ಮದುವೆ ದಿನಾಂಕ ಮುಂದೂಡಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಈ ನಿರ್ಧಾರಕ್ಕಿದೆ ಮುಖ್ಯ ಕಾರಣ

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಭಟ್​ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅತ್ತ, ರಣಬೀರ್ ಕಪೂರ್ ಕೂಡ ಅನೇಕ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಮದುವೆ ದಿನಾಂಕ ಮುಂದೂಡಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಈ ನಿರ್ಧಾರಕ್ಕಿದೆ ಮುಖ್ಯ ಕಾರಣ
ರಣಬೀರ್​ ಕಪೂರ್​, ಆಲಿಯಾ ಭಟ್​
Follow us
| Edited By: ಮದನ್​ ಕುಮಾರ್​

Updated on: Nov 10, 2021 | 1:40 PM

ನಟಿ ಆಲಿಯಾ ಭಟ್​ (Alia Bhatt) ಮತ್ತು ನಟ ರಣಬೀರ್​ ಕಪೂರ್​ (Ranbir Kapoor ) ಶೀಘ್ರದಲ್ಲೇ ಮದುವೆ ಆಗುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿಬರುತ್ತಲೇ ಇದೆ. ಈ ವರ್ಷ ಡಿಸೆಂಬರ್​ನಲ್ಲಿ ಈ ಜೋಡಿ ಹಸೆಮಣೆ ಏರಿಲಿದೆ ಎನ್ನಲಾಗಿತ್ತು. ಆದರೆ ಈಗ ಹೊಸದೊಂದು ಸುದ್ದಿ ಹರಡಿದೆ. ಸದ್ಯಕ್ಕೆ ಆಲಿಯಾ ಮತ್ತು ರಣಬೀರ್​ ಮದುವೆ ದಿನಾಂಕ ಮುಂದೂಡಿಕೊಂಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಎರಡು ಮುಖ್ಯ ಕಾರಣಗಳಿವೆ. ಈ ಬಗ್ಗೆ ಅವರ ಆಪ್ತ ಮೂಲಗಳು ಮಾಧ್ಯಮವೊಂದಕ್ಕೆ ಮಾಹಿತಿ ಬಿಟ್ಟುಕೊಟ್ಟಿವೆ. ಆದರೆ ಆಲಿಯಾ ಆಗಲಿ, ರಣಬೀರ್​ ಆಗಲಿ ಯಾವುದೇ ಹೇಳಿಕೆ ನೀಡಿಲ್ಲ.

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅನೇಕ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅತ್ತ, ರಣಬೀರ್​ ಕಪೂರ್​ ಕೂಡ ಈಗಾಗಲೇ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡು ಕಾರ್ಯನಿರತರಾಗಿದ್ದಾರೆ. ಒಪ್ಪಿಕೊಂಡಿರುವ ಎಲ್ಲ ಸಿನಿಮಾಗಳ ಕೆಲಸಗಳನ್ನು ಮುಗಿಸಲು ಈ ಜೋಡಿಗೆ ಸ್ವಲ್ಪ ಸಮಯ ಹಿಡಿಯಲಿದೆ. ಹಾಗಾಗಿ ಈ ವರ್ಷ ಡಿಸೆಂಬರ್​ ಬದಲಿಗೆ, 2022ರ ಏಪ್ರಿಲ್​​ ತಿಂಗಳಲ್ಲಿ ಸಪ್ತಪದಿ ತುಳಿಯಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ದೀಪಾವಳಿ ಹಬ್ಬದಲ್ಲಿ ಆಲಿಯಾ-ರಣಬೀರ್​ ವಿಶೇಷ ಫೋಟೋ:

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಆಲಿಯಾ ಭಟ್​ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿತ್ತು. ರಣಬೀರ್​ ಕಪೂರ್​ ಮತ್ತು ಆಲಿಯಾ ಪ್ರೀತಿಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಆದರೆ ಅವರು ಸಾರ್ವಜನಿಕವಾಗಿ ಆ ಬಗ್ಗೆ ಮಾತನಾಡುವುದು ಕಡಿಮೆ. ಹಾಗಂತ ಕದ್ದು ಮುಚ್ಚಿ ಈ ಜೋಡಿ ಹಕ್ಕಿಗಳು ಓಡಾಡುತ್ತಿಲ್ಲ. ಅವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಅನೇಕ ಫೋಟೋಗಳು ಹರಿದಾಡುತ್ತಿವೆ. ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಂಡಿಲ್ಲ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಲಿಯಾ ಭಟ್​ ಇನ್ನೊಂದು ಹೊಸ ಫೋಟೋ ಶೇರ್​ ಮಾಡಿಕೊಂಡಿದ್ದರು. ಬಹಳ ಸಂಭ್ರಮದಿಂದ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ದೀಪಾವಳಿ ಆಚರಿಸಿದ್ದರು. ಇಬ್ಬರು ಪರಸ್ಪರ ತಬ್ಬಿಕೊಂಡು ಕ್ಯಾಮೆರಾಗೆ ಪೋಸ್​ ಕೂಡ ನೀಡಿದ್ದರು. ‘ಒಂದಷ್ಟು ಪ್ರೀತಿ.. ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಆ ಫೋಟೋಗೆ ಆಲಿಯಾ ಭಟ್​ ಕ್ಯಾಪ್ಷನ್​ ನೀಡಿದ್ದರು. ಇನ್ನೊಂದು ಫೋಟೋದಲ್ಲಿ ದೀಪಗಳನ್ನು ಹಿಡಿದುಕೊಂಡಿರುವ ಅವರು, ‘ಒಂದಷ್ಟು ಬೆಳಕು.. ಹ್ಯಾಪಿ ದೀಪಾವಳಿ’ ಎಂದು ಕ್ಯಾಪ್ಷನ್​ ನೀಡಿದ್ದರು.

ಈ ಫೋಟೋ ನೋಡಿದ ಬಳಿಕ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ಗೆ ಎಲ್ಲರೂ ಹಬ್ಬದ ಶುಭಾಶಯ ಕೋರಿದ್ದರು. ಅಲ್ಲದೇ, ಮದುವೆ ಯಾವಾಗ ಎಂದು ಪ್ರಶ್ನೆ ಮಾಡಿದ್ದರು. ಅದಕ್ಕೆ ಈ ಜೋಡಿ ಹಕ್ಕಿಗಳಿಂದ ಉತ್ತರ ಸಿಕ್ಕಿಲ್ಲ.

ಇದನ್ನೂ ಓದಿ:

ರಣಬೀರ್​ ಕಪೂರ್​ ಹುಟ್ಟುಹಬ್ಬ: ಆಲಿಯಾ ಭಟ್​ ಜೊತೆ ಮದುವೆಗೆ ಜೋರಾಗಿದೆ ತಯಾರಿ

ಅಕ್ಕನ ಬಟ್ಟೆ ಕದ್ದು ಪ್ರೇಯಸಿಗೆ ಗಿಫ್ಟ್​ ಮಾಡುತ್ತಿದ್ದ ರಣಬೀರ್​ ಕಪೂರ್​; ಎಲ್ಲರ ಎದುರು ಸತ್ಯ ಬಾಯ್ಬಿಟ್ಟ ರಿಧಿಮಾ

ತಾಜಾ ಸುದ್ದಿ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ