AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಗೂಬಾಯಿ..’ ಚಿತ್ರಕ್ಕೆ 20 ಕೋಟಿ ರೂ. ಸಂಬಳ ಪಡೆದ ಆಲಿಯಾ ಭಟ್; ಅಜಯ್​ ದೇವಗನ್​ಗೆ ಸಿಕ್ಕಿದ್ದೆಷ್ಟು?

Alia Bhatt Remuneration: ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಆಲಿಯಾ ಭಟ್​ ಅವರ ಒಂದು ಆಸೆ ಈಡೇರಿದೆ. ಜೊತೆಗೆ ಅವರಿಗೆ ಕೈತುಂಬ ಸಂಭಾವನೆ ಕೂಡ ಸಿಕ್ಕಿದೆ.

‘ಗಂಗೂಬಾಯಿ..’ ಚಿತ್ರಕ್ಕೆ 20 ಕೋಟಿ ರೂ. ಸಂಬಳ ಪಡೆದ ಆಲಿಯಾ ಭಟ್; ಅಜಯ್​ ದೇವಗನ್​ಗೆ ಸಿಕ್ಕಿದ್ದೆಷ್ಟು?
ಆಲಿಯಾ
TV9 Web
| Edited By: |

Updated on: Mar 05, 2022 | 5:05 PM

Share

ಖ್ಯಾತ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಅವರ ಬತ್ತಳಿಕೆಯಿಂದ ಬಂದಿರುವ ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಸಿನಿಮಾ ಸೂಪರ್​ ಹಿಟ್​ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರ ಮೋಡಿ ಮಾಡಿದೆ. ಮುಖ್ಯ ಪಾತ್ರದಲ್ಲಿ ಆಲಿಯಾ ಭಟ್​ ಅವರು ಅಭಿನಯಿಸಿದ್ದು, ಅತಿಥಿ ಪಾತ್ರದಲ್ಲಿ ಅಜಯ್​ ದೇವಗನ್​ ಕಾಣಿಸಿಕೊಂಡಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಸದ್ದು ಮಾಡಿದೆ. ಗಂಗೂಬಾಯಿ ಕಾಠಿಯಾವಾಡಿ ಜೀವನ ಆಧರಿಸಿ ಈ ಚಿತ್ರ ಮೂಡಿಬಂದಿದ್ದು, ಆಲಿಯಾ ಭಟ್​ (Alia Bhatt) ಅವರು ವೇಶ್ಯೆ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಆಲಿಯಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​ ಇದೆ. ಈಗಾಗಲೇ ಅವರು ಹಲವು ಹಿಟ್​ ಸಿನಿಮಾಗಳನ್ನು ನೀಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಸೂಪರ್​ ಹಿಟ್​ ಸಿನಿಮಾಗಳ ಸಾಲಿಗೆ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ ಕೂಡ ಸೇರಿಕೊಂಡಿದೆ. ಈ ಚಿತ್ರಕ್ಕಾಗಿ ಅವರು ತೆಗೆದುಕೊಂಡ ಸಂಭಾವನೆ (Alia Bhatt Remuneration) ಎಷ್ಟು ಎಂಬ ಬಗ್ಗೆ ಮಾಹಿತಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ ಆಲಿಯಾ ಭಟ್​ ಅವರು ಬರೋಬ್ಬರಿ 20 ಕೋಟಿ ರೂಪಾಯಿಯನ್ನು ಜೇಬಿಗೆ ಇಳಿಸಿಕೊಂಡಿದ್ದಾರೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಂಜಯ್ ಲೀಲಾ ಬನ್ಸಾಲಿ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಜೊತೆ ಕೆಲಸ ಮಾಡಬೇಕು ಎಂದು ಎಲ್ಲ ಕಲಾವಿದರೂ ಬಯಸುತ್ತಾರೆ. ಅದೇ ರೀತಿ ಆಲಿಯಾ ಭಟ್​ ಕೂಡ ಆಸೆ ಇಟ್ಟುಕೊಂಡಿದ್ದರು. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಮೂಲಕ ಅವರ ಆಸೆ ಈಡೇರಿತು. ಜೊತೆಗೆ ಅವರಿಗೆ ಕೈತುಂಬ ಸಂಭಾವನೆ ಕೂಡ ಸಿಕ್ಕಿದೆ. ಆಲಿಯಾ ಭಟ್​ ಅವರಿಗೆ 20 ಕೋಟಿ ರೂಪಾಯಿ ಸಿಕ್ಕಿದ್ದರೆ, ಅಜಯ್​ ದೇವಗನ್​ ಅವರು 11 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಆಗಿದೆ.

ಜಯಂತಿ ಲಾಲ್​ ಗಡಾ ಮತ್ತು ಸಂಜಯ್​ ಲೀಲಾ ಬನ್ಸಾಲಿ ಅವರು ಜೊತೆಯಾಗಿ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಬಹುಕೋಟಿ ರೂ. ಬಜೆಟ್​ನಲ್ಲಿ ಈ ಚಿತ್ರ ತಯಾರಾಗಿದೆ. ನಿರ್ಮಾಪಕರು ಹಾಕಿದ ಬಂಡವಾಳ ವಾಪಸ್​ ಬಂದಿದೆ. ಚಿತ್ರಮಂದಿರದಲ್ಲಿ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಒಂದು ವಾರ ಕಳೆಯುವುದರೊಳಗೆ 73.94 ಕೋಟಿ ಗಳಿಕೆ ಮಾಡಿ ಮುನ್ನುಗ್ಗುತ್ತಿದೆ. ಬಾಲಿವುಡ್​ನಲ್ಲಿ ಮಹಿಳಾ ಪ್ರಧಾನ ಕಥೆಗೂ ಪ್ರೇಕ್ಷಕರು ಮನ್ನಣೆ ನೀಡುತ್ತಾರೆ ಎಂಬುದು ಈ ಸಿನಿಮಾ ಮೂಲಕ ಸಾಬೀತಾಗಿದೆ. ಈ ಗೆಲುವಿನಿಂದ ಆಲಿಯಾ ಭಟ್​ ಅವರ ಚಾರ್ಮ್​ ಹೆಚ್ಚಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನ ನಟಿ ಕಂಗನಾ ರಣಾವತ್​ ಅವರು ಅಪಶಕುನ ನುಡಿದಿದ್ದರು. ‘ಈ ಸಿನಿಮಾದಿಂದ ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಸುಟ್ಟು ಹೋಗಲಿದೆ’ ಎಂದು ಹೇಳಿದ್ದರು. ಆದರೆ ಅವರ ಮಾತು ಸುಳ್ಳಾಯಿತು. ಚಿತ್ರಕ್ಕೆ ಉತ್ತಮ ಕಲೆಕ್ಷನ್​ ಆಗಿದೆ. ಅದನ್ನು ಕಂಡು ಕಂಗನಾ ಮನಸ್ಸು ಬದಲಾಯಿತು. ನಂತರ ಚಿತ್ರತಂಡದ ಪರವಾಗಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದರು.

‘ದಕ್ಷಿಣ ಭಾರತದ ಸಿನಿಮಾಗಳ ದಾಖಲೆಯ ಕಲೆಕ್ಷನ್​ನಿಂದಾಗಿ ಚಿತ್ರಮಂದಿರಗಳಲ್ಲಿ ಮತ್ತೆ ಕಳೆ ಬಂದಿದೆ ಎಂಬುದನ್ನು ಕೇಳಿ ಖುಷಿ ಆಯಿತು. ಸೂಪರ್​ ಸ್ಟಾರ್​ ಡೈರೆಕ್ಟರ್​, ಸ್ಟಾರ್​ ಹೀರೋ ಇರುವ ಒಂದು ಮಹಿಳಾ ಪ್ರಧಾನ ಸಿನಿಮಾದಿಂದ ಹಿಂದಿ ಚಿತ್ರರಂಗ ಕೂಡ ಪುಟ್ಟ ಹೆಜ್ಜೆಗಳನ್ನು ಇಡುತ್ತಿದೆ. ಪುಟ್ಟ ಹೆಜ್ಜೆಗಳೇ ಆಗಿರಬಹುದು, ಆದರೆ ಅವು ಮಹತ್ವವಾದವು. ಕಷ್ಟದ ಪರಿಸ್ಥಿತಿಯಲ್ಲಿ ಇರುವ ಚಿತ್ರಮಂದಿರಗಳಿಗೆ ಈ ಬೆಳವಣಿಗೆ ತುಂಬ ಮುಖ್ಯ. ಗ್ರೇಟ್​! ಇಂಥ ಸಂದರ್ಭದಲ್ಲಿ ಮೂವೀ ಮಾಫಿಯಾದವರು ಒಳ್ಳೆಯ ಕೆಲಸ ಮಾಡ್ತಾರೆ ಅಂಥ ನಾನು ನಿರೀಕ್ಷಿಸಿರಲಿಲ್ಲ. ಅವರು ಒಳ್ಳೆಯದು ಮಾಡಿದಾಗ ನಾನು ಖಂಡಿತಾ ಹೊಗಳುತ್ತೇನೆ. ಇನ್ನೂ ಒಳ್ಳೆಯದನ್ನು ನಿರೀಕ್ಷಿಸುತ್ತೇನೆ’ ಎಂದು ಕಂಗನಾ ರಣಾವತ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಬರೆದುಕೊಂಡಿದ್ದರು.

ಇದನ್ನೂ ಓದಿ:

Alia Bhatt: ‘ಗಂಗೂಬಾಯಿ ಕಾಠಿಯಾವಾಡಿ’ ಪ್ರಚಾರದ ವೇಳೆ ಎಡವಟ್ಟು; ಸ್ವಲ್ಪದರಲ್ಲೇ ಬಚಾವಾದ ಆಲಿಯಾ

‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ ನೋಡಿ ಆಲಿಯಾ​ ಅಭಿಮಾನಿಗಳು ಏನಂದ್ರು? ಇಲ್ಲಿದೆ ಜನರ ವಿಮರ್ಶೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್