AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್ ಈ ಗುಣಕ್ಕೆ ಎಲ್ಲರೂ ಫಿದಾ; ಎಲ್ಲಾ ಸೆಲೆಬ್ರಿಟಿಗಳಿಗೆ ಮಾದರಿ ಈ ನಟಿ

ಆಲಿಯಾ ಭಟ್ ಅವರು ತಮ್ಮ ಫ್ಯಾಷನ್ ಆಯ್ಕೆಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಅವರು ಒಂದೇ ಬಟ್ಟೆಯನ್ನು ಪದೇ ಪದೇ ಧರಿಸುವುದನ್ನು ಬೆಂಬಲಿಸುತ್ತಾರೆ. ಅವರ ಸಿನಿಮಾ ಜೀವನ ಮತ್ತು ಖಾಸಗಿ ಜೀವನದ ವಿವರಗಳ ಬಗ್ಗೆ ಇಲ್ಲಿದೆ.

ಆಲಿಯಾ ಭಟ್ ಈ ಗುಣಕ್ಕೆ ಎಲ್ಲರೂ ಫಿದಾ; ಎಲ್ಲಾ ಸೆಲೆಬ್ರಿಟಿಗಳಿಗೆ ಮಾದರಿ ಈ ನಟಿ
ಆಲಿಯಾ ಭಟ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 30, 2024 | 7:55 AM

Share

ನಟಿ ಆಲಿಯಾ ಭಟ್ ಅವರು ಹಲವಾರು ವಿಚಾರಕ್ಕೆ ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಈಗ ಅವರಿಗೆ ರಹಾ ಹೆಸರಿನ ಮಗಳು ಜನಿಸಿದ್ದಾಳೆ. ಮಗಳನ್ನು ನೋಡಿಕೊಳ್ಳುವ ಜವಾಬ್ದಾರಿಯ ಜೊತೆಗೆ ಸಿನಿಮಾ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದಾರೆ. ಒಂದಷ್ಟು ವಿಚಾರಗಳಲ್ಲಿ ಆಲಿಯಾ ಭಟ್ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಆಲಿಯಾ ಭಟ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಬಳಿ ನೂರಾರು ಕೋಟಿ ರೂಪಾಯಿಯ ಆಸ್ತಿ ಇದೆ. ಅನೇಕ ಸೆಲೆಬ್ರಿಟಿಗಳು ಇಷ್ಟೆಲ್ಲ ಹಣ ಇದ್ದಾಗ ಹೊಸ ಹೊಸ ಭಟ್ಟೆ ಧರಿಸಿ ಕಾಣಿಸಿಕೊಳ್ಳುತ್ತಾರೆ. ಬಟ್ಟೆಯನ್ನು ಎಂದಿಗೂ ರಿಪೀಟ್ ಮಾಡಲ್ಲ. ಇದು ಪ್ರತಿಷ್ಠೆಯ ವಿಚಾರ ಎಂದುಕೊಳ್ಳುತ್ತಾರೆ. ಆದರೆ, ಆಲಿಯಾ ಹಾಗಲ್ಲ. ಅವರು ಹಾಕಿದ ಬಟ್ಟೆಯನ್ನೇ ಮತ್ತೆ ಹಾಕುತ್ತಾರೆ ಮತ್ತು ಇದು ಸಾಮಾನ್ಯ ಪ್ರಕ್ರಿಯೆ ಎಂದು ಹೇಳುತ್ತಾರೆ.

‘ನಾನು ಎಲ್ಲಾ ಬಟ್ಟೆಯನ್ನೂ ರಿಪೀಟ್ ಮಾಡುತ್ತೇನೆ. ಮನೆಯಲ್ಲಿ 365 ದಿನಗಳಿಗೂ ಹಾಕಲು ಬಟ್ಟೆ ಇರಲ್ಲ. ಹೀಗಾಗಿ ಮತ್ತೆ ಮತ್ತೆ ಧರಿಸುತ್ತೇನೆ. ರಿಪೀಟ್ ಮಾಡೋದು ಸಾಮಾನ್ಯ. ರಿಪೀಟ್ ಮಾಡೋದು ಸರಿ ಅಲ್ಲ ಎಂದುಕೊಳ್ಳಬೇಡಿ. ಇದು ತಪ್ಪು’ ಎಂದಿದ್ದಾರೆ ಆಲಿಯಾ ಭಟ್.

ಆಲಿಯಾ ಭಟ್ ಅವರು ಹಾಕಿಕೊಂಡ ಬಟ್ಟೆಯನ್ನೇ ಮತ್ತೆ ಮತ್ತೆ ಹಾಕಿಕೊಂಡು ಕಾಣಿಸಿಕೊಂಡ ಉದಾಹರಣೆ ಸಾಕಷ್ಟು ಇದೆ. ಇದನ್ನು ಕೆಲವರು ಟೀಕೆ ಮಾಡಿದ್ದರು. ಆದರೆ, ಆಲಿಯಾ ಭಟ್ ಅವರು ಇದಕ್ಕೆಲ್ಲ ತಲೆಕೆಡಿಸಿಕೊಂಡಿಲ್ಲ. ಈ ವಿಚಾರದಲ್ಲಿ ಅವರು ಅನೇಕರಿಗೆ ಮಾದರಿ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಳೇ ಬಟ್ಟೆ ಧರಿಸಿ ಪಾರ್ಟಿಗೆ ಬಂದ ಆಲಿಯಾ ಭಟ್​; ನೆಟ್ಟಿಗರಿಂದ ಮೆಚ್ಚುಗೆ

ಆಲಿಯಾ ಭಟ್ ನಟನೆಯ ‘ಜಿಗ್ರಾ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾ ಸಾಧಾರಣ ಯಶಸ್ಸು ಕಂಡಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ನಿರೀಕ್ಷೆ ಸುಳ್ಳಾಗಿದೆ. ಈ ಚಿತ್ರಕ್ಕೆ ಆಲಿಯಾ ಭಟ್ ಅವರೇ ನಿರ್ಮಾಪಕಿ ಕೂಡ ಹೌದು. ಅವರು ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಹಾಗೂ ವಿಕ್ಕಿ ಕೌಶಲ್ ಅವರು ನಟಿಸುತ್ತಾ ಇದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಈ ಚಿತ್ರದ ನಿರ್ದೇಶಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:55 am, Wed, 30 October 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ