪೂರ್-ಆಲಿಯಾ ಭಟ್​ ಮನೆಗೆ ಬಂತು ಲಕ್ಷುರಿ ಲೆಕ್ಸಸ್ ಕಾರು

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಭಾರತಕ್ಕೆ ಮರಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಇವರು ಕಾಣಿಸಿಕೊಂಡರು. ಈ ವೇಳೆ ಅವರನ್ನು ಪಿಕ್ ಮಾಡಲು ಎಂಪಿವಿ ವೆಹಿಕಲ್ ಇತ್ತು. ಎಂಪಿವಿ ಎಂದರೆ ಮಲ್ಟಿ ಪರ್ಪಸ್ ವೆಹಿಕಲ್. ಹಲವು ಫ್ಯೂಚರ್​ಗಳನ್ನು ಈ ಕಾರಿನಲ್ಲಿ ನೀಡಲಾಗಿದೆ.

ರಣಬೀರ್ ಕಪೂರ್-ಆಲಿಯಾ ಭಟ್​ ಮನೆಗೆ ಬಂತು ಲಕ್ಷುರಿ ಲೆಕ್ಸಸ್ ಕಾರು
ರಣಬೀರ್-ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Jun 04, 2024 | 9:08 AM

Share

ಬಾಲಿವುಡ್ ಸೆಲೆಬ್ರಿಟಿ ಜೋಡಿ ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ ಕಾರುಗಳ ಬಗ್ಗೆ ಕ್ರೇಜ್ ಹೊಂದಿದ್ದಾರೆ. ಅವರ ಬಳಿ ಹಲವು ದುಬಾರಿ ಕಾರುಗಳು ಇವೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಪ್ರೀ ವೆಡ್ಡಿಂಗ್ ಸೆಲೆಬ್ರೇಷನ್​ಗಾಗಿ ಈ ದಂಪತಿ ಇಟಲಿಗೆ ತೆರಳಿದ್ದರು. ಇತ್ತೀಚೆಗೆ ಇವರು ಭಾರತಕ್ಕೆ ಮರಳಿದ್ದಾರೆ. ಈ ವೇಳೆ ಅವರ ಹೊಸ ಕಾರಿನ ಬಗ್ಗೆ ಮಾಹಿತಿ ಸಿಕ್ಕಿದೆ. ಈ ದಂಪತಿ ಲಕ್ಷುರಿ ಲೆಕ್ಸಸ್ ಎಲ್​ಎಂ ಕಾರನ್ನು ಖರೀದಿ ಮಾಡಿದೆ. ಇದರ ಆನ್​ರೋಡ್ ಬೆಲೆ 2.5 ಕೋಟಿ ರೂಪಾಯಿ ಇದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಭಾರತಕ್ಕೆ ಮರಳಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಇವರು ಕಾಣಿಸಿಕೊಂಡರು. ಈ ವೇಳೆ ಅವರನ್ನು ಪಿಕ್ ಮಾಡಲು ಎಂಪಿವಿ ವೆಹಿಕಲ್ ಇತ್ತು. ಎಂಪಿವಿ ಎಂದರೆ ಮಲ್ಟಿ ಪರ್ಪಸ್ ವೆಹಿಕಲ್. ಹಲವು ಫ್ಯೂಚರ್​ಗಳನ್ನು ಈ ಕಾರಿನಲ್ಲಿ ನೀಡಲಾಗಿದೆ. ಮಗುವಿನ ಜೊತೆಗಿನ ಓಡಾಟಕ್ಕೆ ದಂಪತಿ ಈ ಕಾರನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ.

ಲೆಕ್ಸಸ್ ಎಲ್​ಎಂ 7 ಸೀಟರ್ ಕಾರು. ಈ ಕಾರಿನಲ್ಲಿ ಸಾಕಷ್ಟು ಜಾಗ ಇದೆ. ಇದರಲ್ಲಿ ನಾಲ್ಕು ಸೀಟರ್​ನ ಮಾಡಿ ಬೂಟ್​ ಸ್ಪೇಸ್​ನ ಹಿರಿದಾಗಿಸೋ ಆಯ್ಕೆಯೂ ಇದೆ.  ರಣಬೀರ್ ಹಾಗೂ ಆಲಿಯಾ ಬಳಿ ಇನ್ನಷ್ಟು ದುಬಾರಿ ಕಾರುಗಳು ಇವೆ. ಬೆಂಟ್ಲಿ ಜಿಟಿ ವಿ8 (6 ಕೋಟಿ ರೂಪಾಯಿ), ಲ್ಯುಸಿಡ್ ಸಫಾಯರ್​ (5.2 ಕೋಟಿ ರೂಪಾಯಿ), ರೇಂಜ್ ರೋವರ್ ಸೇರಿ ಹಲವು ಕಾರುಗಳು ಇವರ ಬಳಿ ಇವೆ.

ಇದನ್ನೂ ಓದಿ: ರಣಬೀರ್ ಕಪೂರ್ ಒಡೆತನದ 8 ಕೋಟಿ ರೂ. ಕಾರಿನ ಹಿಂದೆ ಬಿದ್ದ ಫ್ಯಾನ್ಸ್; ಅಪ್ಸೆಟ್ ಆದ ನಟ ಮಾಡಿದ್ದೇನು?

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ‘ರಾಮಾಯಣ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಬೇಕಿತ್ತು. ಆದರೆ, ಆಲಿಯಾ ಈ ಆಫರ್​ನ ರಿಜೆಕ್ಟ್ ಮಾಡಿದ್ದರು. ರಣಬೀರ್ ಸದ್ಯ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ. ನಿತೇಶ್ ತಿವಾರಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ಆಲಿಯಾ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು