ರಾಜಮೌಳಿ ಬಗ್ಗೆ ಆಲಿಯಾಗೆ ನಿಜಕ್ಕೂ ಬೇಸರವಾಗಿದೆಯೇ?; ಪೋಸ್ಟ್ ಡಿಲೀಟ್​ ಮಾಡಿದ್ದಕ್ಕೆ ಕಾರಣ ನೀಡಿದ ನಟಿ

‘ಆರ್​ಆರ್​ಆರ್’ ಚಿತ್ರದಲ್ಲಿ ರಾಮ್​ ಚರಣ್​ ಪ್ರೇಯಸಿಯಾಗಿ ಆಲಿಯಾ ಭಟ್​ ಪಾತ್ರ ಮೂಡಿ ಬಂದಿದೆ. ಆಲಿಯಾ ಅವರ ಪಾತ್ರ ತೆರೆಮೇಲೆ 15 ನಿಮಿಷಗಿಂತಲೂ ಕಡಿಮೆ ಕಾಣಿಸಿಕೊಂಡಿದೆ.

ರಾಜಮೌಳಿ ಬಗ್ಗೆ ಆಲಿಯಾಗೆ ನಿಜಕ್ಕೂ ಬೇಸರವಾಗಿದೆಯೇ?; ಪೋಸ್ಟ್ ಡಿಲೀಟ್​ ಮಾಡಿದ್ದಕ್ಕೆ ಕಾರಣ ನೀಡಿದ ನಟಿ
ಆಲಿಯಾ-ರಾಜಮೌಳಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Mar 31, 2022 | 6:32 PM

‘ಆರ್​ಆರ್​ಆರ್​’ ಸಿನಿಮಾ (RRR Movie) ದೊಡ್ಡ ಮಟ್ಟದ ಕಲೆಕ್ಷನ್ ಮಾಡಿ ಹೊಸಹೊಸ ದಾಖಲೆಗಳನ್ನು ಸೃಷ್ಟಿ ಮಾಡುತ್ತಿದೆ. ತಮ್ಮದೇ ನಿರ್ದೇಶನದ ಸಿನಿಮಾಗಳ ದಾಖಲೆಗಳನ್ನು ಮುರಿದು ರಾಜಮೌಳಿ (Rajamouli) ಮುಂದೆ ಸಾಗುತ್ತಿದ್ದಾರೆ. ಈ ಮಧ್ಯೆ ಸಿನಿಮಾದ ನಾಯಕಿ ಆಲಿಯಾ ಭಟ್ (Alia Bhatt)​ ಬಗ್ಗೆ ವದಂತಿಯೊಂದು ಹರಿದಾಡಿತ್ತು. ರಾಜಮೌಳಿ ಬಗ್ಗೆ ಅವರು ಬೇಸರಗೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಚಾರದ ಬಗ್ಗೆ ಆಲಿಯಾ ಸ್ಪಷ್ಟನೆ ನೀಡಿದ್ದಾರೆ. ರಾಜಮೌಳಿ ಅವರನ್ನು ಕಂಡರೆ ಈಗಲೂ ಮೊದಲಿನಷ್ಟೇ ಗೌರವ ಇದೆ ಎಂದು ಹೇಳಿಕೊಂಡಿದ್ದಾರೆ.

‘ಆರ್​ಆರ್​ಆರ್’ ಚಿತ್ರದಲ್ಲಿ ರಾಮ್​ ಚರಣ್​ ಪ್ರೇಯಸಿಯಾಗಿ ಆಲಿಯಾ ಭಟ್​ ಪಾತ್ರ ಮೂಡಿ ಬಂದಿದೆ. ಸೀತಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅವರು ತುಂಬಾನೇ ಕಡಿಮೆ ಅವಧಿ ಸಿನಿಮಾದಲ್ಲಿ ಅವರ ಪಾತ್ರ ಬರುತ್ತದೆ. ಆಲಿಯಾ ಅವರು ತೆರೆಮೇಲೆ 15 ನಿಮಿಷ ಮಾತ್ರ ಕಾಣಿಸಿಕೊಳ್ಳುತ್ತಾರೆ ಎಂದು ರಾಜಮೌಳಿ ಈ ಮೊದಲೇ ಹೇಳಿದ್ದರು. ಆದರೆ, ಅದಕ್ಕೂ ಕಡಿಮೆ ಅವಧಿ ತೆರೆಮೇಲೆ ಕಾಣಿಸಿಕೊಂಡಿದ್ದರು ಅವರು. ಇದರಿಂದ ಆಲಿಯಾ ಬೇಸರಗೊಂಡಿದ್ದಾರೆ ಎಂದು ವರದಿ ಆಗಿತ್ತು. ಇದೇ ಸಮಯಕ್ಕೆ ‘ಆರ್​ಆರ್​ಆರ್​’ ಚಿತ್ರದ ಪೋಸ್ಟ್​ಗಳನ್ನು ಅವರು ಡಿಲೀಟ್​ ಮಾಡಿದ್ದರು. ಇದರಿಂದ ಅನುಮಾನ ಹೆಚ್ಚಿತ್ತು.

‘ನಾನು ರಾಜಮೌಳಿ ಬಗ್ಗೆ ಅಸಮಾಧಾನಗೊಂಡಿದ್ದೇನೆ, ಈ ಕಾರಣಕ್ಕೆ ಸಿನಿಮಾಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ಡಿಲೀಟ್​ ಮಾಡಿದ್ದೇನೆ ಎಂದು ವರದಿ ಆಗಿದೆ. ಹಳೆಯ ಪೋಸ್ಟ್​​ಗಳನ್ನು ಡಿಲೀಟ್​ ಮಾಡಿದ್ದನ್ನು ಆಧರಿಸಿ ಈ ರೀತಿಯ ಊಹೆಗಳನ್ನು ಮಾಡಬೇಡಿ ಎಂಬುದು ನನ್ನ ವಿನಂತಿ. ನನ್ನ ಪ್ರೊಫೈಲ್​ ಅಸ್ತವ್ಯಸ್ಥವಾಗಿ ಕಾಣದೇ ಇರಲಿ ಎಂದು ನಾನು ಯಾವಾಗಲೂ ಹಳೆಯ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್​ ಮಾಡುತ್ತೇನೆ’ ಎಂದಿದ್ದಾರೆ ಆಲಿಯಾ.

‘ನಾನು ಆರ್​ಆರ್​ಆರ್ ಚಿತ್ರದ ಭಾಗವಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ. ನಾನು ಸೀತಾ ಪಾತ್ರವನ್ನು ಇಷ್ಟಪಟ್ಟೆ. ರಾಜಮೌಳಿ ಅವರ ನಿರ್ದೇಶನವನ್ನೂ ಇಷ್ಟಪಟ್ಟೆ. ಜ್ಯೂ. ಎನ್​ಟಿಆರ್​ ಮತ್ತು ರಾಮ್​ ಚರಣ್ ಜತೆ ಕೆಲಸ ಮಾಡಿದ್ದಕ್ಕೆ ಖುಷಿ ಇದೆ. ಈ ಚಿತ್ರದಲ್ಲಿ ನನಗೆ ಪ್ರತಿಯೊಂದು ವಿಷಯವೂ ಇಷ್ಟವಾಗಿದೆ’ ಎಂದಿರುವ ಆಲಿಯಾ, ‘ಈ ಅಧ್ಬುತ ಚಿತ್ರವನ್ನು ಮಾಡಲು ರಾಜಮೌಳಿ ಮತ್ತು ಅವರ ತಂಡ ಹಲವು ವರ್ಷ ಶ್ರಮ ಹಾಕಿದೆ. ಈ ಕಾರಣಕ್ಕೆ ನಾನು ಈ ವಿಚಾರವನ್ನು ಸ್ಪಷ್ಟಪಡಿಸುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಪ್ರಿಯಕರನ ಜತೆ ಇದ್ದಾಗಲೂ ‘ಆರ್​ಆರ್​ಆರ್​’ ಪ್ರಚಾರ ಮಾಡಿದ ನಟಿ ಆಲಿಯಾ ಭಟ್​; ವಿಡಿಯೋ ವೈರಲ್​

‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​

Published On - 6:30 pm, Thu, 31 March 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ