AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ.

ಅತೀ ಶ್ರೀಮಂತ ಸ್ಟಾರ್ ಕಿಡ್ ಆಗಲಿದ್ದಾರೆ ರಣಬೀರ್-ಆಲಿಯಾ ಮಗಳು
ರಣಬೀರ್-ರಹಾ-ಆಲಿಯಾ
ರಾಜೇಶ್ ದುಗ್ಗುಮನೆ
|

Updated on: Mar 28, 2024 | 8:54 AM

Share

ನಟಿ ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಮಗಳು ರಹಾ ಎಲ್ಲರ ಗಮನ ಸೆಳೆಯುತ್ತಿದ್ದಾಳೆ. ಈ ಸ್ಟಾರ್ ದಂಪತಿ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಮಗಳ ಜೊತೆ ಪೋಸ್ ಕೊಡುತ್ತಾರೆ. ರಹಾ ಫೋಟೋ ಎಲ್ಲ ಕಡೆ ವೈರಲ್ ಆಗಿದೆ. ಈಗ ಆಕೆ ಬಾಲಿವುಡ್​ನ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನ್ನುವ ಖ್ಯಾತಿಗೆ ರಹಾ ಪಾತ್ರಳಾಗಲಿದ್ದಾಳೆ. ಇದಕ್ಕೆ ಕಾರಣ ಆಗಿರೋದು ಆಲಿಯಾ ಹಾಗೂ ರಣಬೀರ್ ಕಪೂರ್ ಅವರ ನಿರ್ಧಾರ.

ರಣಬೀರ್ ಕಪೂರ್ ಹಾಗೂ ಆಲಿಯಾಗೆ 2022ರಲ್ಲಿ ಮದುವೆ ಆಯಿತು. ಅದೇ ವರ್ಷ ಈ ದಂಪತಿಗೆ ಹೆಣ್ಣ ಮಗು ಜನಿಸಿತು. ಆಕೆಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈಗ ಈ ದಂಪತಿ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಬಾಂದ್ರಾದಲ್ಲಿ ಈ ದಂಪತಿ ಹೊಸ ಮನೆ ಕಟ್ಟಿಸುತ್ತಿದ್ದಾರೆ. ಈ ಮನೆಯನ್ನು ಮಗಳು ರಹಾ ಹೆಸರಲ್ಲಿ ನೋಂದಣಿ ಮಾಡಿಸಲು ದಂಪತಿ ನಿರ್ಧರಿಸಿದ್ದಾರೆ.

ಬಾಂದ್ರಾದಲ್ಲಿ ಜಾಗದ ಬೆಲೆ ಗಗನಕ್ಕೇರಿದೆ. ಇಂಥ ಜಾಗದಲ್ಲಿ ಆಲಿಯಾ-ರಣಬೀರ್ ಮನೆ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷ ಎಂದರೆ, ಈ ಮನೆಯನ್ನು ಸಾಕಷ್ಟು ಐಷಾರಾಮಿ ಆಗಿ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಕನಿಷ್ಠ 250 ಕೋಟಿ ರೂಪಾಯಿ ವೆಚ್ಛ ತಗುಲಿದೆ ಎನ್ನಲಾಗುತ್ತಿದೆ. ಈ ಮನೆ ಶಾರುಖ್ ಖಾನ್ ಅವರ ಮನ್ನತ್ ಹಾಗೂ ಅಮಿತಾಭ್ ಬಚ್ಚನ್ ಅವರ ‘ಜಲ್ಸಾ’ ಸಮೀಪವೇ ಇದೆ.

ಒಂದೊಮ್ಮೆ ಈ ಮನೆ ರಹಾ ಹೆಸರಲ್ಲಿ ನೋಂದಣಿ ಆಗಿದ್ದೇ ಹೌದಾದಲ್ಲಿ ಆಕೆ ಅತ್ಯಂತ ಶ್ರೀಮಂತ ಸ್ಟಾರ್ ಕಿಡ್ ಎನಿಸಿಕೊಳ್ಳಲಿದ್ದಾಳೆ. ರಣಬೀರ್ ಕಪೂರ್ ಅವರ ತಾಯಿ ನೀತು ಕಪೂರ್ ಇತ್ತೀಚೆಗೆ ಬಾಂದ್ರಾದಲ್ಲಿ 15 ಕೋಟಿ ರೂಪಾಯಿ ಮನೆ ಖರೀದಿಸಿದ್ದಾರೆ.

ಇದನ್ನೂ ಓದಿ: ಆಲಿಯಾ ಭಟ್ ಒಳ್ಳೆಯ ನಟಿ ಮಾತ್ರವಲ್ಲ, ಒಳ್ಳೆಯ ಉದ್ಯಮಿ ಸಹ ಹೌದು

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಅವರು ಸಿನಿಮಾ ರಂಗದಲ್ಲಿ ದೊಡ್ಡ ಗೆಲುವು ಕಾಣುತ್ತಿದ್ದಾರೆ. ರಣಬೀರ್ ಕಪೂರ್ ಅವರು ಸದ್ಯ ‘ರಾಮಾಯಣ’ ಸಿನಿಮಾದಲ್ಲಿ ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ