AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು
ರಣಬೀರ್-ರಹಾ-ಆಲಿಯಾ
Follow us
ರಾಜೇಶ್ ದುಗ್ಗುಮನೆ
|

Updated on: Mar 28, 2024 | 8:54 AM

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಗಳು ರಹಾ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ಈ ಸ್ಟಾರ್ ದಂಪತಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಮಗಳ ಜೊತೆ ಪೋಸ್ ಕೊಡುತ್ತಾರೆ. ರಹಾ ಫೋಟೋ ಎಲ್ಲ ಕಡೆ ವೈರಲ್ ಆಗಿದೆ. ಈಗ ಆಕೆ ಬಾಲಿವುಡ್​ನ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನ್ನುವ ಖ್ಯಾತಿಗೆ ರಹಾ ಪಾತ್ರಳಾಗಲಿದ್ದಾಳೆ. ಇದಕ್ಕೆ ಕಾರಣ ಆಗಿರೋದು ಆಲಿಯಾ ಹಾಗೂ ರಣಬೀರ್ ಕಪೂರ್ ಅವರ ನಿರ್ಧಾರ.

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಬಾಂದ್ರಾದಲ್ಲಿ ಈ ದಂಪತಿ ಹೊಸ ಮನೆ ಕಟ್ಟಿಸುತ್ತಿದ್ದಾರೆ. ಈ ಮನೆಯನ್ನು ಮಗಳು ರಹಾ ಹೆಸರಲ್ಲಿ ನೋಂದಣಿ ಮಾಡಿಸಲು ದಂಪತಿ ನಿರ್ಧರಿಸಿದ್ದಾರೆ.

ಬಾಂದ್ರಾದಲ್ಲಿ ಜಾಗದ ಬೆಲೆ ಗಗನಕ್ಕೇರಿದೆ. ಇಂಥ ಜಾಗದಲ್ಲಿ ಆಲಿಯಾ-ರಣಬೀರ್ ಮನೆ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಎಂದರೆ, ಈ ಮನೆಯನ್ನು ಸಾಕಷ್ಟು ಐಷಾರಾಮಿ ಆಗಿ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಕನಿಷ್ಠ 250 ಕೋಟಿ ರೂಪಾಯಿ ವೆಚ್ಛ ತಗುಲಿದೆ ಎನ್ನಲಾಗುತ್ತಿದೆ. ಈ ಮನೆ ಶಾರುಖ್ ಖಾನ್ ಅವರ ಮನ್ನತ್ ಹಾಗೂ ಅಮಿತಾಭ್ ಬಚ್ಚನ್ ಅವರ ‘ಜಲ್ಸಾ’ ಸಮೀಪವೇ ಇದೆ.

ಒಂದೊಮ್ಮೆ ಈ ಮನೆ ರಹಾ ಹೆಸರಲ್ಲಿ ನೋಂದಣಿ ಆಗಿದ್ದೇ ಹೌದಾದಲ್ಲಿ ಆಕೆ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನಿಸಿಕೊಳ್ಳಲಿದ್ದಾಳೆ. ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್ ಇತ್ತೀಚೆಗೆ ಬಾಂದ್ರಾದಲ್ಲಿ 15 ಕೋಟಿ ರೂಪಾಯಿ ಮನೆ ಖರೀದಿಸಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್ ಒಳ್ಳೆಯ ನಟಿ ಮಾತ್ರವಲ್ಲ, ಒಳ್ಳೆಯ ಉದ್ಯಮಿ ಸಹ ಹೌದು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅವರು ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಾಣುತ್ತಿದ್ದಾರೆ. ರಣಬೀರ್ ಕಪೂರ್ ಅವರು ಸದ್ಯ ‘ರಾಮಾಯಣ’ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು