AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭಾರತ ಬಿಟ್ಟು ತೊಲಗಿ’: ಆಲಿಯಾ ಭಟ್​ಗೆ ಛೀಮಾರಿ ಹಾಕಿದ ಫ್ಯಾನ್ಸ್, ನಟಿ ಮಾಡಿದ ತಪ್ಪೇನು?

ಸೋಮವಾರ (ಮೇ 20) ಅಮಿತಾಭ್ ಬಚ್ಚನ್, ಹೃತಿಕ್ ರೋಷನ್, ಶಾರುಖ್ ಖಾನ್, ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮೊದಲಾದವರು ವೋಟ್ ಮಾಡಿದ್ದಾರೆ. ರಣಬೀರ್ ಕಪೂರ್ ಕೂಡ ಮತ ಚಲಾಯಿಸಿದ್ದಾರೆ. ಆದರೆ, ರಣಬೀರ್ ಪತ್ನಿ ಆಲಿಯಾ ವೋಟ್ ಮಾಡಿಲ್ಲ.

‘ಭಾರತ ಬಿಟ್ಟು ತೊಲಗಿ’: ಆಲಿಯಾ ಭಟ್​ಗೆ ಛೀಮಾರಿ ಹಾಕಿದ ಫ್ಯಾನ್ಸ್, ನಟಿ ಮಾಡಿದ ತಪ್ಪೇನು?
ಆಲಿಯಾ
ರಾಜೇಶ್ ದುಗ್ಗುಮನೆ
|

Updated on: May 22, 2024 | 7:00 AM

Share

ನಟಿ ಆಲಿಯಾ ಭಟ್ (Alia Bhatt) ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದು. ಇನ್​ಸ್ಟಾಗ್ರಾಮ್​ನಲ್ಲಿ ಅವರಿಗೆ ಬರೋಬ್ಬರಿ 8.45 ಕೋಟಿ ಹಿಂಬಾಲಕರು ಇದ್ದಾರೆ. ಇದು ಅವರ ಜನಪ್ರಿಯತೆಗೆ ಇರೋ ಸಾಕ್ಷಿ. ಈ ಮಧ್ಯೆ ಆಲಿಯಾ ಭಟ್ ಅವರ ನಾಗರಿಕತ್ವ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಅಸಲಿಗೆ ಆಲಿಯಾ ಭಾರತೀಯ ಪ್ರಜೆ ಅಲ್ಲ. ಅವರು ಬ್ರಿಟನ್ ನಾಗರಿಕತ್ವ ಹೊಂದಿದ್ದಾರೆ. ಹೀಗಾಗಿ, ಅವರಿಗೆ ವೋಟ್ ಮಾಡೋ ಹಕ್ಕು ಇಲ್ಲ. ಆಲಿಯಾ ಭಾರತೀಯ ನಾಗರಿಕತ್ವ ಪಡೆದುಕೊಳ್ಳಬೇಕಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಆಲಿಯಾಗೆ ಭಾರತ ಬಿಟ್ಟು ಹೋಗಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ಸೋಮವಾರ (ಮೇ 20) ಅಮಿತಾಭ್ ಬಚ್ಚನ್, ಹೃತಿಕ್ ರೋಷನ್, ಶಾರುಖ್ ಖಾನ್, ಸಲ್ಮಾನ್ ಖಾನ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮೊದಲಾದವರು ವೋಟ್ ಮಾಡಿದ್ದಾರೆ. ರಣಬೀರ್ ಕಪೂರ್ ಕೂಡ ಮತ ಚಲಾಯಿಸಿದ್ದಾರೆ. ಆದರೆ, ರಣಬೀರ್ ಪತ್ನಿ ಆಲಿಯಾ ಆಗಮಿಸಿಲ್ಲ. ಇದಕ್ಕೆ ಕಾರಣ ಅವರು ಭಾರತೀಯ ನಾಗರಿಕತ್ವ ಹೊಂದಿರದೇ ಇರುವುದು. ಇದನ್ನು ಅನೇಕರು ಟೀಕಿಸುತ್ತಿದ್ದಾರೆ.

ಈ ಮೊದಲು ಅಕ್ಷಯ್ ಕುಮಾರ್ ಅವರು ಈ ವಿಚಾರಕ್ಕೆ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಅವರು ಭಾರತದ ನಾಗರಿಕತ್ವ ಬಿಟ್ಟು ಕೆನಡಾ ಪೌರತ್ವ ಪಡೆದಿದ್ದರು. ಆ ಬಳಿಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅವರು ಭಾರತೀಯ ಪೌರತ್ವ ಪಡೆದರು. ಈ ಬಾರಿ ಅವರು ವೋಟ್ ಕೂಡ ಮಾಡಿದ್ದಾರೆ. ಆಲಿಯಾ ಭಟ್ ಕೂಡ ಭಾರತೀಯ ಪೌರತ್ವ ಪಡೆಯ ಬೇಕು ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ರಣ್​ಬೀರ್ ಕಪೂರ್-ಆಲಿಯಾ ಭಟ್ ಹೊಸ ಬಂಗಲೆಯ ಬಜೆಟ್ ಎಷ್ಟು ಕೋಟಿ?

ಈ ಮಧ್ಯೆ ಆಲಿಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ನಿಗೂಡಾರ್ಥದ ಪೋಸ್ಟ್ ಒಂದನ್ನು ಮಾಡಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆಲಿಯಾ ಭಟ್ ಅವರು ಈ ಮೊದಲು ಅವರ ಹಾಲಿವುಡ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್’ ಚಿತ್ರದ ಪ್ರಚಾರಕ್ಕೆ ಇಂಗ್ಲೆಂಡ್ ತೆರಳಿದ್ದರು. ಈ ವೇಳೆ ಆಲಿಯಾಗೆ ಬ್ರಿಟನ್ ನಾಗರಿಕತ್ವದ ಬಗ್ಗೆ ಪ್ರಶ್ನೆ ಎದುರಾಗಿತ್ತು. ‘ನನ್ನ ತಾಯಿ ಬರ್ನಿಂಗ್​ಹ್ಯಾಮ್​ನವರು. ನಾನು ಭಾರತದಲ್ಲಿ ಹುಟ್ಟಿ ಬೆಳೆದೆ. ನನ್ನ ಅಜ್ಜಿ ತಮ್ಮ ಜೀವನವನ್ನು ಸಂಪೂರ್ಣವಾಗಿ ಇಂಗ್ಲೆಂಡ್​ನಲ್ಲಿ ಕಳೆದರು. ಅವರಿಗೆ ಇಂಗ್ಲೆಂಡ್ ಇಂಗ್ಲಿಂಷ್ ಆ್ಯಕ್ಸೆಂಟ್ ಬರುತ್ತಿತ್ತು’ ಎಂದಿದ್ದರು ಆಲಿಯಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ