AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

38 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ಆಲಿಯಾ ಭಟ್; ಅಕ್ಕನಿಗೂ ಗಿಫ್ಟ್ ಕೊಟ್ಟ ನಟಿ

Alia Bhatt: ಆಲಿಯಾ ಭಟ್ ಅವರು ಮುಂಬೈನ ಅಪಾರ್ಟ್​ಮೆಂಟ್​​ನಲ್ಲಿ ಮನೆ ಖರೀದಿ ಮಾಡಿದ್ದಾರೆ. ಇದರ ಬೆಲೆ 37.80 ಕೋಟಿ ರೂಪಾಯಿ.

38 ಕೋಟಿ ರೂಪಾಯಿ ಕೊಟ್ಟು ಮನೆ ಖರೀದಿಸಿದ ಆಲಿಯಾ ಭಟ್; ಅಕ್ಕನಿಗೂ ಗಿಫ್ಟ್ ಕೊಟ್ಟ ನಟಿ
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Apr 25, 2023 | 8:04 AM

Share

ಆಲಿಯಾ ಭಟ್ (Alia Bhatt) ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇತರ ಸ್ಟಾರ್ ​ಕಿಡ್​ಗಳಿಗಿಂತ ಅವರ ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ನಟನೆ ಮೂಲಕ ತಮ್ಮ ತನವನ್ನು ತೋರಿಸಿದ್ದಾರೆ. ಇದರ ಜೊತೆಗೆ ಹಲವು ಬ್ರ್ಯಾಂಡ್​ಗಳಿಗೆ ಅವರು ಅಂಬಾಸಿಡರ್ ಆಗಿದ್ದಾರೆ. ಹಲವು ಉದ್ಯಮಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಎಲ್ಲಾ ಕಾರಣದಿಂದ ಆಲಿಯಾ ಭಟ್ ಅವರಿಗೆ ಸಾಕಷ್ಟು ಹಣ ಬರುತ್ತಿದೆ. ಈಗ ಆಲಿಯಾ ಭಟ್ ಅವರು ತಮ್ಮ ಸೇವಿಂಗ್ಸ್ ಹಣದಲ್ಲಿ ಐಷಾರಾಮಿ ಮನೆ ಖರೀದಿ ಮಾಡಿದ್ದಾರೆ. ಇದರ ಬೆಲೆ ಬರೋಬ್ಬರಿ 38 ಕೋಟಿ ರೂಪಾಯಿ.

ಆಲಿಯಾ ಭಟ್ ಅವರು ಬಾಂದ್ರಾ ವೆಸ್ಟ್​​ನ ಪಲಿ ಹಿಲ್​ ಭಾಗದ ಅಪಾರ್ಟ್​ಮೆಂಟ್​​ನಲ್ಲಿ ಮನೆ ಖರೀದಿ ಮಾಡಿದ್ದಾರೆ. ಇದರ ಬೆಲೆ 37.80 ಕೋಟಿ ರೂಪಾಯಿ. ಮತ್ತೊಂದು ಮನೆ ಖರೀದಿಸಿ ಸಹೋದರಿ ಶಹೀನ್ ಭಟ್​ಗೆ ಅವರು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಆಲಿಯಾ ಭಟ್ ಅವರ ಕಡೆಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಸಾಮಾನ್ಯವಾಗಿ ಪ್ರಾಪರ್ಟಿ ಖರೀದಿ ಮಾಡಿದ ವಿಚಾರವನ್ನು ಸೆಲೆಬ್ರಿಟಿಗಳು ರಿವೀಲ್ ಮಾಡುವುದಿಲ್ಲ. ಹೀಗಾಗಿ, ಈ ವಿಚಾರದಲ್ಲಿ ಅವರ ಕಡೆಯಿಂದ ಸ್ಪಷ್ಟನೆ ಸಿಗೋದು ಅನುಮಾನ.

ಮನಿಕಂಟ್ರೋಲ್ ವರದಿ ಮಾಡಿರುವ ಪ್ರಕಾರ, ಆಲಿಯಾ ಖರೀದಿಸಿರುವ ಫ್ಲಾಟ್ 2,497 ಚದರ ಅಡಿ ಇದೆ. ಏಪ್ರಿಲ್ 10ರಂದು ಈ ಡೀಲ್ ನಡೆದಿದೆ. ಆಲಿಯಾ ಭಟ್ ಅವರು 2.26 ಕೋಟಿ ರೂಪಾಯಿ ಸ್ಟಾಂಪ್ ಡ್ಯೂಟಿ ಪಾವತಿಸಿದ್ದಾರೆ. ಇನ್ನು ಆಲಿಯಾ ಭಟ್ ಅವರು ಎರಡು ಫ್ಲಾಟ್​​ಗಳನ್ನು ಶಹೀನ್ ಭಟ್​ಗೆ ನೀಡಿದ್ದಾರೆ. ಇದರ ಬೆಲೆ 7.86 ಕೋಟಿ ರೂಪಾಯಿ ಎನ್ನಲಾಗಿದೆ. ಈ ಅಪಾರ್ಟ್​ಮೆಂಟ್​ ಮುಂಬೈನ ಜುಹು ಭಾಗದಲ್ಲಿದೆ. ಇದಕ್ಕೆ 30 ಲಕ್ಷ ರೂಪಾಯಿ ಸ್ಟಾಂಪ್​ಡ್ಯೂಟಿ ಪಾವತಿಸಲಾಗಿದೆ.

ಇದನ್ನೂ ಓದಿ:  ಕಾಫಿ ವಿತ್ ಕರಣ್ ಹೊಸ ಸೀಸನ್​ಗೆ ಆಲಿಯಾ ಭಟ್ ರಣಬೀರ್ ಕಪೂರ್​ ಮೊದಲ ಅತಿಥಿ?

ಸಿನಿಮಾ ವಿಚಾರಕ್ಕೆ ಬರೋದಾದರೆ ಆಲಿಯಾ ಭಟ್ ನಟನೆಯ ಹಾಲಿವುಡ್​​ನ ‘ಹಾರ್ಟ್ ಆಫ್ ಸ್ಟೋನ್​’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಕೂಡ ನಟಿಸಿದ್ದಾರೆ. ಕರಣ್ ಜೋಹರ್ ಅವರ ನಿರ್ದೇಶನ ಈ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ