AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

Alia Bhatt Ranbir Kapoor Wedding Gifts: ಆಲಿಯಾ ಭಟ್​-ರಣಬೀರ್​ ಕಪೂರ್​ ಮದುವೆಗೆ ಸಂಬಂಧಿಕರು ಮತ್ತು ಸ್ನೇಹಿತರು ದುಬಾರಿ ಉಡುಗೊರೆ ನೀಡಿದ್ದಾರೆ. ರಣಬೀರ್​ ಮಾಜಿ ಪ್ರೇಯಸಿಯರ ಕಡೆಯಿಂದಲೂ ಗಿಫ್ಟ್​ ಬಂದಿದೆ.

ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ
ಆಲಿಯಾ ಭಟ್​, ರಣಬೀರ್​ ಕಪೂರ್​, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್
TV9 Web
| Edited By: |

Updated on: Apr 18, 2022 | 9:08 AM

Share

ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಇತ್ತೀಚೆಗೆ ಹಸೆಮಣೆ ಏರಿದರು. ಏ.14ರಂದು ಅದ್ದೂರಿಯಾಗಿ ಅವರ ವಿವಾಹ (Alia Bhatt Ranbir Kapoor Wedding) ಸಮಾರಂಭ ನೆರವೇರಿತು. ಬಾಲಿವುಡ್​ನ ಕ್ಯೂಟ್​ ಜೋಡಿ ಎಂದು ಕರೆಸಿಕೊಳ್ಳುವ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ತಮ್ಮ ಮದುವೆಗೆ ಕೆಲವೇ ಕೆಲವು ಮಂದಿಯನ್ನು ಮಾತ್ರ ಆಹ್ವಾನಿಸಿದ್ದರು. ಸಂಬಂಧಿಕರು, ಆಪ್ತ ಸ್ನೇಹಿತರು ಮಾತ್ರವೇ ಈ ಮದುವೆಯಲ್ಲಿ ಭಾಗಿ ಆಗಿದ್ದರು. ಬಾಲಿವುಡ್​ ಸೆಲೆಬ್ರಿಟಿಗಳ ವಿವಾಹ ಎಂದರೆ ಅದ್ದೂರಿಯಾಗಿರಲೇ ಬೇಕು. ಅದಕ್ಕೆ ತಕ್ಕಂತೆಯೇ ನವದಂಪತಿಗೆ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಗಳು ಬಂದಿವೆ. ಕರೀನಾ ಕಪೂರ್​, ರಣವೀರ್​ ಸಿಂಗ್​, ಕತ್ರಿನಾ ಕೈಫ್​ (Katrina Kaif), ವರುಣ್​ ಧವನ್​, ಸಿದ್ದಾರ್ಥ್​ ಮಲ್ಹೋತ್ರ, ದೀಪಿಕಾ ಪಡುಕೋಣೆ (Deepika Padukone) ಮುಂತಾದವರು ಲಕ್ಷಾಂತರ ರೂಪಾಯಿ ಮೌಲ್ಯದ ಗಿಫ್ಟ್​ ನೀಡಿದ್ದಾರೆ. ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಅದರ ಅನುಸಾರ ಯಾರು ಯಾವ ಉಡುಗೊರೆ ಕೊಟ್ಟಿದ್ದಾರೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ರಣಬೀರ್​ ಕಪೂರ್​ ಅವರ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ ಅವರು ತಲಾ 15 ಲಕ್ಷ ಬೆಲೆಬಾಳುವ ಎರಡು ವಾಚ್​ಗಳನ್ನು ನವದಂಪತಿಗೆ ನೀಡಿದ್ದಾರೆ. ರಣವೀರ್​ ಸಿಂಗ್​​ ಅವರು 80 ಲಕ್ಷ ರೂಪಾಯಿ ಬೆಲೆಯ ಬೈಕ್​ ಉಡುಗೊರೆಯಾಗಿ ಕೊಟ್ಟಿದ್ದಾರೆ. ಕರೀನಾ ಕಪೂರ್​ ಅವರು ಡೈಮಂಡ್​ ನೆಕ್ಲೆಸ್​ ನೀಡಿದ್ದು, ಅದರ ಬೆಲೆ 3.1 ಲಕ್ಷ ರೂಪಾಯಿ ಎಂದು ಹೇಳಲಾಗಿದೆ. ಸಿದ್ದಾರ್ಥ್​ ಮಲ್ಹೋತ್ರ ಅವರು 3 ಲಕ್ಷ ರೂಪಾಯಿ ಬೆಲೆ ಬಾಳುವ ಹ್ಯಾಂಡ್​ಬ್ಯಾಗ್​ ಅನ್ನು ಆಲಿಯಾಗೆ ಗಿಫ್ಟ್​ ಮಾಡಿದ್ದಾರೆ ಎಂದು ವರದಿ ಆಗಿದೆ.

ಹಿಂದಿ ಚಿತ್ರರಂಗದಲ್ಲಿ ಅನೇಕ ಸ್ನೇಹಿತರನ್ನು ಹೊಂದಿದ್ದಾರೆ ಆಲಿಯಾ ಮತ್ತು ರಣಬೀರ್​. ಎಲ್ಲರೂ ಕೂಡ ದುಬಾರಿ ಉಡುಗೊರೆಯನ್ನೇ ನೀಡಿದ್ದಾರೆ. ಪ್ರಿಯಾಂಕಾ ಚೋಪ್ರಾ ಅವರು 9 ಲಕ್ಷ ರೂಪಾಯಿ ಬೆಲೆಯ ವಜ್ರದ ನೆಕ್ಲೆಸ್​ ಅನ್ನು ಆಲಿಯಾಗೆ ನೀಡಿದ್ದಾರೆ. ರಣಬೀರ್​ ಕಪೂರ್​ ಅವರ ತಾಯಿ ನೀತು ಕಪೂರ್​ ಅವರು ಮಗ ಮತ್ತು ಸೊಸೆಗೆ 6 ಬೆಡ್​ ರೂಮ್​ಗಳ ಫ್ಲಾಟ್​ ನೀಡಿದ್ದು ಅದರ ಬೆಲೆ 26 ಕೋಟಿ ರೂಪಾಯಿ ಎನ್ನಲಾಗಿದೆ. ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಜೊತೆಯಾಗಿ ನಟಿಸುತ್ತಿದ್ದಾರೆ. ಅದರ ನಿರ್ದೇಶಕ ಅಯಾನ್​ ಮುಖರ್ಜಿ ಅವರು ಆಡಿ 8 ಕ್ಯೂ ಕಾರನ್ನು ಉಡುಗೊರೆಯಾಗಿ ನೀಡಿದ್ದಾರಂತೆ. ಅರ್ಜುನ್​ ಕಪೂರ್​ ಅವರು 1.5 ಲಕ್ಷ ರೂ. ಬೆಲೆಯ ಜಾಕೆಟ್​ ಅನ್ನು ರಣಬೀರ್​ ಕಪೂರ್​ಗೆ ಗಿಫ್ಟ್​ ಮಾಡಿದ್ದಾರೆ. ಅನುಷ್ಕಾ ಶರ್ಮಾ ಅವರು 1.6 ರೂಪಾಯಿ ಬೆಲೆಯ ಬಟ್ಟೆಯನ್ನು ಆಲಿಯಾಗೆ ನೀಡಿದ್ದಾರೆ ಎಂದು ‘ಬಾಲಿವುಡ್​ ಲೈಫ್​’ ವರದಿ ಮಾಡಿದೆ. ಈ ಉಡುಗೊರೆಗಳ ಕುರಿತಾಗಿ ರಣಬೀರ್​-ಆಲಿಯಾ ಕುಟುಂಬದಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ರಣಬೀರ್​ ಕಪೂರ್​ ಅವರ ಮುಂಬೈನ ನಿವಾಸದಲ್ಲಿ ಈ ಮದುವೆ ನಡೆಯಿತು. ಹೈ-ಪ್ರೊಫೈಲ್​ ವಿವಾಹ ಆದ್ದರಿಂದ ಅವರ ಮನೆಗೆ ಪೊಲೀಸ್​ ಬಿಗಿ ಭದ್ರತೆ ಒದಗಿಸಲಾಗಿತ್ತು. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್ ಅವರದ್ದು ಫಿಲ್ಮಿ ಕುಟುಂಬ. ಹಾಗಾಗಿ ಈ ಮದುವೆಗೆ ಅನೇಕ ಆಪ್ತರು ಸಾಕ್ಷಿಯಾದರು. ಇಬ್ಬರೂ ಕೂಡ ಬಾಲಿವುಡ್​ನಲ್ಲಿ ಬಹುಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಇಬ್ಬರ ನೆಟ್​ ವರ್ತ್​ ಬರೋಬ್ಬರಿ 840 ಕೋಟಿ ರೂಪಾಯಿ ಎಂದು ಹೇಳಲಾಗಿದೆ.

ಇದನ್ನೂ ಓದಿ:

ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?

ಹೆಣ್ಣಿನ ಕಡೆಯವರು ಕೇಳಿದ್ದು 11 ಕೋಟಿ ರೂ; ರಣಬೀರ್ ಕೊಟ್ಟಿದ್ದು 1 ಲಕ್ಷ ಮಾತ್ರ: ಆಲಿಯಾ ಮದುವೆ ಇನ್​ಸೈಡ್​​ ವಿಷಯ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ