AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ​-ರಣಬೀರ್ ಮದುವೆ ಖಚಿತಗೊಂಡ ತಕ್ಷಣ ಪ್ರತಿಕ್ರಿಯಿಸಿದ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ

Deepika Padukone | Ranbir Kapoor: ರಣಬೀರ್ ಕಪೂರ್​ ಮತ್ತು ಆಲಿಯಾ ಭಟ್​ ವಿವಾಹಕ್ಕೆ ಸಂಬಂಧಿಸಿದಂತೆ ದೀಪಿಕಾ ಪಡುಕೋಣೆ ಅವರು ಯಾವುದೇ ಹೇಳಿಕೆ ನೀಡಿಲ್ಲ. ಬದಲಿಗೆ, ಒಂದೇ ಒಂದು ಲೈಕ್​ ಮಾಡಿ ಸುಮ್ಮನಾಗಿದ್ದಾರೆ.

ಆಲಿಯಾ​-ರಣಬೀರ್ ಮದುವೆ ಖಚಿತಗೊಂಡ ತಕ್ಷಣ ಪ್ರತಿಕ್ರಿಯಿಸಿದ ಮಾಜಿ ಪ್ರೇಯಸಿ ದೀಪಿಕಾ ಪಡುಕೋಣೆ
ರಣಬೀರ್​ ಕಪೂರ್​, ಆಲಿಯಾ ಭಟ್​, ದೀಪಿಕಾ ಪಡುಕೋಣೆ
TV9 Web
| Edited By: |

Updated on: Apr 14, 2022 | 11:59 AM

Share

ಬಾಲಿವುಡ್​ನ ಸ್ಟಾರ್​ ಜೋಡಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಅವರು ಮದುವೆ (Alia Bhatt Ranbir Kapoor Wedding) ಆಗುತ್ತಿರುವ ವಿಷಯ ಹಲವು ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಈ ಬಗ್ಗೆ ಯಾರೂ ಕೂಡ ಅಧಿಕೃತವಾಗಿ ಪ್ರತಿಕ್ರಿಯಿಸಿರಲಿಲ್ಲ. ಮದುವೆ ನಡೆಯುವ ಸ್ಥಳ ಮತ್ತು ದಿನಾಂಕದ ಬಗ್ಗೆ ಕೇವಲ ಅಂತೆ-ಕಂತೆಗಳು ಹರಿದಾಡುತ್ತಿದ್ದವು. ಆದ್ರೆ ಈಗ ಒಂದೊಂದೇ ವಿಚಾರಗಳು ಬಹಿರಂಗ ಆಗುತ್ತಿವೆ. ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ (Ranbir Kapoor Marriage) ಆಗುತ್ತಿರುವುದು ಖಚಿತಗೊಂಡಿದೆ. ಇಬ್ಬರ ಮನೆಯನ್ನೂ ಸಿಂಗರಿಸಲಾಗಿದೆ. ಅನೇಕ ಅತಿಥಿಗಳು ಆಗಮಿಸುತ್ತಿದ್ದಾರೆ. ಈ ನಡುವೆ ‘ಬ್ರಹ್ಮಾಸ್ತ್ರ’ ಸಿನಿಮಾದ ನಿರ್ದೇಶಕ ಅಯಾನ್​ ಮುಖರ್ಜಿ ಅವರು ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಆ ಮೂಲಕ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ಗೆ ಅವರು ಅಭಿನಂದನೆ ತಿಳಿಸಿದ್ದಾರೆ. ‘ಬ್ರಹ್ಮಾಸ್ತ್ರ’ ಚಿತ್ರದಲ್ಲಿ ಆಲಿಯಾ-ರಣಬೀರ್​ ಜೋಡಿಯಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಒಂದು ಹಾಡಿನಲ್ಲಿ ಅವರು ಮದುವೆ ಜೋಡಿಯಂತೆಯೇ ಕಾಣಿಸಿಕೊಂಡಿದ್ದಾರೆ. ಆ ವಿಡಿಯೋ ಹಂಚಿಕೊಂಡಿರುವ ಅಯಾನ್​ ಮುಖರ್ಜಿ ಅವರು, ಈ ತಾರೆಗಳ ಹೊಸ ಬದುಕಿಗೆ ಶುಭ ಹಾರೈಸಿದ್ದಾರೆ. ಅದಕ್ಕೆ ದೀಪಿಕಾ ಪಡುಕೋಣೆ (Deepika Padukone) ಪ್ರತಿಕ್ರಿಯಿಸಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣಬೀರ್​ ಕಪೂರ್​ ನಡುವೆ ಒಂದು ಕಾಲದಲ್ಲಿ ಪ್ರೀತಿ ಚಿಗುರಿತ್ತು. ಇನ್ನೇನು ಅವರಿಬ್ಬರು ಮದುವೆ ಆಗಿಬಿಡುತ್ತಾರೆ ಎಂದೇ ಊಹಿಸಲಾಗಿತ್ತು. ಆದರೆ ಇಬ್ಬರ ನಡುವೆ ವೈಮನಸ್ಸು ಮೂಡಿದ್ದರಿಂದ ಬ್ರೇಕಪ್​ ಆಯಿತು. ಆ ಬಳಿಕವೂ ಅವರು ಹಳೆಯದನ್ನೆಲ್ಲಾ ಮರೆತು ಸ್ನೇಹಿತರಾಗಿ ಮುಂದುವರಿದರು. ಬಳಿಕ ರಣವೀರ್​ ಸಿಂಗ್​ ಜತೆ ದೀಪಿಕಾ ಪಡುಕೋಣೆ ಮದುವೆ ನೆರವೇರಿತು. ನಂತರ ಮಾಜಿ ಪ್ರಿಯಕರನ ಜೊತೆ ದೀಪಿಕಾ ಹೆಚ್ಚು ಸಂಪರ್ಕ ಉಳಿಸಿಕೊಳ್ಳಲಿಲ್ಲ.

ಈಗ ಮಾಜಿ ಬಾಯ್​ಫ್ರೆಂಡ್​ ಮದುವೆ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಅವರು ಸೈಲೆಂಟ್​ ಆಗಿದ್ದಾರೆ. ರಣಬೀರ್​-ಆಲಿಯಾ ವಿವಾಹಕ್ಕೆ ಸಂಬಂಧಿಸಿದಂತೆ ಅವರು ಯಾವುದೇ ಹೇಳಿಕೆ ನೀಡಿಲ್ಲ. ಕೇವಲ ಒಂದೇ ಒಂದು ಲೈಕ್​ ಮೂಲಕ ಅವರು ಪ್ರತಿಕ್ರಿಯಿಸಿದ್ದಾರೆ. ಹೌದು, ಅಯಾನ್​ ಮುಖರ್ಜಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿರುವ ವಿಡಿಯೋವನ್ನು ದೀಪಿಕಾ ಪಡುಕೋಣೆ ಲೈಕ್​ ಮಾಡಿದ್ದಾರೆ ಅಷ್ಟೇ. ಈ ವಿಚಾರ ಅವರ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ.

ಮುಂಬೈನಲ್ಲಿ ಆಲಿಯಾ ಭಟ್​ ಮತ್ತು ರಣಬೀರ್​ ಕಪೂರ್​ ಮದುವೆ ನಡೆಯುತ್ತಿದೆ. ವಿವಾಹದ ಹಿನ್ನೆಲೆಯಲ್ಲಿ ಅವರಿಬ್ಬರ ನಿವಾಸಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಇಡೀ ಬಂಗಲೆ ವಿದ್ಯುತ್​ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಮನೆಯೊಳಗೆ ಎಂಟ್ರಿ ನೀಡುವ ಎಲ್ಲ ಸಿಬ್ಬಂದಿಯ ಮೊಬೈಲ್​ ಕ್ಯಾಮೆರಾಗೆ ಪಿಂಕ್​ ಸ್ಟಿಕರ್​ ಅಂಟಿಸಲಾಗಿದೆ. ಆ ಮೂಲಕ ಯಾವುದೇ ಫೋಟೋ ಅಥವಾ ವಿಡಿಯೋ ಲೀಕ್​ ಆಗದ ರೀತಿಯಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ. ಇಂದು (ಏ.14) ಅವರಿಬ್ಬರು ಹಸೆ ಮಣೆ ಏರಲಿದ್ದಾರೆ. ಮದುವೆ ಫೋಟೋಗಳನ್ನು ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ.

View this post on Instagram

A post shared by Ayan Mukerji (@ayan_mukerji)

ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ನೆರವೇರಿಸಲು ಕೂಡ ಎರಡೂ ಕುಟುಂಬದವರು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗಿದೆ. ಆ ಸಮಾರಂಭಕ್ಕೆ ದೀಪಿಕಾ ಪಡುಕೋಣೆ, ರಣವೀರ್​ ಸಿಂಗ್​, ಕತ್ರಿನಾ ಕೈಫ್​, ವಿಕ್ಕಿ ಕೌಶಲ್​ ಮುಂತಾದವರು ಆಗಮಿಸುತ್ತಾರೆ ಎಂದು ಹೇಳಲಾಗುತ್ತಿದೆ.

ಆಲಿಯಾ ಭಟ್​ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ನಟಿಸಿದ ಬಳಿಕ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಈ ಪರಿ ಡಿಮ್ಯಾಂಡ್​ ಇರುವಾಗಲೇ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ವರ್ಷ ತೆರೆಕಂಡ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದಲ್ಲಿ ಅವರು ಮುಖ್ಯ ಪಾತ್ರ ವಹಿಸಿದ್ದಾರೆ. ಆ ಚಿತ್ರ ಕೂಡ ಸೂಪರ್​ ಹಿಟ್​ ಆಗಿದೆ.

ಇದನ್ನೂ ಓದಿ:

ರಣಬೀರ್​ ಕಪೂರ್​ ಮದುವೆಗೆ ಬರ್ತಾರಾ ಮಾಜಿ ಗರ್ಲ್​ಫ್ರೆಂಡ್ಸ್​ ದೀಪಿಕಾ, ಕತ್ರಿನಾ? ಆಲಿಯಾ ಜತೆ ಹೇಗಿದೆ ನಂಟು?

100 ಕೋಟಿ ರೂ. ಗಳಿಸಿದ ‘ಗಂಗೂಬಾಯಿ ಕಾಠಿಯಾವಾಡಿ’; ಪಾರ್ಟಿ ಮೂಡ್​ನಲ್ಲಿ ಆಲಿಯಾ ಭಟ್​-ರಣಬೀರ್​

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ