AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ​-ರಣಬೀರ್ ಮದುವೆ ಖಚಿತಗೊಂಡ ತಕ್ಷಣ ಪ್ರತಿಕ್ರಿಯಿಸಿದ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ

Deepika Padukone | Ranbir Kapoor: ರಣಬೀರ್ ಕಪೂರ್​ ಮತ್ತು ಆಲಿಯಾ ಭಟ್​ ವಿವಾಹಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ಅವರು ಯಾವುದೇ ಹೇಳಿಕೆ ನೀಡಿಲ್ಲ. ಬದಲಿಗೆ, ಒಂದೇ ಒಂದು ಲೈಕ್​ ಮಾಡಿ ಸುಮ್ಮನಾಗಿದ್ದಾರೆ.

ಆಲಿಯಾ​-ರಣಬೀರ್ ಮದುವೆ ಖಚಿತಗೊಂಡ ತಕ್ಷಣ ಪ್ರತಿಕ್ರಿಯಿಸಿದ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ
ರಣಬೀರ್​ ಕಪೂರ್​, ಆಲಿಯಾ ಭಟ್​, ದೀಪಿಕಾ ಪಡುಕೋಣೆ
TV9 Web
| Edited By: |

Updated on: Apr 14, 2022 | 11:59 AM

Share

ಬಾಲಿವುಡ್​ನ ಸ್ಟಾರ್​ ಜೋಡಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮದುವೆ (Alia Bhatt Ranbir Kapoor Wedding) ಆಗುತ್ತಿರುವ ವಿಷಯ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಪ್ರತಿಕ್ರಿಯಿಸಿರಲಿಲ್ಲ. ಮದುವೆ ನಡೆಯುವ ಸ್ಥಳ ಮತ್ತು ದಿನಾಂಕದ ಬಗ್ಗೆ ಕೇವಲ ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಆದ್ರೆ ಈಗ ಒಂದೊಂದೇ ವಿಚಾರಗಳು ಬಹಿರಂಗ ಆಗುತ್ತಿವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ (Ranbir Kapoor Marriage) ಆಗುತ್ತಿರುವುದು ಖಚಿತಗೊಂಡಿದೆ. ಇಬ್ಬರ ಮನೆಯನ್ನೂ ಸಿಂಗರಿಸಲಾಗಿದೆ. ಅನೇಕ ಅತಿಥಿಗಳು ಆಗಮಿಸುತ್ತಿದ್ದಾರೆ. ಈ ನಡುವೆ ‘ಬ್ರಹ್ಮಾಸ್ತ್ರ’ ಸಿನಿಮಾದ ನಿರ್ದೇಶಕ ಅಯಾನ್​ ಮುಖರ್ಜಿ ಅವರು ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಆ ಮೂಲಕ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ಗೆ ಅವರು ಅಭಿನಂದನೆ ತಿಳಿಸಿದ್ದಾರೆ. ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಆಲಿಯಾ-ರಣಬೀರ್​ ಜೋಡಿಯಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಒಂದು ಹಾಡಿನಲ್ಲಿ ಅವರು ಮದುವೆ ಜೋಡಿಯಂತೆಯೇ ಕಾಣಿಸಿಕೊಂಡಿದ್ದಾರೆ. ಆ ವಿಡಿಯೋ ಹಂಚಿಕೊಂಡಿರುವ ಅಯಾನ್​ ಮುಖರ್ಜಿ ಅವರು, ಈ ತಾರೆಗಳ ಹೊಸ ಬದುಕಿಗೆ ಶುಭ ಹಾರೈಸಿದ್ದಾರೆ. ಅದಕ್ಕೆ ದೀಪಿಕಾ ಪಡುಕೋಣೆ (Deepika Padukone) ಪ್ರತಿಕ್ರಿಯಿಸಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣಬೀರ್​ ಕಪೂರ್​ ನಡುವೆ ಒಂದು ಕಾಲದಲ್ಲಿ ಪ್ರೀತಿ ಚಿಗುರಿತ್ತು. ಇನ್ನೇನು ಅವರಿಬ್ಬರು ಮದುವೆ ಆಗಿಬಿಡುತ್ತಾರೆ ಎಂದೇ ಊಹಿಸಲಾಗಿತ್ತು. ಆದರೆ ಇಬ್ಬರ ನಡುವೆ ವೈಮನಸ್ಸು ಮೂಡಿದ್ದರಿಂದ ಬ್ರೇಕಪ್​ ಆಯಿತು. ಆ ಬಳಿಕವೂ ಅವರು ಹಳೆಯದನ್ನೆಲ್ಲಾ ಮರೆತು ಸ್ನೇಹಿತರಾಗಿ ಮುಂದುವರಿದರು. ಬಳಿಕ ರಣವೀರ್​ ಸಿಂಗ್​ ಜತೆ ದೀಪಿಕಾ ಪಡುಕೋಣೆ ಮದುವೆ ನೆರವೇರಿತು. ನಂತರ ಮಾಜಿ ಪ್ರಿಯಕರನ ಜೊತೆ ದೀಪಿಕಾ ಹೆಚ್ಚು ಸಂಪರ್ಕ ಉಳಿಸಿಕೊಳ್ಳಲಿಲ್ಲ.

ಈಗ ಮಾಜಿ ಬಾಯ್​ಫ್ರೆಂಡ್​ ಮದುವೆ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಅವರು ಸೈಲೆಂಟ್​ ಆಗಿದ್ದಾರೆ. ರಣಬೀರ್​-ಆಲಿಯಾ ವಿವಾಹಕ್ಕೆ ಸಂಬಂಧಿಸಿದಂತೆ ಅವರು ಯಾವುದೇ ಹೇಳಿಕೆ ನೀಡಿಲ್ಲ. ಕೇವಲ ಒಂದೇ ಒಂದು ಲೈಕ್​ ಮೂಲಕ ಅವರು ಪ್ರತಿಕ್ರಿಯಿಸಿದ್ದಾರೆ. ಹೌದು, ಅಯಾನ್​ ಮುಖರ್ಜಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿರುವ ವಿಡಿಯೋವನ್ನು ದೀಪಿಕಾ ಪಡುಕೋಣೆ ಲೈಕ್​ ಮಾಡಿದ್ದಾರೆ ಅಷ್ಟೇ. ಈ ವಿಚಾರ ಅವರ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ.

ಮುಂಬೈನಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ ನಡೆಯುತ್ತಿದೆ. ವಿವಾಹದ ಹಿನ್ನೆಲೆಯಲ್ಲಿ ಅವರಿಬ್ಬರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇಡೀ ಬಂಗಲೆ ವಿದ್ಯುತ್​ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಮನೆಯೊಳಗೆ ಎಂಟ್ರಿ ನೀಡುವ ಎಲ್ಲ ಸಿಬ್ಬಂದಿಯ ಮೊಬೈಲ್​ ಕ್ಯಾಮೆರಾಗೆ ಪಿಂಕ್​ ಸ್ಟಿಕರ್​ ಅಂಟಿಸಲಾಗಿದೆ. ಆ ಮೂಲಕ ಯಾವುದೇ ಫೋಟೋ ಅಥವಾ ವಿಡಿಯೋ ಲೀಕ್​ ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ. ಇಂದು (ಏ.14) ಅವರಿಬ್ಬರು ಹಸೆ ಮಣೆ ಏರಲಿದ್ದಾರೆ. ಮದುವೆ ಫೋಟೋಗಳನ್ನು ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ.

View this post on Instagram

A post shared by Ayan Mukerji (@ayan_mukerji)

ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ನೆರವೇರಿಸಲು ಕೂಡ ಎರಡೂ ಕುಟುಂಬದವರು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗಿದೆ. ಆ ಸಮಾರಂಭಕ್ಕೆ ದೀಪಿಕಾ ಪಡುಕೋಣೆ, ರಣವೀರ್​ ಸಿಂಗ್​, ಕತ್ರಿನಾ ಕೈಫ್​, ವಿಕ್ಕಿ ಕೌಶಲ್​ ಮುಂತಾದವರು ಆಗಮಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಆಲಿಯಾ ಭಟ್​ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ನಟಿಸಿದ ಬಳಿಕ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಈ ಪರಿ ಡಿಮ್ಯಾಂಡ್​ ಇರುವಾಗಲೇ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ವರ್ಷ ತೆರೆಕಂಡ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ವಹಿಸಿದ್ದಾರೆ. ಆ ಚಿತ್ರ ಕೂಡ ಸೂಪರ್​ ಹಿಟ್​ ಆಗಿದೆ.

ಇದನ್ನೂ ಓದಿ:

ರಣಬೀರ್​ ಕಪೂರ್​ ಮದುವೆಗೆ ಬರ್ತಾರಾ ಮಾಜಿ ಗರ್ಲ್​ಫ್ರೆಂಡ್ಸ್​ ದೀಪಿಕಾ, ಕತ್ರಿನಾ? ಆಲಿಯಾ ಜತೆ ಹೇಗಿದೆ ನಂಟು?

100 ಕೋಟಿ ರೂ. ಗಳಿಸಿದ ‘ಗಂಗೂಬಾಯಿ ಕಾಠಿಯಾವಾಡಿ’; ಪಾರ್ಟಿ ಮೂಡ್​ನಲ್ಲಿ ಆಲಿಯಾ ಭಟ್​-ರಣಬೀರ್​

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!