AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು
ರಣಬೀರ್-ರಹಾ-ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Mar 28, 2024 | 8:54 AM

Share

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಗಳು ರಹಾ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ಈ ಸ್ಟಾರ್ ದಂಪತಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಮಗಳ ಜೊತೆ ಪೋಸ್ ಕೊಡುತ್ತಾರೆ. ರಹಾ ಫೋಟೋ ಎಲ್ಲ ಕಡೆ ವೈರಲ್ ಆಗಿದೆ. ಈಗ ಆಕೆ ಬಾಲಿವುಡ್​ನ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನ್ನುವ ಖ್ಯಾತಿಗೆ ರಹಾ ಪಾತ್ರಳಾಗಲಿದ್ದಾಳೆ. ಇದಕ್ಕೆ ಕಾರಣ ಆಗಿರೋದು ಆಲಿಯಾ ಹಾಗೂ ರಣಬೀರ್ ಕಪೂರ್ ಅವರ ನಿರ್ಧಾರ.

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಬಾಂದ್ರಾದಲ್ಲಿ ಈ ದಂಪತಿ ಹೊಸ ಮನೆ ಕಟ್ಟಿಸುತ್ತಿದ್ದಾರೆ. ಈ ಮನೆಯನ್ನು ಮಗಳು ರಹಾ ಹೆಸರಲ್ಲಿ ನೋಂದಣಿ ಮಾಡಿಸಲು ದಂಪತಿ ನಿರ್ಧರಿಸಿದ್ದಾರೆ.

ಬಾಂದ್ರಾದಲ್ಲಿ ಜಾಗದ ಬೆಲೆ ಗಗನಕ್ಕೇರಿದೆ. ಇಂಥ ಜಾಗದಲ್ಲಿ ಆಲಿಯಾ-ರಣಬೀರ್ ಮನೆ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಎಂದರೆ, ಈ ಮನೆಯನ್ನು ಸಾಕಷ್ಟು ಐಷಾರಾಮಿ ಆಗಿ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಕನಿಷ್ಠ 250 ಕೋಟಿ ರೂಪಾಯಿ ವೆಚ್ಛ ತಗುಲಿದೆ ಎನ್ನಲಾಗುತ್ತಿದೆ. ಈ ಮನೆ ಶಾರುಖ್ ಖಾನ್ ಅವರ ಮನ್ನತ್ ಹಾಗೂ ಅಮಿತಾಭ್ ಬಚ್ಚನ್ ಅವರ ‘ಜಲ್ಸಾ’ ಸಮೀಪವೇ ಇದೆ.

ಒಂದೊಮ್ಮೆ ಈ ಮನೆ ರಹಾ ಹೆಸರಲ್ಲಿ ನೋಂದಣಿ ಆಗಿದ್ದೇ ಹೌದಾದಲ್ಲಿ ಆಕೆ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನಿಸಿಕೊಳ್ಳಲಿದ್ದಾಳೆ. ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್ ಇತ್ತೀಚೆಗೆ ಬಾಂದ್ರಾದಲ್ಲಿ 15 ಕೋಟಿ ರೂಪಾಯಿ ಮನೆ ಖರೀದಿಸಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್ ಒಳ್ಳೆಯ ನಟಿ ಮಾತ್ರವಲ್ಲ, ಒಳ್ಳೆಯ ಉದ್ಯಮಿ ಸಹ ಹೌದು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅವರು ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಾಣುತ್ತಿದ್ದಾರೆ. ರಣಬೀರ್ ಕಪೂರ್ ಅವರು ಸದ್ಯ ‘ರಾಮಾಯಣ’ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?