AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ‘ಪ್ರಚಾರಕ್ಕಾಗಿ ಏನೆಲ್ಲ ಮಾಡ್ತಾರಪ್ಪ’: ಕಂಡವರ ಚಪ್ಪಲಿ ಎತ್ತಿಕೊಟ್ಟ ಆಲಿಯಾ ಭಟ್​ ಬಗ್ಗೆ ನೆಟ್ಟಿಗರ ಟೀಕೆ

ಆಲಿಯಾ ಭಟ್​ ಅವರು ಪಾಪರಾಜಿಯ ಚಪ್ಪಲಿ ಮುಟ್ಟಿದ ವಿಡಿಯೋ ವೈರಲ್​ ಆಗಿದೆ. ಇದೆಲ್ಲವೂ ಪ್ರಚಾರಕ್ಕಾಗಿಯೇ ಮಾಡಿದ್ದು ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ.

Alia Bhatt: ‘ಪ್ರಚಾರಕ್ಕಾಗಿ ಏನೆಲ್ಲ ಮಾಡ್ತಾರಪ್ಪ’: ಕಂಡವರ ಚಪ್ಪಲಿ ಎತ್ತಿಕೊಟ್ಟ ಆಲಿಯಾ ಭಟ್​ ಬಗ್ಗೆ ನೆಟ್ಟಿಗರ ಟೀಕೆ
ಫ್ಯಾಮಿಲಿ ಜೊತೆ ರೆಸ್ಟೋರೆಂಟ್​ಗೆ ಬಂದ ಆಲಿಯಾ ಭಟ್​
ಮದನ್​ ಕುಮಾರ್​
|

Updated on: Jul 14, 2023 | 12:02 PM

Share

ನಟಿ ಆಲಿಯಾ ಭಟ್​ (Alia Bhatt) ಅವರು ಬಾಲಿವುಡ್​ನಲ್ಲಿ ಸ್ಟಾರ್​ ಕಲಾವಿದೆಯಾಗಿ ಮಿಂಚುತ್ತಿದ್ದಾರೆ. ಹಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಈಗ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahaani) ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅದಕ್ಕೂ ಮುನ್ನವೇ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ಆಲಿಯಾ ಭಟ್​ ಅವರ ವರ್ತನೆ. ಮುಂಬೈನ ಬೀದಿಯಲ್ಲಿ ಅವರು ಕಂಡವರ ಚಪ್ಪಲಿಯನ್ನು ಮುಟ್ಟಿದ್ದಾರೆ. ಕೆಲವರು ನಟಿಯ ಸರಳತೆಗೆ ಭೇಷ್​ ಎಂದಿದ್ದಾರೆ. ಆದರೆ ಇನ್ನೂ ಕೆಲವರು ಇದನ್ನು ಪ್ರಚಾರದ (Publicity) ಗಿಮಿಕ್​ ಎಂದು ಟೀಕೆ ಮಾಡಿದ್ದಾರೆ. ಅಲ್ಲಿ ನಡೆದಿದ್ದು ಏನು? ಇಲ್ಲಿದೆ ಮಾಹಿತಿ..

ಆಲಿಯಾ ಭಟ್​ ಅವರು ತಾಯಿ ಸೋನಿ ರಾಜಧಾನ್​ ಜೊತೆ ಮುಂಬೈನ ರೆಸ್ಟೋರೆಂಟ್​ವೊಂದಕ್ಕೆ ತೆರಳಿದ್ದರು. ಈ ವೇಳೆ ಅವರ ಫೋಟೋ ಕ್ಲಿಕ್ಕಿಸಲು ಅನೇಕ ಪಾಪರಾಜಿಗಳು ಮುತ್ತಿಕೊಂಡರು. ಆಲಿಯಾ ಭಟ್​ ನಡೆದು ಬರುತ್ತಿದ್ದ ಬೀದಿಯಲ್ಲಿ ಯಾರದ್ದೋ ಒಂದು ಚಪ್ಪಲಿ ಬಿದ್ದುಕೊಂಡಿತ್ತು. ಅದನ್ನು ಗಮನಿಸಿದ ಆಲಿಯಾ ಅವರು, ‘ಇದು ಯಾರದ್ದು’ ಅಂತ ಕೇಳಿದರು. ಅಲ್ಲಿದ್ದ ಪಾಪರಾಜಿಗಳಲ್ಲಿ ಒಬ್ಬರು ಚಪ್ಪಲಿ ಬೀಳಿಸಿಕೊಂಡಿದ್ದಾರೆ ಎಂಬುದು ಆಲಿಯಾಗೆ ಗೊತ್ತಾಯಿತು. ತಾವೇ ಬಗ್ಗಿ, ಕೈಯಾರೆ ಆ ಚಪ್ಪಲಿಯನ್ನು ಅವರು ಎತ್ತಿಕೊಟ್ಟರು.

Alia Bhatt: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

ಆಲಿಯಾ ಅವರು ಚಪ್ಪಲಿ ಮುಟ್ಟಿದ ವಿಡಿಯೋ ವೈರಲ್​ ಆಗಿದೆ. ಇದೆಲ್ಲವೂ ಪ್ರಚಾರಕ್ಕಾಗಿಯೇ ಮಾಡಿದ್ದು ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಗಲಿದೆ. ರಿಲೀಸ್​ಗೆ ಇನ್ನು ಕೆಲವೇ ದಿನಗಳು ಇರುವಾಗ ಸುದ್ದಿ ಆಗಬೇಕು ಎಂಬ ಕಾರಣಕ್ಕೆ ಸೆಲೆಬ್ರಿಟಿಗಳು ಇಂಥ ಗಿಮಿಕ್​ ಮಾಡುತ್ತಾರೆ ಎಂದು ನೆಟ್ಟಿಗರು ಖಾರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಈ ಟೀಕೆಗಳಿಗೆ ಆಲಿಯಾ ಭಟ್​ ತಲೆ ಕೆಡಿಸಿಕೊಂಡಿಲ್ಲ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಜೋಡಿಯಾಗಿ ರಣವೀರ್​ ಸಿಂಗ್​ ನಟಿಸಿದ್ದಾರೆ. ಕರಣ್​ ಜೋಹರ್​ ಅವರು ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ನೋಡಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ತುಂಬ ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಲವ್​ಸ್ಟೋರಿ ಮತ್ತು ಫ್ಯಾಮಿಲಿ ಡ್ರಾಮಾ ಇದರಲ್ಲಿ ಹೈಲೈಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?