AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖದ ಅಂದ ಹೆಚ್ಚಿಸಿಕೊಳ್ಳಲು ಹೋಗಿ ಪಾರ್ಶ್ವವಾಯುಗೆ ಗುರಿಯಾದ ಆಲಿಯಾ?

ಆಲಿಯಾ ಭಟ್ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೈದ್ಯರೊಬ್ಬರು ಆಲಿಯಾ ಭಟ್ ಬಗ್ಗೆ ಮಾತನಾಡಿದ್ದು, ಆಲಿಯಾ ಭಟ್ ಸೌಂದರ್ಯ ಹೆಚ್ಚಿಸಿಕೊಳ್ಳುವ ಬೋಟಾಕ್ಸ್ ಆಪರೇಷನ್​ಗೆ ಒಳಗಾಗಿದ್ದು ಅದರಿಂದ ಅವರ ಮುಖ ಪಾರ್ಶ್ವವಾಯುವಿಗೆ ತುತ್ತಾಗಿದೆ. ಅವರ ಮುಖದ ಒಂದು ಭಾಗ ಜೀವ ಕಳೆದುಕೊಂಡಿದೆ ಎಂದಿದ್ದಾರೆ.

ಮುಖದ ಅಂದ ಹೆಚ್ಚಿಸಿಕೊಳ್ಳಲು ಹೋಗಿ ಪಾರ್ಶ್ವವಾಯುಗೆ ಗುರಿಯಾದ ಆಲಿಯಾ?
ಮಂಜುನಾಥ ಸಿ.
|

Updated on:Oct 26, 2024 | 9:36 AM

Share

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿ. ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿರುವ ಆಲಿಯಾ ಭಟ್ ಮಗುವಾದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳಿದ್ದು, ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಆಲಿಯಾರ ಅಭಿಮಾನಿಗಳು, ಕೆಲ ಸಿನಿಮಾ ಪ್ರೇಮಿಗಳು ಇತ್ತೀಚೆಗೆ ಆಲಿಯಾರ ಮುಖದಲ್ಲಿ ಆಗಿರುವ ಬದಲಾವಣೆಗಳನ್ನು ಗಮನಿಸಿದ್ದಾರೆ. ಆಲಿಯಾರ ಮುಖ ಮೊದಲಿನಂತಿಲ್ಲ. ಆಲಿಯಾರ ನಗು ಹಾಗೂ ಮಾತನಾಡುವ ಶೈಲಿಯೂ ಬದಲಾಗಿದೆ. ಆಲಿಯಾರ ಮುಖ ಬೇರೆ ಆಕಾರವನ್ನೇ ಪಡೆದುಕೊಂಡಿದೆ ಎಂದು ಗುರುತಿಸಿದ್ದರು. ಕಾಸ್ಮೆಟಿಕ್ ಸರ್ಜನ್ ಒಬ್ಬರು ಈ ಬಗ್ಗೆ ಸಂದರ್ಶನವೊಂದರಲ್ಲಿ ವಿವರವಾಗಿ ಮಾತನಾಡಿದ್ದು ಸಖತ್ ವೈರಲ್ ಸಹ ಆಗಿತ್ತು.

ವೈದ್ಯ ಸಾಯಿ ಗಣಪತಿ ಎಂಬುವರು ಸಂದರ್ಶನವೊಂದರಲ್ಲಿ ಮಾತನಾಡಿ, ‘ಆಲಿಯಾ ಭಟ್​ರ ಇತ್ತೀಚೆಗಿನ ವಿಡಿಯೋ, ಚಿತ್ರಗಳನ್ನು ನೋಡಿದರೆ ಅವರಿಗೆ ಮುಖದ ಪಾರ್ಶ್ವವಾಯು ಆಗಿದೆ ಎನ್ನುವುದು ಖಾತ್ರಿಯಾಗುತ್ತಿದೆ. ಅವರು ಬಾಯಿ ಸೊಟ್ಟ ಮಾಡಿ ನಗುತ್ತಿದ್ದಾರೆ, ಬಾಯಿ ಸೊಟ್ಟ ಮಾಡಿ ಮಾತನಾಡುತ್ತಿದ್ದಾರೆ. ಅವರ ಮುಖದ ಒಂದು ಭಾಗ ಮಾತ್ರ ಸಕ್ರಿಯವಾಗಿದೆ. ಒಂದು ಭಾಗ ಸತ್ವ ಕಳೆದುಕೊಂಡಿದೆ. ಅವರು ಬೋಟಾಕ್ಸ್ (ಸೌಂದರ್ಯ ಹೆಚ್ಚು ಮಾಡುವ ಶಸ್ತ್ರಚಿಕಿತ್ಸೆ)ಗೆ ಒಳಗಾಗಿದ್ದಾರೆ ಎನಿಸುತ್ತಿದೆ. ಆದರೆ ಅದು ಯಶಸ್ವಿಯಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ಇದು ಎಂಥಹವರಿಗೂ ಆಗಬಹುದು, ನನ್ನ ಕೆಲ ರೋಗಿಗಳಿಗೂ ಹೀಗೆ ಆಗಿತ್ತು, ಅದನ್ನು ಸೂಕ್ತ ಚಿಕಿತ್ಸೆ ಮೂಲಕ ಸರಿಪಡಿಸಬಹುದು’ ಎಂದಿದ್ದರು.

ವೈದ್ಯ ಸಾಯಿ ಗಣಪತಿಯ ಈ ವಿಡಿಯೋ ಭಾರಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆಲಿಯಾರ ಹಳೆಯ ಫೋಟೊ ಮತ್ತು ಈಗಿನ ಫೋಟೊ ವಿಡಿಯೋಗಳನ್ನು ಹೋಲಿಸಿ ನೋಡಿ ಆಲಿಯಾಗೆ ಪಾರ್ಶ್ವವಾಯು ಆಗಿದೆ. ಅವರ ಬೋಟಾಕ್ಸ್ ಶಸ್ತ್ರಚಿಕಿತ್ಸೆ ವಿಫಲವಾಗಿದೆ ಎಂದು ಹಲವರು ಸಂದೇಶಗಳನ್ನು ಹಂಚಿಕೊಂಡಿದ್ದರು. ಆದರೆ ಈಗ ನಟಿ ಆಲಿಯಾ ಭಟ್ ಸುದೀರ್ಘ ಪೋಸ್ಟ್ ಒಂದರ ಮೂಲಕ ಎಲ್ಲದಕ್ಕೂ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:ಹಳೇ ಬಟ್ಟೆ ಧರಿಸಿ ಪಾರ್ಟಿಗೆ ಬಂದ ಆಲಿಯಾ ಭಟ್​; ನೆಟ್ಟಿಗರಿಂದ ಮೆಚ್ಚುಗೆ

‘ಸೌಂದರ್ಯವರ್ಧಕ ಚಿಕಿತ್ಸೆ ಪಡೆಯುವವರ ಬಗ್ಗೆ ನನಗೆ ಯಾವುದೇ ದೂರು ಅಥವಾ ಬೇಸರ ಇಲ್ಲ. ನಿಮ್ಮ ದೇಹ ನಿಮ್ಮ ಇಷ್ಟ. ಆದರೆ ನನ್ನ ಬಗ್ಗೆ ಹಬ್ಬಿಸಲಾಗುತ್ತಿರುವ ಸುದ್ದಿಗಳು ನನಗೇ ನಂಬಲು ಸಾಧ್ಯವಾಗುತ್ತಿಲ್ಲ. ನನ್ನದು ಸೊಟ್ಟ ನಗೆ, ವಿಚಿತ್ರ ರೀತಿಯ ಮಾತುಗಾರಿಕೆ ಎಂದೆಲ್ಲ ಹೇಳುತ್ತಿದ್ದಾರೆ. ಒಬ್ಬ ವ್ಯಕ್ತಿಯ ಮುಖದ ಬಗ್ಗೆ ಹೀಗೆಲ್ಲ ಮಾತನಾಡಲು ಹೇಗೆ ಸಾಧ್ಯ? ಇದು ಅವಶ್ಯಕತೆ ಇಲ್ಲ ಸೂಕ್ಷ್ಮ ವಿಮರ್ಶೆ. ಈ ಸುಳ್ಳುಗಳಿಗೆ ‘ಸೈಂಟಿಫಿಕ್’ ವ್ಯಾಖ್ಯೆಗಳನ್ನು ಸಹ ನೀಡುತ್ತಿದ್ದೀರಿ. ನನಗೆ ಪಾರ್ಶ್ವವಾಯು ಆಗಿದೆಯೇ? ನೀವೇನು ತಮಾಷೆ ಮಾಡುತ್ತಿದ್ದೀರಾ? ಇಂಥಹಾ ಒಂದು ಗಂಭೀರ ಹೇಳಿಕೆಯನ್ನು ಯಾವುದೇ ಸಾಕ್ಷಿ, ವಿಚಾರಣೆ ಇಲ್ಲದೆ ನೀವು ನೀಡಿದ್ದೀರಿ’ ಎಂದು ಆಲಿಯಾ ಸಿಟ್ಟಾಗಿದ್ದಾರೆ.

‘ಇದನ್ನೆಲ್ಲ ನೀವು ಮಾಡುತ್ತಿರುವುದು ಏಕೆ? ಜನಪ್ರಿಯತೆಗೆ? ಕ್ಲಿಕ್ ಬೇಟ್​ಗೆ? ಹಣ ಮಾಡಲು? ಇದರಿಂದ ಯುವ ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದೀರಿ. ಮಹಿಳೆಯ ದೇಹ, ಮುಖ, ಖಾಸಗಿ ಜೀವನ, ನಮ್ಮ ‘ಉಬ್ಬು-ತಗ್ಗು’ಗಳ ಬಗ್ಗೆ ಚರ್ಚೆ ಮಾಡುವ ಹೀನ ಮನಸ್ಥಿತಿಯವರ ಬಗ್ಗೆ ನಾವು ದನಿ ಎತ್ತಲೇ ಬೇಕಿದೆ. ನಮ್ಮ ದೇಹ ವಿಮರ್ಶೆಯ, ಚರ್ಚೆಯ ವಸ್ತು ಆಗಿಬಿಟ್ಟಿದ್ದೆಯೇ? ವ್ಯಕ್ತಿಗಳ ಭಿನ್ನತೆಯನ್ನು, ವ್ಯಕ್ತಿತ್ವವನ್ನು ನಾವು ಸಂಭ್ರಮಿಸಬೇಕಿದೆ, ಅದರ ಹೊರತಾಗಿ ಹೀಗೆ ಜಡ್ಜ್​ಮೆಂಟಲ್ ಆಗುವುದು ವಿಮರ್ಶೆ, ಟೀಕೆ ಮಾಡುವುದು ಹಾನಿಕಾರಕ, ಅದು ಸಾಕಾಗಿ ಹೋಗಿದೆ’ ಎಂದಿದ್ದಾರೆ ಆಲಿಯಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Sat, 26 October 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ