AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮನೆ ಒಳಗೆ ಏನು ಬೇಕಾದರೂ ಆಗಬಹುದು’; ಕಾನೂನು ಹೋರಾಟಕ್ಕೆ ಮುಂದಾದ ಆಲಿಯಾ ಭಟ್

ಪಾಪರಾಜಿಗಳು ಖಾಸಗಿತನವನ್ನು ಆಕ್ರಮಿಸಿಕೊಂಡಿದ್ದಾರೆ. ನನ್ನ ಮನೆ ಒಳಗೆ ಏನೂ ಬೇಕಾದರೂ ನಡೆಯಬಹುದು. ಅದನ್ನು ನೀವು ಚಿತ್ರೀಕರಿಸಬಾರದು ಎಂದಿದ್ದಾರೆ ರಣಬೀರ್ ಕಪೂರ್.

‘ನನ್ನ ಮನೆ ಒಳಗೆ ಏನು ಬೇಕಾದರೂ ಆಗಬಹುದು’; ಕಾನೂನು ಹೋರಾಟಕ್ಕೆ ಮುಂದಾದ ಆಲಿಯಾ ಭಟ್
ರಣಬೀರ್-ಆಲಿಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 10, 2023 | 8:05 AM

ಪಾಪರಾಜಿಗಳು (Paparazzi) ಯಾವಾಗಲೂ ಸೆಲೆಬ್ರಿಟಿಗಳ ಹಿಂದೇ ಇರುತ್ತಾರೆ. ಇದನ್ನು ಸಹಿಸಿಕೊಳ್ಳೋದು ಅನೇಕ ಬಾರಿ ಅವರಿಗೆ ಕಷ್ಟ ಆಗುತ್ತದೆ. ಆದರೆ, ಬೇರೆ ದಾರಿ ಇಲ್ಲ. ಆದರೆ, ಅವರು ಮಿತಿಮೀರಿ ನಡೆದುಕೊಂಡರೆ ಅದನ್ನು ಸಹಿಸಿಕೊಳ್ಳೋಕೆ ಸಾಧ್ಯವೇ ಇಲ್ಲ. ಈಗ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಅವರು ಪಾಪರಾಜಿಗಳ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದಾರೆ. ಆಲಿಯಾ ಭಟ್ ಅವರು ಮನೆಯಲ್ಲಿ ನಿಂತಿದ್ದಾಗ ಕೆಲ ಪಾಪರಾಜಿಗಳು ಫೋಟೋ ಕ್ಲಿಕ್ಕಿಸಿದ್ದರು. ಇದು ಸಖತ್ ವೈರಲ್ ಆಗಿತ್ತು. ಇದರ ವಿರುದ್ಧ ಈ ದಂಪತಿ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿದ್ದಾರೆ.

ಏನಿದು ಪ್ರಕರಣ?

ಕೆಲ ದಿನಗಳ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಒಂದು ವೈರಲ್ ಆಗಿತ್ತು. ಆಲಿಯಾ ಭಟ್ ಅವರು ಮನೆಯ ಬಾಲ್ಕನಿಯಲ್ಲಿ ನಿಂತಿದ್ದಾಗ ಪಕ್ಕದ ಮನೆಯ ಟೆರೇಸ್ ಏರಿದ್ದ ಕೆಲ ಪಾಪರಾಜಿಗಳು ಆಲಿಯಾ ಭಟ್ ಫೋಟೋ ಕ್ಲಿಕ್ ಮಾಡಿ ವೈರಲ್ ಮಾಡಿದ್ದರು. ಇದನ್ನು ಶೇರ್ ಮಾಡಿಕೊಂಡಿದ್ದ ಆಲಿಯಾ ಖಾಸಗಿತನಕ್ಕೆ ಧಕ್ಕೆ ಆಗಿದೆ ಎಂದು ಹೇಳಿದ್ದರು. ನಟಿಯನ್ನು ಅನೇಕ ಸೆಲೆಬ್ರಿಟಿಗಳು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಈ ವಿಚಾರದ ಬಗ್ಗೆ ರಣಬೀರ್ ಕಪೂರ್ ಮಾತನಾಡಿದ್ದಾರೆ.

ಇದು ಕೊಳಕು ಎಂದ ರಣಬೀರ್

ಮಿಸ್ ಮಾಲಿನಿ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಣಬೀರ್ ಕಪೂರ್, ‘ಅವರು ಖಾಸಗಿತನವನ್ನು ಆಕ್ರಮಿಸಿಕೊಂಡಿದ್ದಾರೆ. ನನ್ನ ಮನೆ ಒಳಗೆ ಏನೂ ಬೇಕಾದರೂ ನಡೆಯಬಹುದು. ಅದನ್ನು ನೀವು ಚಿತ್ರೀಕರಿಸಬಾರದು. ಏಕೆಂದರೆ ಅದು ನನ್ನ ಮನೆ. ನಾವು ಇದನ್ನು ಕಾನೂನಾತ್ಮಕವಾಗಿ ಡೀಲ್ ಮಾಡುತ್ತಿದ್ದೇವೆ. ನಾನು ಅದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ. ಅದು ತುಂಬಾ ಕೊಳಕು ಎಂದಷ್ಟೇ ಹೇಳಬಹುದು’ ಎಂದಿದ್ದಾರೆ.

ಇದನ್ನೂ ಓದಿ
Image
‘ಪ್ರೀತಿಯಲ್ಲಿ ಕೆಲವೊಮ್ಮೆ ಸುಳ್ಳು ಹೇಳಿದರೆ ಒಳ್ಳೆಯದು’; ಪ್ರೀತಿ-ಬ್ರೇಕಪ್ ಬಗ್ಗೆ ಮಾತನಾಡಿದ ರಣಬೀರ್ ಕಪೂರ್
Image
Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​
Image
Ranbir Kapoor: ಆ ಮೂರು ಸಿನಿಮಾಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು: ರಣಬೀರ್ ಕಪೂರ್
Image
Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

ಇದನ್ನೂ ಓದಿ: ‘ಪ್ರೀತಿಯಲ್ಲಿ ಕೆಲವೊಮ್ಮೆ ಸುಳ್ಳು ಹೇಳಿದರೆ ಒಳ್ಳೆಯದು’; ಪ್ರೀತಿ-ಬ್ರೇಕಪ್ ಬಗ್ಗೆ ಮಾತನಾಡಿದ ರಣಬೀರ್ ಕಪೂರ್

ಪಾಪರಾಜಿಗಳಿಂದ ಅನೇಕರಿಗೆ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ, ರಣಬೀರ್​ಗೆ ಅವರ ಬಗ್ಗೆ ಗೌರವ ಇದೆ. ‘ನಾನು ಪಾಪರಾಜಿಗಳನ್ನು ಗೌರವಿಸುತ್ತೇನೆ. ಪಾಪರಾಜಿಗಳು ಚಿತ್ರರಂಗದ ಒಂದು ಭಾಗ ಅನ್ನೋದು ನನ್ನ ಭಾವನೆ. ಅವರು ನಮ್ಮೊಂದಿಗೆ ಕೆಲಸ ಮಾಡುತ್ತಾರೆ, ನಾವು ಅವರೊಂದಿಗೆ ಕೆಲಸ ಮಾಡುತ್ತೇವೆ. ಆದರೆ, ಕೆಲವರು ಈ ರೀತಿ ಮಾಡಿದಾಗ ಮುಜುಗರ ಆಗುತ್ತದೆ’ ಎಂದು ರಣಬೀರ್ ಹೇಳಿದ್ದಾರೆ.

ಇದನ್ನೂ ಓದಿ: Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​

ರಣಬೀರ್ ಕಪೂರ್ ನಟನೆಯ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಮಾರ್ಚ್​ 8ರಂದು ರಿಲೀಸ್ ಆಯಿತು. ಈ ಚಿತ್ರ ಮೊದಲ ದಿನ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಅಕ್ಷಯ್ ಕುಮಾರ್, ಕಾರ್ತಿಕ್ ಆರ್ಯನ್ ಸಿನಿಮಾಗಳ ಕಲೆಕ್ಷನ್​​ಗೆ ಹೋಲಿಕೆ ಮಾಡಿದರೆ ಈ ಚಿತ್ರ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ ಎನ್ನಬಹುದು. ಆದರೆ, ಕಳೆದ ವರ್ಷ ರಿಲೀಸ್ ಆದ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಚಿತ್ರದ ಗಳಿಕೆಗೆ ಹೋಲಿಸಿದರೆ ಈ ಚಿತ್ರದ ಗಳಿಕೆ ಡಲ್ ಎನ್ನಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ
ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತ