AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್ಲಿಕ್​ನಲ್ಲಿ ಜಗಳವಾಡಿದ್ರಾ ಆಲಿಯಾ-ರಣಬೀರ್​? ವೈರಲ್​ ಆಯ್ತು ವಿಡಿಯೋ

ಆಲಿಯಾ ಹಾಗೂ ರಣಬೀರ್​ ಕಪೂರ್​ ಅವರು ಮುಂಬೈನ ಹೋಟೆಲ್​ ಒಂದಕ್ಕೆ ತೆರಳಿದ್ದರು. ಈ ವೇಳೆ ಆಲಿಯಾ ಸಹೋದರಿ ಶಹೀನಾ ಭಟ್​ ಕೂಡ ಇದ್ದರು. ಅವರು ಹೋಟೆಲ್​ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು.

ಪಬ್ಲಿಕ್​ನಲ್ಲಿ ಜಗಳವಾಡಿದ್ರಾ ಆಲಿಯಾ-ರಣಬೀರ್​? ವೈರಲ್​ ಆಯ್ತು ವಿಡಿಯೋ
ಆಲಿಯಾ-ರಣಬೀರ್​
TV9 Web
| Edited By: |

Updated on: Dec 25, 2021 | 9:28 AM

Share

ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಶೀಘ್ರವೇ ಈ ಜೋಡಿ ಮದುವೆ ಆಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅನೇಕ ಬಾರಿ ಈ ಜೋಡಿ ಒಟ್ಟಾಗಿ ಪಬ್ಲಿಕ್​ನಲ್ಲಿ ಕಾಣಿಸಿಕೊಂಡಿದೆ. ಸಾಕಷ್ಟು ಬಾರಿ ಇಬ್ಬರೂ ವಿದೇಶಕ್ಕೆ ತೆರಳಿ ಸಮಯ ಕಳೆದು ಬಂದಿದ್ದಾರೆ. ಇತ್ತೀಚೆಗೆ ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಮತ್ತೊಮ್ಮೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಈ ವೇಳೆ ಅವರ ವರ್ತನೆ ನೋಡಿದ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ. ಇಬ್ಬರೂ ಜಗಳ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ಆಲಿಯಾ ಹಾಗೂ ರಣಬೀರ್​ ಕಪೂರ್​ ಅವರು ಮುಂಬೈನ ಹೋಟೆಲ್​ ಒಂದಕ್ಕೆ ತೆರಳಿದ್ದರು. ಈ ವೇಳೆ ಆಲಿಯಾ ಸಹೋದರಿ ಶಹೀನಾ ಭಟ್​ ಕೂಡ ಇದ್ದರು. ಅವರು ಹೋಟೆಲ್​ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು. ಈ ವೇಳೆ ರಣಬೀರ್ ಅವರು ಆಲಿಯಾ ಸಹಾಯಕ್ಕೆ ಬಂದರು. ಆದರೆ, ಆಲಿಯಾ ಇದನ್ನು ಲಕ್ಷ್ಯಕ್ಕೆ ತೆಗೆದುಕೊಂಡಿಲ್ಲ. ರಣಬೀರ್​ ಕೈಯನ್ನು ದೂಕಿ ಮುಂದೆ ಸಾಗಿದರು. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

ಈ ವಿಡಿಯೋವನ್ನು ಪಾಪರಾಜಿಗಳು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ‘ಯಾಕೆ ರಣಬೀರ್​ ಕೈಯನ್ನು ಆಲಿಯಾ ದೂಡಿ ಮುಂದೆ ಸಾಗಿದರು?’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ‘ಆಲಿಯಾ ಅಳುತ್ತಿದ್ದಂತೆ ಕಂಡು ಬಂತು’ ಎಂದಿದ್ದಾರೆ. ಹೋಟೆಲ್​ನಲ್ಲಿ ಆಲಿಯಾ ಹಾಗೂ ರಣಬೀರ್​ ಕಪೂರ್​ ನಡುವೆ ಏನೋ ಕಿರಿಕ್​ ಆಗಿದೆ. ಈ ಕಾರಣಕ್ಕೆ ಇಬ್ಬರೂ ಆ ರೀತಿ ನಡೆದುಕೊಂಡರು ಎನ್ನುವ ಸುದ್ದಿಗಳು ಕೂಡ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಈ ಜೋಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಾಲಿವುಡ್​ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಮದುವೆ ಆಗುವುದು ಟ್ರೆಂಡ್​. ರಾಜಸ್ಥಾನ, ಗೋವಾ ಮುಂತಾದ ಸ್ಥಳಗಳಲ್ಲೂ ಸೆಲೆಬ್ರಿಟಿಗಳ ಮದುವೆ ನೆರವೇರುತ್ತವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಕೂಡ ಅದೇ ರೀತಿ ಪ್ಲ್ಯಾನ್​ ಇಟ್ಟುಕೊಂಡಿದ್ದರು. ಆದರೆ ಈಗ​ ಬೇರೆ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇರೆಲ್ಲಿಗೂ ತೆರಳದೇ, ಮುಂಬೈನಲ್ಲೇ ಸಪ್ತಪದಿ ತುಳಿಯಲು ತೀರ್ಮಾನಿಸಿದ್ದಾರೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

ಆಲಿಯಾ ಭಟ್​ ತಂದೆ ಮಹೇಶ್​ ಭಟ್​ ಅವರಿಗೆ ಈಗ ವಿದೇಶಕ್ಕೆ ಪ್ರಯಾಣ ಮಾಡುವುದು ಕಷ್ಟ ಆಗುತ್ತಿದೆ ಎನ್ನಲಾಗಿದೆ. ಆ ಕಾರಣದಿಂದ ಮದುವೆಯನ್ನು ಮುಂಬೈನಲ್ಲೇ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಮದುವೆಗೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗುವುದು ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ವಿಚಾರಗಳ ಬಗ್ಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ನೇರವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ