‘ಭಾರತ ಬಿಟ್ಟು ತೊಲಗಿ’: ಆಲಿಯಾ ಭಟ್​ಗೆ ಛೀಮಾರಿ ಹಾಕಿದ ಫ್ಯಾನ್ಸ್, ನಟಿ ಮಾಡಿದ ತಪ್ಪೇನು?

ಸೋಮವಾರ (ಮೇ 20) ಅಮಿತಾಭ್ ಬಚ್ಚನ್, ಹೃತಿಕ್ ರೋಷನ್, ಶಾರುಖ್ ಖಾನ್, ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮೊದಲಾದವರು ವೋಟ್ ಮಾಡಿದ್ದಾರೆ. ರಣಬೀರ್ ಕಪೂರ್ ಕೂಡ ಮತ ಚಲಾಯಿಸಿದ್ದಾರೆ. ಆದರೆ, ರಣಬೀರ್ ಪತ್ನಿ ಆಲಿಯಾ ವೋಟ್ ಮಾಡಿಲ್ಲ.

‘ಭಾರತ ಬಿಟ್ಟು ತೊಲಗಿ’: ಆಲಿಯಾ ಭಟ್​ಗೆ ಛೀಮಾರಿ ಹಾಕಿದ ಫ್ಯಾನ್ಸ್, ನಟಿ ಮಾಡಿದ ತಪ್ಪೇನು?
ಆಲಿಯಾ
Follow us
|

Updated on: May 22, 2024 | 7:00 AM

ನಟಿ ಆಲಿಯಾ ಭಟ್ (Alia Bhatt) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಬರೋಬ್ಬರಿ 8.45 ಕೋಟಿ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಇರೋ ಸಾಕ್ಷಿ. ಈ ಮಧ್ಯೆ ಆಲಿಯಾ ಭಟ್ ಅವರ ನಾಗರಿಕತ್ವ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅಸಲಿಗೆ ಆಲಿಯಾ ಭಾರತೀಯ ಪ್ರಜೆ ಅಲ್ಲ. ಅವರು ಬ್ರಿಟನ್ ನಾಗರಿಕತ್ವ ಹೊಂದಿದ್ದಾರೆ. ಹೀಗಾಗಿ, ಅವರಿಗೆ ವೋಟ್ ಮಾಡೋ ಹಕ್ಕು ಇಲ್ಲ. ಆಲಿಯಾ ಭಾರತೀಯ ನಾಗರಿಕತ್ವ ಪಡೆದುಕೊಳ್ಳಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಆಲಿಯಾಗೆ ಭಾರತ ಬಿಟ್ಟು ಹೋಗಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ಸೋಮವಾರ (ಮೇ 20) ಅಮಿತಾಭ್ ಬಚ್ಚನ್, ಹೃತಿಕ್ ರೋಷನ್, ಶಾರುಖ್ ಖಾನ್, ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮೊದಲಾದವರು ವೋಟ್ ಮಾಡಿದ್ದಾರೆ. ರಣಬೀರ್ ಕಪೂರ್ ಕೂಡ ಮತ ಚಲಾಯಿಸಿದ್ದಾರೆ. ಆದರೆ, ರಣಬೀರ್ ಪತ್ನಿ ಆಲಿಯಾ ಆಗಮಿಸಿಲ್ಲ. ಇದಕ್ಕೆ ಕಾರಣ ಅವರು ಭಾರತೀಯ ನಾಗರಿಕತ್ವ ಹೊಂದಿರದೇ ಇರುವುದು. ಇದನ್ನು ಅನೇಕರು ಟೀಕಿಸುತ್ತಿದ್ದಾರೆ.

ಈ ಮೊದಲು ಅಕ್ಷಯ್ ಕುಮಾರ್ ಅವರು ಈ ವಿಚಾರಕ್ಕೆ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಅವರು ಭಾರತದ ನಾಗರಿಕತ್ವ ಬಿಟ್ಟು ಕೆನಡಾ ಪೌರತ್ವ ಪಡೆದಿದ್ದರು. ಆ ಬಳಿಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅವರು ಭಾರತೀಯ ಪೌರತ್ವ ಪಡೆದರು. ಈ ಬಾರಿ ಅವರು ವೋಟ್ ಕೂಡ ಮಾಡಿದ್ದಾರೆ. ಆಲಿಯಾ ಭಟ್ ಕೂಡ ಭಾರತೀಯ ಪೌರತ್ವ ಪಡೆಯ ಬೇಕು ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ರಣ್​ಬೀರ್ ಕಪೂರ್-ಆಲಿಯಾ ಭಟ್ ಹೊಸ ಬಂಗಲೆಯ ಬಜೆಟ್ ಎಷ್ಟು ಕೋಟಿ?

ಈ ಮಧ್ಯೆ ಆಲಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ನಿಗೂಡಾರ್ಥದ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆಲಿಯಾ ಭಟ್ ಅವರು ಈ ಮೊದಲು ಅವರ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್’ ಚಿತ್ರದ ಪ್ರಚಾರಕ್ಕೆ ಇಂಗ್ಲೆಂಡ್ ತೆರಳಿದ್ದರು. ಈ ವೇಳೆ ಆಲಿಯಾಗೆ ಬ್ರಿಟನ್ ನಾಗರಿಕತ್ವದ ಬಗ್ಗೆ ಪ್ರಶ್ನೆ ಎದುರಾಗಿತ್ತು. ‘ನನ್ನ ತಾಯಿ ಬರ್ನಿಂಗ್​ಹ್ಯಾಮ್​ನವರು. ನಾನು ಭಾರತದಲ್ಲಿ ಹುಟ್ಟಿ ಬೆಳೆದೆ. ನನ್ನ ಅಜ್ಜಿ ತಮ್ಮ ಜೀವನವನ್ನು ಸಂಪೂರ್ಣವಾಗಿ ಇಂಗ್ಲೆಂಡ್​ನಲ್ಲಿ ಕಳೆದರು. ಅವರಿಗೆ ಇಂಗ್ಲೆಂಡ್ ಇಂಗ್ಲಿಂಷ್ ಆ್ಯಕ್ಸೆಂಟ್ ಬರುತ್ತಿತ್ತು’ ಎಂದಿದ್ದರು ಆಲಿಯಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..