AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಅವಳಿ ಮಕ್ಕಳಿಗೆ ಜನ್ಮ ನೀಡ್ತಾರಾ ಆಲಿಯಾ? ಒಂದು ಸುಳ್ಳು, ಎರಡು ಸತ್ಯ ಹೇಳಿ ಗುಟ್ಟು ಬಿಟ್ಟುಕೊಟ್ಟ ರಣಬೀರ್​

Alia Bhatt | Ranbir Kapoor: ‘ಅವಳಿ ಮಕ್ಕಳ ತಂದೆ ಆಗುತ್ತಿದ್ದೇನೆ. ದೊಡ್ಡ ಪೌರಾಣಿಕ ಸಿನಿಮಾದಲ್ಲಿ ನಟಿಸಿದ್ದೇನೆ. ಚಿತ್ರರಂಗದಿಂದ ದೀರ್ಘ ಕಾಲ ಬ್ರೇಕ್​ ತೆಗೆದುಕೊಳ್ಳುತ್ತೇನೆ’ ಎಂದು 3 ವಾಕ್ಯಗಳನ್ನು ರಣಬೀರ್​ ಕಪೂರ್ ಹೇಳಿದ್ದಾರೆ. ಇದರಲ್ಲಿ ಒಂದು ಸುಳ್ಳು, ಎರಡು ಸತ್ಯ!

Alia Bhatt: ಅವಳಿ ಮಕ್ಕಳಿಗೆ ಜನ್ಮ ನೀಡ್ತಾರಾ ಆಲಿಯಾ? ಒಂದು ಸುಳ್ಳು, ಎರಡು ಸತ್ಯ ಹೇಳಿ ಗುಟ್ಟು ಬಿಟ್ಟುಕೊಟ್ಟ ರಣಬೀರ್​
ಆಲಿಯಾ ಭಟ್, ರಣಬೀರ್ ಕಪೂರ್
TV9 Web
| Edited By: |

Updated on: Jul 17, 2022 | 3:14 PM

Share

ನಟಿ ಆಲಿಯಾ ಭಟ್​ (Alia Bhatt) ಅವರು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಅವರು ಇತ್ತೀಚೆಗೆ ಜಗಜ್ಜಾಹೀರುಗೊಳಿಸಿದ್ದರು. ಪ್ರಿಯಕರ ರಣಬೀರ್​ ಕಪೂರ್​ (Ranbir Kapoor) ಜೊತೆ ಏಪ್ರಿಲ್​ 14ರಂದು ಮದುವೆ ಆಗಿದ್ದ ಅವರು ಕೇವಲ ಎರಡೂವರೆ ತಿಂಗಳಿಗೆ ಪ್ರೆಗ್ನೆನ್ಸಿ ನ್ಯೂಸ್​ ನೀಡಿದ್ದು ಎಲ್ಲರಿಗೂ ಅಚ್ಚರಿ ಉಂಟು ಮಾಡಿತ್ತು. ಈಗ ಈ ದಂಪತಿಗೆ ಜನಿಸುವ ಮಗು ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ಆಲಿಯಾ ಭಟ್​ ಅವರು ಅವಳಿ (Twins) ಮಕ್ಕಳಿಗೆ ಜನ್ಮ ನೀಡುತ್ತಾರೆ ಎಂದು ಕೂಡ ಅಭಿಮಾನಿಗಳು ಊಹಿಸುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ರಣಬೀರ್​ ಕಪೂರ್​ ಹೇಳಿರುವ ಒಂದು ಸುಳ್ಳು ಮತ್ತು ಎರಡು ಸತ್ಯ!

ರಣಬೀರ್​ ಕಪೂರ್ ಅವರು ‘ಶಂಷೇರಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜುಲೈ 22ರಂದು ಬಿಡುಗಡೆ ಆಗಲಿದೆ. ಅದರ ಸಲುವಾಗಿ ಅನೇಕ ಕಡೆಗಳಲ್ಲಿ ಅವರು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರಿಗೆ ಖಾಸಗಿ ಜೀವನದ ಬಗ್ಗೆಯೂ ಪ್ರಶ್ನೆಗಳು ಎದುರಾಗುತ್ತಿವೆ. ಫಿಲ್ಮ್​ ಕಾಂಪ್ಯಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಅವರು ಅವಳಿ ಮಕ್ಕಳ ಬಗ್ಗೆ ಸುಳಿವು ನೀಡಿದ್ದಾರೆ. ಒಂದು ಸುಳ್ಳು ಮತ್ತು ಎರಡು ಸತ್ಯವನ್ನು ಹೇಳಬೇಕು ಎಂದು ರಣಬೀರ್​ ಕಪೂರ್​ ಅವರಿಗೆ ಟಾಸ್ಕ್​ ನೀಡಲಾಗಿತ್ತು. ಅದಕ್ಕೆ ಅವರು ನೀಡಿದ ಉತ್ತರ ಅಚ್ಚರಿ ಮೂಡಿಸಿದೆ.

‘ನಾನು ಅವಳಿ ಮಕ್ಕಳ ತಂದೆ ಆಗುತ್ತಿದ್ದೇನೆ. ಒಂದು ದೊಡ್ಡ ಪೌರಾಣಿಕ ಸಿನಿಮಾದಲ್ಲಿ ನಟಿಸಿದ್ದೇನೆ. ಚಿತ್ರರಂಗದಿಂದ ದೀರ್ಘ ಕಾಲ ಬ್ರೇಕ್​ ಪಡೆದುಕೊಳ್ಳುತ್ತೇನೆ’ ಎಂದು ಮೂರು ವಾಕ್ಯಗಳನ್ನು ರಣಬೀರ್​ ಕಪೂರ್ ಹೇಳಿದ್ದಾರೆ. ಈ ಪೈಕಿ ಎರಡು ಸತ್ಯ ಯಾವುದು? ಒಂದು ಸುಳ್ಳು ಯಾವುದು ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ. ಪೌರಾಣಿಕ ಶೈಲಿಯ ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಅವರು ನಟಿಸಿರುವುದು ನಿಜ. ಇನ್ನುಳಿದ ಎರಡು ಹೇಳಿಕೆಯಲ್ಲಿ ಒಂದು ಸುಳ್ಳು, ಇನ್ನೊಂದು ನಿಜ. ಹಾಗಾದರೆ ಸುಳ್ಳು ಯಾವುದು?

ಇದನ್ನೂ ಓದಿ
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?

ರಣಬೀರ್​ ಕಪೂರ್​ ಅವರು ಚಿತ್ರರಂಗದಿಂದ ದೀರ್ಘಕಾಲ ಬ್ರೇಕ್​ ತೆಗೆದುಕೊಳ್ಳುವುದು ಅನುಮಾನ. ಹಾಗಾಗಿ ಆ ಹೇಳಿಕೆಯೇ ಸುಳ್ಳು ಎಂಬುದು ಅಭಿಮಾನಿಗಳ ಊಹೆ. ಅವಳಿ ಮಕ್ಕಳಿಗೆ ತಂದೆ ಆಗುತ್ತಿರುವುದೇ ಸತ್ಯ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ. ಆಲಿಯಾ ಭಟ್​ ಅವರು ಜನ್ಮ ನೀಡಿದ ನಂತರವೇ ಈ ಒಗಟಿಗೆ ಉತ್ತರ ಸಿಗಲಿದೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ