AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt Birthday: ಇತರ ಸ್ಟಾರ್​ ಕಿಡ್​ನಂತಲ್ಲ ಆಲಿಯಾ ಭಟ್​; ಈ ನಟಿ ಇಷ್ಟವಾಗೋದೇ ಈ ಕಾರಣಕ್ಕೆ

‘ಸ್ಟುಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಭಟ್​ ಅವರನ್ನು ಬಾಲಿವುಡ್​ಗೆ ಕರಣ್ ಪರಿಚಯಿಸಿದರು. ಆಲಿಯಾ ಮೊದಲ ಸಿನಿಮಾದಲ್ಲೇ ಗ್ಲಾಮರ್ ಅವತಾರ ತಾಳಿ ಎಲ್ಲರ ಗಮನ ಸೆಳೆದರು.

Alia Bhatt Birthday: ಇತರ ಸ್ಟಾರ್​ ಕಿಡ್​ನಂತಲ್ಲ ಆಲಿಯಾ ಭಟ್​; ಈ ನಟಿ ಇಷ್ಟವಾಗೋದೇ ಈ ಕಾರಣಕ್ಕೆ
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Mar 15, 2023 | 9:00 AM

Share

ನಟಿ ಆಲಿಯಾ ಭಟ್ (Alia Bhatt)​ ಅವರು ಇಂದು (ಮಾರ್ಚ್​ 15) 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಸೆಲೆಬ್ರಿಟಿಗಳಿಂದ, ಕುಟುಂಬದಿಂದ ವಿಶ್​ಗಳು ಬರುತ್ತಿವೆ. ಸಣ್ಣ ವಯಸ್ಸಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟರು. 11 ವರ್ಷಗಳ ವೃತ್ತಿ ಜೀವನದಲ್ಲಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಿರ್ದೇಶಕ ಮಹೇಶ್ ಭಟ್ ಮಗಳಾದರೂ ಅವರು ತಮ್ಮದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಇದೆ. ಆಲಿಯಾ ಇತರ ಸ್ಟಾರ್​​ಕಿಡ್​ನಂತಲ್ಲ. ಅವರು ತಮ್ಮ ನಟನೆ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇತರರಿಗಿಂತ ಅವರು ಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ಎಷ್ಟೇ ಟೀಕೆ ಬಂದರು ತಮ್ಮ ಕೆಲಸದ ಮೂಲಕ ಉತ್ತರ ನೀಡುವ ಕೆಲಸ ಮಾಡುತ್ತಾರೆ.

2012ರಲ್ಲಿ ಚಿತ್ರರಂಗಕ್ಕೆ ಎಂಟ್ರಿ

ಆಲಿಯಾ ಭಟ್ ಸೇರಿದಂತೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳಿಗೆ ನಿರ್ಮಾಪಕ ಕರಣ್ ಜೋಹರ್ ಅವರು ಗಾಡ್ ಫಾದರ್. ಸೆಲೆಬ್ರಿಟಿ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸೋದು ಎಂದರೆ ಅವರಿಗೆ ಎಲ್ಲಿಲ್ಲದ ಖುಷಿ. ‘ಸ್ಟುಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಭಟ್​ ಅವರನ್ನು ಬಾಲಿವುಡ್​ಗೆ ಕರಣ್ ಪರಿಚಯಿಸಿದರು. ಆಲಿಯಾ ಮೊದಲ ಸಿನಿಮಾದಲ್ಲೇ ಗ್ಲಾಮರ್ ಅವತಾರ ತಾಳಿ ಎಲ್ಲರ ಗಮನ ಸೆಳೆದರು. ಬಿಕಿನಿ ತೊಟ್ಟು ಮಿಂಚಿದರು.

ನಂತರ ಅವರು ನಟಿಸಿದ್ದು ‘ಹೈವೇ’ ಚಿತ್ರದಲ್ಲಿ. ಈ ಚಿತ್ರದಲ್ಲಿ ಅವರಿಗೆ ತಮ್ಮ ನಟನೆ ತೋರಿಸಲು ಸಾಕಷ್ಟು ಅವಕಾಶ ಸಿಕ್ಕಿತು. ‘2 ಸ್ಟೇಟ್ಸ್​, ‘ಉಡ್ತಾ ಪಂಜಾಬ್​’, ‘ಡಿಯರ್ ಜಿಂದಗಿ’ ಮೊದಲಾದ ಚಿತ್ರಗಳಲ್ಲಿ ನಟಿಸಿ ಅವರು ಗಮನ ಸೆಳೆದರು.

ಇದನ್ನೂ ಓದಿ
Image
‘ಪ್ರೀತಿಯಲ್ಲಿ ಕೆಲವೊಮ್ಮೆ ಸುಳ್ಳು ಹೇಳಿದರೆ ಒಳ್ಳೆಯದು’; ಪ್ರೀತಿ-ಬ್ರೇಕಪ್ ಬಗ್ಗೆ ಮಾತನಾಡಿದ ರಣಬೀರ್ ಕಪೂರ್
Image
Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​
Image
Ranbir Kapoor: ಆ ಮೂರು ಸಿನಿಮಾಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು: ರಣಬೀರ್ ಕಪೂರ್
Image
Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

ಬದಕು ಬದಲಿಸಿದ ‘ರಾಝಿ’

2018ರಲ್ಲಿ ರಿಲೀಸ್ ಆದ ‘ರಾಝಿ’ ಚಿತ್ರ ಆಲಿಯಾ ವೃತ್ತಿಬದುಕಿಗೆ ಸಾಕಷ್ಟು ಮೈಲೇಜ್ ನೀಡಿತು. ಈ ಚಿತ್ರದಲ್ಲಿ ಭಾರತದ ಸ್ಪೈ ಆಗಿ ಅವರು ಕಾಣಿಸಿಕೊಂಡರು. ಅಪ್ಪನ ಮಾತಿನಂತೆ ಪಾಕಿಸ್ತಾನದ ಸೇನೆಯ ಅಧಿಕಾರಿಯ ಮಗನ ಮದುವೆ ಆಗುವ ಕಥಾ ನಾಯಕಿ, ಸಾಕಷ್ಟು ಸವಾಲುಗಳನ್ನು ಎದುರಿಸುತ್ತಾಳೆ. ಈ ಪಾತ್ರವನ್ನು ಆಲಿಯಾ ಸಮರ್ಥವಾಗಿ ನಿಭಾಯಿಸಿ ಗಮನ ಸೆಳೆದರು. ಈ ಚಿತ್ರಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿತು.

ಇದನ್ನೂ ಓದಿ: ‘ನನ್ನ ಮನೆ ಒಳಗೆ ಏನು ಬೇಕಾದರೂ ಆಗಬಹುದು’; ಕಾನೂನು ಹೋರಾಟಕ್ಕೆ ಮುಂದಾದ ಆಲಿಯಾ ಭಟ್

ದಕ್ಷಿಣಕ್ಕೂ ಎಂಟ್ರಿ

ರಣವೀರ್ ಸಿಂಗ್ ಜೊತೆ ನಟಿಸಿದ ‘ಗಲ್ಲಿ ಬಾಯ್’, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗೂಡಿ ಕೆಲಸ ಮಾಡಿದ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರಗಳು ಒಳ್ಳೆಯ ಬಿಸ್ನೆಸ್ ಮಾಡಿವೆ. 2022ರಲ್ಲಿ ರಿಲೀಸ್ ಆದ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಸೀತಾ ಹೆಸರಿನ ಪಾತ್ರ ಮಾಡುವ ಮೂಲಕ ಅವರು ದಕ್ಷಿಣ ಭಾರತಕ್ಕೂ ಕಾಲಿಟ್ಟರು. ಅದೇ ವರ್ಷ ರಿಲೀಸ್ ಆದ ‘ಬ್ರಹ್ಮಾಸ್ತ್ರ’ ಸಿನಿಮಾ ಕೂಡ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿತು. ‘ಡಾರ್ಲಿಂಗ್ಸ್​’ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.

ಇತರರಿಗಿಂತ ಭಿನ್ನ

ಸೋನಮ್ ಕಪೂರ್, ಜಾನ್ವಿ ಕಪೂರ್, ಸಾರಾ ಅಲಿ ಖಾನ್, ಅನನ್ಯಾ ಪಾಂಡೆ ಮೊದಲಾದವರು ಕೂಡ ಸ್ಟಾರ್​ ಕಿಡ್​ಗಳು. ಇವರಿಗೆ ಈವರೆಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇವರಿಗೆ ನಟನೆ ಬರುವುದಿಲ್ಲ ಎನ್ನುವ ಟೀಕೆ ಕೇಳಿಬರುತ್ತಲೇ ಇರುತ್ತದೆ. ಆದರೆ, ಆಲಿಯಾ ಹಾಗಲ್ಲ. ನಟನೆ ವಿಚಾರದಲ್ಲಿ ಅವರು ಎಂದಿಗೂ ಟೀಕೆಗೆ ಒಳಗಾಗಿಲ್ಲ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟವಾಗುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ