AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

38 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ಆಲಿಯಾ ಭಟ್; ಅಕ್ಕನಿಗೂ ಗಿಫ್ಟ್ ಕೊಟ್ಟ ನಟಿ

Alia Bhatt: ಆಲಿಯಾ ಭಟ್ ಅವರು ಮುಂಬೈನ ಅಪಾರ್ಟ್​ಮೆಂಟ್​​ನಲ್ಲಿ ಮನೆ ಖರೀದಿ ಮಾಡಿದ್ದಾರೆ. ಇದರ ಬೆಲೆ 37.80 ಕೋಟಿ ರೂಪಾಯಿ.

38 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ಆಲಿಯಾ ಭಟ್; ಅಕ್ಕನಿಗೂ ಗಿಫ್ಟ್ ಕೊಟ್ಟ ನಟಿ
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Apr 25, 2023 | 8:04 AM

Share

ಆಲಿಯಾ ಭಟ್ (Alia Bhatt) ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇತರ ಸ್ಟಾರ್ ​ಕಿಡ್​ಗಳಿಗಿಂತ ಅವರ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ನಟನೆ ಮೂಲಕ ತಮ್ಮ ತನವನ್ನು ತೋರಿಸಿದ್ದಾರೆ. ಇದರ ಜೊತೆಗೆ ಹಲವು ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗಿದ್ದಾರೆ. ಹಲವು ಉದ್ಯಮಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಆಲಿಯಾ ಭಟ್ ಅವರಿಗೆ ಸಾಕಷ್ಟು ಹಣ ಬರುತ್ತಿದೆ. ಈಗ ಆಲಿಯಾ ಭಟ್ ಅವರು ತಮ್ಮ ಸೇವಿಂಗ್ಸ್ ಹಣದಲ್ಲಿ ಐಷಾರಾಮಿ ಮನೆ ಖರೀದಿ ಮಾಡಿದ್ದಾರೆ. ಇದರ ಬೆಲೆ ಬರೋಬ್ಬರಿ 38 ಕೋಟಿ ರೂಪಾಯಿ.

ಆಲಿಯಾ ಭಟ್ ಅವರು ಬಾಂದ್ರಾ ವೆಸ್ಟ್​​ನ ಪಲಿ ಹಿಲ್​ ಭಾಗದ ಅಪಾರ್ಟ್​ಮೆಂಟ್​​ನಲ್ಲಿ ಮನೆ ಖರೀದಿ ಮಾಡಿದ್ದಾರೆ. ಇದರ ಬೆಲೆ 37.80 ಕೋಟಿ ರೂಪಾಯಿ. ಮತ್ತೊಂದು ಮನೆ ಖರೀದಿಸಿ ಸಹೋದರಿ ಶಹೀನ್ ಭಟ್​ಗೆ ಅವರು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಆಲಿಯಾ ಭಟ್ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸಾಮಾನ್ಯವಾಗಿ ಪ್ರಾಪರ್ಟಿ ಖರೀದಿ ಮಾಡಿದ ವಿಚಾರವನ್ನು ಸೆಲೆಬ್ರಿಟಿಗಳು ರಿವೀಲ್ ಮಾಡುವುದಿಲ್ಲ. ಹೀಗಾಗಿ, ಈ ವಿಚಾರದಲ್ಲಿ ಅವರ ಕಡೆಯಿಂದ ಸ್ಪಷ್ಟನೆ ಸಿಗೋದು ಅನುಮಾನ.

ಮನಿಕಂಟ್ರೋಲ್ ವರದಿ ಮಾಡಿರುವ ಪ್ರಕಾರ, ಆಲಿಯಾ ಖರೀದಿಸಿರುವ ಫ್ಲಾಟ್ 2,497 ಚದರ ಅಡಿ ಇದೆ. ಏಪ್ರಿಲ್ 10ರಂದು ಈ ಡೀಲ್ ನಡೆದಿದೆ. ಆಲಿಯಾ ಭಟ್ ಅವರು 2.26 ಕೋಟಿ ರೂಪಾಯಿ ಸ್ಟಾಂಪ್ ಡ್ಯೂಟಿ ಪಾವತಿಸಿದ್ದಾರೆ. ಇನ್ನು ಆಲಿಯಾ ಭಟ್ ಅವರು ಎರಡು ಫ್ಲಾಟ್​​ಗಳನ್ನು ಶಹೀನ್ ಭಟ್​ಗೆ ನೀಡಿದ್ದಾರೆ. ಇದರ ಬೆಲೆ 7.86 ಕೋಟಿ ರೂಪಾಯಿ ಎನ್ನಲಾಗಿದೆ. ಈ ಅಪಾರ್ಟ್​ಮೆಂಟ್​ ಮುಂಬೈನ ಜುಹು ಭಾಗದಲ್ಲಿದೆ. ಇದಕ್ಕೆ 30 ಲಕ್ಷ ರೂಪಾಯಿ ಸ್ಟಾಂಪ್​ಡ್ಯೂಟಿ ಪಾವತಿಸಲಾಗಿದೆ.

ಇದನ್ನೂ ಓದಿ:  ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ಸಿನಿಮಾ ವಿಚಾರಕ್ಕೆ ಬರೋದಾದರೆ ಆಲಿಯಾ ಭಟ್ ನಟನೆಯ ಹಾಲಿವುಡ್​​ನ ‘ಹಾರ್ಟ್ ಆಫ್ ಸ್ಟೋನ್​’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಕೂಡ ನಟಿಸಿದ್ದಾರೆ. ಕರಣ್ ಜೋಹರ್ ಅವರ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು