AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಬ್ಲಿಕ್​ನಲ್ಲಿ ಜಗಳವಾಡಿದ್ರಾ ಆಲಿಯಾ-ರಣಬೀರ್​? ವೈರಲ್​ ಆಯ್ತು ವಿಡಿಯೋ

ಆಲಿಯಾ ಹಾಗೂ ರಣಬೀರ್​ ಕಪೂರ್​ ಅವರು ಮುಂಬೈನ ಹೋಟೆಲ್​ ಒಂದಕ್ಕೆ ತೆರಳಿದ್ದರು. ಈ ವೇಳೆ ಆಲಿಯಾ ಸಹೋದರಿ ಶಹೀನಾ ಭಟ್​ ಕೂಡ ಇದ್ದರು. ಅವರು ಹೋಟೆಲ್​ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು.

ಪಬ್ಲಿಕ್​ನಲ್ಲಿ ಜಗಳವಾಡಿದ್ರಾ ಆಲಿಯಾ-ರಣಬೀರ್​? ವೈರಲ್​ ಆಯ್ತು ವಿಡಿಯೋ
ಆಲಿಯಾ-ರಣಬೀರ್​
TV9 Web
| Edited By: |

Updated on: Dec 25, 2021 | 9:28 AM

Share

ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಶೀಘ್ರವೇ ಈ ಜೋಡಿ ಮದುವೆ ಆಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅನೇಕ ಬಾರಿ ಈ ಜೋಡಿ ಒಟ್ಟಾಗಿ ಪಬ್ಲಿಕ್​ನಲ್ಲಿ ಕಾಣಿಸಿಕೊಂಡಿದೆ. ಸಾಕಷ್ಟು ಬಾರಿ ಇಬ್ಬರೂ ವಿದೇಶಕ್ಕೆ ತೆರಳಿ ಸಮಯ ಕಳೆದು ಬಂದಿದ್ದಾರೆ. ಇತ್ತೀಚೆಗೆ ರಣಬೀರ್​ ಕಪೂರ್​ ಹಾಗೂ ಆಲಿಯಾ ಭಟ್​ ಮತ್ತೊಮ್ಮೆ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಈ ವೇಳೆ ಅವರ ವರ್ತನೆ ನೋಡಿದ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ. ಇಬ್ಬರೂ ಜಗಳ ಮಾಡಿಕೊಂಡಿದ್ದಾರಾ ಎನ್ನುವ ಪ್ರಶ್ನೆಯನ್ನು ಕೇಳುತ್ತಿದ್ದಾರೆ.

ಆಲಿಯಾ ಹಾಗೂ ರಣಬೀರ್​ ಕಪೂರ್​ ಅವರು ಮುಂಬೈನ ಹೋಟೆಲ್​ ಒಂದಕ್ಕೆ ತೆರಳಿದ್ದರು. ಈ ವೇಳೆ ಆಲಿಯಾ ಸಹೋದರಿ ಶಹೀನಾ ಭಟ್​ ಕೂಡ ಇದ್ದರು. ಅವರು ಹೋಟೆಲ್​ನಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಮುತ್ತಿಕೊಂಡರು. ಈ ವೇಳೆ ರಣಬೀರ್ ಅವರು ಆಲಿಯಾ ಸಹಾಯಕ್ಕೆ ಬಂದರು. ಆದರೆ, ಆಲಿಯಾ ಇದನ್ನು ಲಕ್ಷ್ಯಕ್ಕೆ ತೆಗೆದುಕೊಂಡಿಲ್ಲ. ರಣಬೀರ್​ ಕೈಯನ್ನು ದೂಕಿ ಮುಂದೆ ಸಾಗಿದರು. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

ಈ ವಿಡಿಯೋವನ್ನು ಪಾಪರಾಜಿಗಳು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ನಾನಾ ರೀತಿಯ ಕಮೆಂಟ್​ಗಳು ಬಂದಿವೆ. ‘ಯಾಕೆ ರಣಬೀರ್​ ಕೈಯನ್ನು ಆಲಿಯಾ ದೂಡಿ ಮುಂದೆ ಸಾಗಿದರು?’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇನ್ನೂ ಕೆಲವರು ‘ಆಲಿಯಾ ಅಳುತ್ತಿದ್ದಂತೆ ಕಂಡು ಬಂತು’ ಎಂದಿದ್ದಾರೆ. ಹೋಟೆಲ್​ನಲ್ಲಿ ಆಲಿಯಾ ಹಾಗೂ ರಣಬೀರ್​ ಕಪೂರ್​ ನಡುವೆ ಏನೋ ಕಿರಿಕ್​ ಆಗಿದೆ. ಈ ಕಾರಣಕ್ಕೆ ಇಬ್ಬರೂ ಆ ರೀತಿ ನಡೆದುಕೊಂಡರು ಎನ್ನುವ ಸುದ್ದಿಗಳು ಕೂಡ ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಈ ಜೋಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಾಲಿವುಡ್​ ಸೆಲೆಬ್ರಿಟಿಗಳು ವಿದೇಶಕ್ಕೆ ತೆರಳಿ ಮದುವೆ ಆಗುವುದು ಟ್ರೆಂಡ್​. ರಾಜಸ್ಥಾನ, ಗೋವಾ ಮುಂತಾದ ಸ್ಥಳಗಳಲ್ಲೂ ಸೆಲೆಬ್ರಿಟಿಗಳ ಮದುವೆ ನೆರವೇರುತ್ತವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಕೂಡ ಅದೇ ರೀತಿ ಪ್ಲ್ಯಾನ್​ ಇಟ್ಟುಕೊಂಡಿದ್ದರು. ಆದರೆ ಈಗ​ ಬೇರೆ ನಿರ್ಧಾರ ತೆಗೆದುಕೊಂಡಿದ್ದಾರೆ. ಬೇರೆಲ್ಲಿಗೂ ತೆರಳದೇ, ಮುಂಬೈನಲ್ಲೇ ಸಪ್ತಪದಿ ತುಳಿಯಲು ತೀರ್ಮಾನಿಸಿದ್ದಾರೆ. ಅದಕ್ಕೆ ಒಂದು ಬಲವಾದ ಕಾರಣ ಕೂಡ ಇದೆ.

ಆಲಿಯಾ ಭಟ್​ ತಂದೆ ಮಹೇಶ್​ ಭಟ್​ ಅವರಿಗೆ ಈಗ ವಿದೇಶಕ್ಕೆ ಪ್ರಯಾಣ ಮಾಡುವುದು ಕಷ್ಟ ಆಗುತ್ತಿದೆ ಎನ್ನಲಾಗಿದೆ. ಆ ಕಾರಣದಿಂದ ಮದುವೆಯನ್ನು ಮುಂಬೈನಲ್ಲೇ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಮದುವೆಗೆ ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗುವುದು ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ವಿಚಾರಗಳ ಬಗ್ಗೆ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ನೇರವಾಗಿ ಎಲ್ಲಿಯೂ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!