AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್ಲಿಕ್​ನಲ್ಲಿ ಜಗಳವಾಡಿದ್ರಾ ಆಲಿಯಾ-ರಣಬೀರ್​? ವೈರಲ್​ ಆಯ್ತು ವಿಡಿಯೋ

ಆಲಿಯಾ ಹಾಗೂ ರಣಬೀರ್​ ಕಪೂರ್​ ಅವರು ಮುಂಬೈನ ಹೋಟೆಲ್​ ಒಂದಕ್ಕೆ ತೆರಳಿದ್ದರು. ಈ ವೇಳೆ ಆಲಿಯಾ ಸಹೋದರಿ ಶಹೀನಾ ಭಟ್​ ಕೂಡ ಇದ್ದರು. ಅವರು ಹೋಟೆಲ್​ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು.

ಪಬ್ಲಿಕ್​ನಲ್ಲಿ ಜಗಳವಾಡಿದ್ರಾ ಆಲಿಯಾ-ರಣಬೀರ್​? ವೈರಲ್​ ಆಯ್ತು ವಿಡಿಯೋ
ಆಲಿಯಾ-ರಣಬೀರ್​
TV9 Web
| Edited By: |

Updated on: Dec 25, 2021 | 9:28 AM

Share

ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಶೀಘ್ರವೇ ಈ ಜೋಡಿ ಮದುವೆ ಆಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅನೇಕ ಬಾರಿ ಈ ಜೋಡಿ ಒಟ್ಟಾಗಿ ಪಬ್ಲಿಕ್​ನಲ್ಲಿ ಕಾಣಿಸಿಕೊಂಡಿದೆ. ಸಾಕಷ್ಟು ಬಾರಿ ಇಬ್ಬರೂ ವಿದೇಶಕ್ಕೆ ತೆರಳಿ ಸಮಯ ಕಳೆದು ಬಂದಿದ್ದಾರೆ. ಇತ್ತೀಚೆಗೆ ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಮತ್ತೊಮ್ಮೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಈ ವೇಳೆ ಅವರ ವರ್ತನೆ ನೋಡಿದ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ. ಇಬ್ಬರೂ ಜಗಳ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ಆಲಿಯಾ ಹಾಗೂ ರಣಬೀರ್​ ಕಪೂರ್​ ಅವರು ಮುಂಬೈನ ಹೋಟೆಲ್​ ಒಂದಕ್ಕೆ ತೆರಳಿದ್ದರು. ಈ ವೇಳೆ ಆಲಿಯಾ ಸಹೋದರಿ ಶಹೀನಾ ಭಟ್​ ಕೂಡ ಇದ್ದರು. ಅವರು ಹೋಟೆಲ್​ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು. ಈ ವೇಳೆ ರಣಬೀರ್ ಅವರು ಆಲಿಯಾ ಸಹಾಯಕ್ಕೆ ಬಂದರು. ಆದರೆ, ಆಲಿಯಾ ಇದನ್ನು ಲಕ್ಷ್ಯಕ್ಕೆ ತೆಗೆದುಕೊಂಡಿಲ್ಲ. ರಣಬೀರ್​ ಕೈಯನ್ನು ದೂಕಿ ಮುಂದೆ ಸಾಗಿದರು. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

ಈ ವಿಡಿಯೋವನ್ನು ಪಾಪರಾಜಿಗಳು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ‘ಯಾಕೆ ರಣಬೀರ್​ ಕೈಯನ್ನು ಆಲಿಯಾ ದೂಡಿ ಮುಂದೆ ಸಾಗಿದರು?’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ‘ಆಲಿಯಾ ಅಳುತ್ತಿದ್ದಂತೆ ಕಂಡು ಬಂತು’ ಎಂದಿದ್ದಾರೆ. ಹೋಟೆಲ್​ನಲ್ಲಿ ಆಲಿಯಾ ಹಾಗೂ ರಣಬೀರ್​ ಕಪೂರ್​ ನಡುವೆ ಏನೋ ಕಿರಿಕ್​ ಆಗಿದೆ. ಈ ಕಾರಣಕ್ಕೆ ಇಬ್ಬರೂ ಆ ರೀತಿ ನಡೆದುಕೊಂಡರು ಎನ್ನುವ ಸುದ್ದಿಗಳು ಕೂಡ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಈ ಜೋಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಾಲಿವುಡ್​ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಮದುವೆ ಆಗುವುದು ಟ್ರೆಂಡ್​. ರಾಜಸ್ಥಾನ, ಗೋವಾ ಮುಂತಾದ ಸ್ಥಳಗಳಲ್ಲೂ ಸೆಲೆಬ್ರಿಟಿಗಳ ಮದುವೆ ನೆರವೇರುತ್ತವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಕೂಡ ಅದೇ ರೀತಿ ಪ್ಲ್ಯಾನ್​ ಇಟ್ಟುಕೊಂಡಿದ್ದರು. ಆದರೆ ಈಗ​ ಬೇರೆ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇರೆಲ್ಲಿಗೂ ತೆರಳದೇ, ಮುಂಬೈನಲ್ಲೇ ಸಪ್ತಪದಿ ತುಳಿಯಲು ತೀರ್ಮಾನಿಸಿದ್ದಾರೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

ಆಲಿಯಾ ಭಟ್​ ತಂದೆ ಮಹೇಶ್​ ಭಟ್​ ಅವರಿಗೆ ಈಗ ವಿದೇಶಕ್ಕೆ ಪ್ರಯಾಣ ಮಾಡುವುದು ಕಷ್ಟ ಆಗುತ್ತಿದೆ ಎನ್ನಲಾಗಿದೆ. ಆ ಕಾರಣದಿಂದ ಮದುವೆಯನ್ನು ಮುಂಬೈನಲ್ಲೇ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಮದುವೆಗೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗುವುದು ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ವಿಚಾರಗಳ ಬಗ್ಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ನೇರವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

Follow Us
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ