AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ‘ಪ್ರಚಾರಕ್ಕಾಗಿ ಏನೆಲ್ಲ ಮಾಡ್ತಾರಪ್ಪ’: ಕಂಡವರ ಚಪ್ಪಲಿ ಎತ್ತಿಕೊಟ್ಟ ಆಲಿಯಾ ಭಟ್​ ಬಗ್ಗೆ ನೆಟ್ಟಿಗರ ಟೀಕೆ

ಆಲಿಯಾ ಭಟ್​ ಅವರು ಪಾಪರಾಜಿಯ ಚಪ್ಪಲಿ ಮುಟ್ಟಿದ ವಿಡಿಯೋ ವೈರಲ್​ ಆಗಿದೆ. ಇದೆಲ್ಲವೂ ಪ್ರಚಾರಕ್ಕಾಗಿಯೇ ಮಾಡಿದ್ದು ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ.

Alia Bhatt: ‘ಪ್ರಚಾರಕ್ಕಾಗಿ ಏನೆಲ್ಲ ಮಾಡ್ತಾರಪ್ಪ’: ಕಂಡವರ ಚಪ್ಪಲಿ ಎತ್ತಿಕೊಟ್ಟ ಆಲಿಯಾ ಭಟ್​ ಬಗ್ಗೆ ನೆಟ್ಟಿಗರ ಟೀಕೆ
ಫ್ಯಾಮಿಲಿ ಜೊತೆ ರೆಸ್ಟೋರೆಂಟ್​ಗೆ ಬಂದ ಆಲಿಯಾ ಭಟ್​
ಮದನ್​ ಕುಮಾರ್​
|

Updated on: Jul 14, 2023 | 12:02 PM

Share

ನಟಿ ಆಲಿಯಾ ಭಟ್​ (Alia Bhatt) ಅವರು ಬಾಲಿವುಡ್​ನಲ್ಲಿ ಸ್ಟಾರ್​ ಕಲಾವಿದೆಯಾಗಿ ಮಿಂಚುತ್ತಿದ್ದಾರೆ. ಹಲವು ಪ್ರಾಜೆಕ್ಟ್​ಗಳು ಅವರ ಕೈಯಲ್ಲಿವೆ. ಈಗ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahaani) ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅದಕ್ಕೂ ಮುನ್ನವೇ ಅವರನ್ನು ಟ್ರೋಲ್​ ಮಾಡಲಾಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ಆಲಿಯಾ ಭಟ್​ ಅವರ ವರ್ತನೆ. ಮುಂಬೈನ ಬೀದಿಯಲ್ಲಿ ಅವರು ಕಂಡವರ ಚಪ್ಪಲಿಯನ್ನು ಮುಟ್ಟಿದ್ದಾರೆ. ಕೆಲವರು ನಟಿಯ ಸರಳತೆಗೆ ಭೇಷ್​ ಎಂದಿದ್ದಾರೆ. ಆದರೆ ಇನ್ನೂ ಕೆಲವರು ಇದನ್ನು ಪ್ರಚಾರದ (Publicity) ಗಿಮಿಕ್​ ಎಂದು ಟೀಕೆ ಮಾಡಿದ್ದಾರೆ. ಅಲ್ಲಿ ನಡೆದಿದ್ದು ಏನು? ಇಲ್ಲಿದೆ ಮಾಹಿತಿ..

ಆಲಿಯಾ ಭಟ್​ ಅವರು ತಾಯಿ ಸೋನಿ ರಾಜಧಾನ್​ ಜೊತೆ ಮುಂಬೈನ ರೆಸ್ಟೋರೆಂಟ್​ವೊಂದಕ್ಕೆ ತೆರಳಿದ್ದರು. ಈ ವೇಳೆ ಅವರ ಫೋಟೋ ಕ್ಲಿಕ್ಕಿಸಲು ಅನೇಕ ಪಾಪರಾಜಿಗಳು ಮುತ್ತಿಕೊಂಡರು. ಆಲಿಯಾ ಭಟ್​ ನಡೆದು ಬರುತ್ತಿದ್ದ ಬೀದಿಯಲ್ಲಿ ಯಾರದ್ದೋ ಒಂದು ಚಪ್ಪಲಿ ಬಿದ್ದುಕೊಂಡಿತ್ತು. ಅದನ್ನು ಗಮನಿಸಿದ ಆಲಿಯಾ ಅವರು, ‘ಇದು ಯಾರದ್ದು’ ಅಂತ ಕೇಳಿದರು. ಅಲ್ಲಿದ್ದ ಪಾಪರಾಜಿಗಳಲ್ಲಿ ಒಬ್ಬರು ಚಪ್ಪಲಿ ಬೀಳಿಸಿಕೊಂಡಿದ್ದಾರೆ ಎಂಬುದು ಆಲಿಯಾಗೆ ಗೊತ್ತಾಯಿತು. ತಾವೇ ಬಗ್ಗಿ, ಕೈಯಾರೆ ಆ ಚಪ್ಪಲಿಯನ್ನು ಅವರು ಎತ್ತಿಕೊಟ್ಟರು.

Alia Bhatt: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

ಆಲಿಯಾ ಅವರು ಚಪ್ಪಲಿ ಮುಟ್ಟಿದ ವಿಡಿಯೋ ವೈರಲ್​ ಆಗಿದೆ. ಇದೆಲ್ಲವೂ ಪ್ರಚಾರಕ್ಕಾಗಿಯೇ ಮಾಡಿದ್ದು ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಗಲಿದೆ. ರಿಲೀಸ್​ಗೆ ಇನ್ನು ಕೆಲವೇ ದಿನಗಳು ಇರುವಾಗ ಸುದ್ದಿ ಆಗಬೇಕು ಎಂಬ ಕಾರಣಕ್ಕೆ ಸೆಲೆಬ್ರಿಟಿಗಳು ಇಂಥ ಗಿಮಿಕ್​ ಮಾಡುತ್ತಾರೆ ಎಂದು ನೆಟ್ಟಿಗರು ಖಾರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಈ ಟೀಕೆಗಳಿಗೆ ಆಲಿಯಾ ಭಟ್​ ತಲೆ ಕೆಡಿಸಿಕೊಂಡಿಲ್ಲ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಜೋಡಿಯಾಗಿ ರಣವೀರ್​ ಸಿಂಗ್​ ನಟಿಸಿದ್ದಾರೆ. ಕರಣ್​ ಜೋಹರ್​ ಅವರು ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ನೋಡಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ತುಂಬ ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಲವ್​ಸ್ಟೋರಿ ಮತ್ತು ಫ್ಯಾಮಿಲಿ ಡ್ರಾಮಾ ಇದರಲ್ಲಿ ಹೈಲೈಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ