AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು
ರಣಬೀರ್-ರಹಾ-ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Mar 28, 2024 | 8:54 AM

Share

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಗಳು ರಹಾ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ಈ ಸ್ಟಾರ್ ದಂಪತಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಮಗಳ ಜೊತೆ ಪೋಸ್ ಕೊಡುತ್ತಾರೆ. ರಹಾ ಫೋಟೋ ಎಲ್ಲ ಕಡೆ ವೈರಲ್ ಆಗಿದೆ. ಈಗ ಆಕೆ ಬಾಲಿವುಡ್​ನ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನ್ನುವ ಖ್ಯಾತಿಗೆ ರಹಾ ಪಾತ್ರಳಾಗಲಿದ್ದಾಳೆ. ಇದಕ್ಕೆ ಕಾರಣ ಆಗಿರೋದು ಆಲಿಯಾ ಹಾಗೂ ರಣಬೀರ್ ಕಪೂರ್ ಅವರ ನಿರ್ಧಾರ.

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಬಾಂದ್ರಾದಲ್ಲಿ ಈ ದಂಪತಿ ಹೊಸ ಮನೆ ಕಟ್ಟಿಸುತ್ತಿದ್ದಾರೆ. ಈ ಮನೆಯನ್ನು ಮಗಳು ರಹಾ ಹೆಸರಲ್ಲಿ ನೋಂದಣಿ ಮಾಡಿಸಲು ದಂಪತಿ ನಿರ್ಧರಿಸಿದ್ದಾರೆ.

ಬಾಂದ್ರಾದಲ್ಲಿ ಜಾಗದ ಬೆಲೆ ಗಗನಕ್ಕೇರಿದೆ. ಇಂಥ ಜಾಗದಲ್ಲಿ ಆಲಿಯಾ-ರಣಬೀರ್ ಮನೆ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಎಂದರೆ, ಈ ಮನೆಯನ್ನು ಸಾಕಷ್ಟು ಐಷಾರಾಮಿ ಆಗಿ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಕನಿಷ್ಠ 250 ಕೋಟಿ ರೂಪಾಯಿ ವೆಚ್ಛ ತಗುಲಿದೆ ಎನ್ನಲಾಗುತ್ತಿದೆ. ಈ ಮನೆ ಶಾರುಖ್ ಖಾನ್ ಅವರ ಮನ್ನತ್ ಹಾಗೂ ಅಮಿತಾಭ್ ಬಚ್ಚನ್ ಅವರ ‘ಜಲ್ಸಾ’ ಸಮೀಪವೇ ಇದೆ.

ಒಂದೊಮ್ಮೆ ಈ ಮನೆ ರಹಾ ಹೆಸರಲ್ಲಿ ನೋಂದಣಿ ಆಗಿದ್ದೇ ಹೌದಾದಲ್ಲಿ ಆಕೆ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನಿಸಿಕೊಳ್ಳಲಿದ್ದಾಳೆ. ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್ ಇತ್ತೀಚೆಗೆ ಬಾಂದ್ರಾದಲ್ಲಿ 15 ಕೋಟಿ ರೂಪಾಯಿ ಮನೆ ಖರೀದಿಸಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್ ಒಳ್ಳೆಯ ನಟಿ ಮಾತ್ರವಲ್ಲ, ಒಳ್ಳೆಯ ಉದ್ಯಮಿ ಸಹ ಹೌದು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅವರು ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಾಣುತ್ತಿದ್ದಾರೆ. ರಣಬೀರ್ ಕಪೂರ್ ಅವರು ಸದ್ಯ ‘ರಾಮಾಯಣ’ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ