ಮುಖದ ಅಂದ ಹೆಚ್ಚಿಸಿಕೊಳ್ಳಲು ಹೋಗಿ ಪಾರ್ಶ್ವವಾಯುಗೆ ಗುರಿಯಾದ ಆಲಿಯಾ?

ಆಲಿಯಾ ಭಟ್ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೈದ್ಯರೊಬ್ಬರು ಆಲಿಯಾ ಭಟ್ ಬಗ್ಗೆ ಮಾತನಾಡಿದ್ದು, ಆಲಿಯಾ ಭಟ್ ಸೌಂದರ್ಯ ಹೆಚ್ಚಿಸಿಕೊಳ್ಳುವ ಬೋಟಾಕ್ಸ್ ಆಪರೇಷನ್​ಗೆ ಒಳಗಾಗಿದ್ದು ಅದರಿಂದ ಅವರ ಮುಖ ಪಾರ್ಶ್ವವಾಯುವಿಗೆ ತುತ್ತಾಗಿದೆ. ಅವರ ಮುಖದ ಒಂದು ಭಾಗ ಜೀವ ಕಳೆದುಕೊಂಡಿದೆ ಎಂದಿದ್ದಾರೆ.

ಮುಖದ ಅಂದ ಹೆಚ್ಚಿಸಿಕೊಳ್ಳಲು ಹೋಗಿ ಪಾರ್ಶ್ವವಾಯುಗೆ ಗುರಿಯಾದ ಆಲಿಯಾ?
Follow us
|

Updated on:Oct 26, 2024 | 9:36 AM

ಆಲಿಯಾ ಭಟ್ ಬಾಲಿವುಡ್​ನ ಟಾಪ್ ನಟಿ. ನಟನೆಗೆ ರಾಷ್ಟ್ರಪ್ರಶಸ್ತಿ ಗಳಿಸಿರುವ ಆಲಿಯಾ ಭಟ್ ಮಗುವಾದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳಿದ್ದು, ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಆಲಿಯಾರ ಅಭಿಮಾನಿಗಳು, ಕೆಲ ಸಿನಿಮಾ ಪ್ರೇಮಿಗಳು ಇತ್ತೀಚೆಗೆ ಆಲಿಯಾರ ಮುಖದಲ್ಲಿ ಆಗಿರುವ ಬದಲಾವಣೆಗಳನ್ನು ಗಮನಿಸಿದ್ದಾರೆ. ಆಲಿಯಾರ ಮುಖ ಮೊದಲಿನಂತಿಲ್ಲ. ಆಲಿಯಾರ ನಗು ಹಾಗೂ ಮಾತನಾಡುವ ಶೈಲಿಯೂ ಬದಲಾಗಿದೆ. ಆಲಿಯಾರ ಮುಖ ಬೇರೆ ಆಕಾರವನ್ನೇ ಪಡೆದುಕೊಂಡಿದೆ ಎಂದು ಗುರುತಿಸಿದ್ದರು. ಕಾಸ್ಮೆಟಿಕ್ ಸರ್ಜನ್ ಒಬ್ಬರು ಈ ಬಗ್ಗೆ ಸಂದರ್ಶನವೊಂದರಲ್ಲಿ ವಿವರವಾಗಿ ಮಾತನಾಡಿದ್ದು ಸಖತ್ ವೈರಲ್ ಸಹ ಆಗಿತ್ತು.

ವೈದ್ಯ ಸಾಯಿ ಗಣಪತಿ ಎಂಬುವರು ಸಂದರ್ಶನವೊಂದರಲ್ಲಿ ಮಾತನಾಡಿ, ‘ಆಲಿಯಾ ಭಟ್​ರ ಇತ್ತೀಚೆಗಿನ ವಿಡಿಯೋ, ಚಿತ್ರಗಳನ್ನು ನೋಡಿದರೆ ಅವರಿಗೆ ಮುಖದ ಪಾರ್ಶ್ವವಾಯು ಆಗಿದೆ ಎನ್ನುವುದು ಖಾತ್ರಿಯಾಗುತ್ತಿದೆ. ಅವರು ಬಾಯಿ ಸೊಟ್ಟ ಮಾಡಿ ನಗುತ್ತಿದ್ದಾರೆ, ಬಾಯಿ ಸೊಟ್ಟ ಮಾಡಿ ಮಾತನಾಡುತ್ತಿದ್ದಾರೆ. ಅವರ ಮುಖದ ಒಂದು ಭಾಗ ಮಾತ್ರ ಸಕ್ರಿಯವಾಗಿದೆ. ಒಂದು ಭಾಗ ಸತ್ವ ಕಳೆದುಕೊಂಡಿದೆ. ಅವರು ಬೋಟಾಕ್ಸ್ (ಸೌಂದರ್ಯ ಹೆಚ್ಚು ಮಾಡುವ ಶಸ್ತ್ರಚಿಕಿತ್ಸೆ)ಗೆ ಒಳಗಾಗಿದ್ದಾರೆ ಎನಿಸುತ್ತಿದೆ. ಆದರೆ ಅದು ಯಶಸ್ವಿಯಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದು. ಇದು ಎಂಥಹವರಿಗೂ ಆಗಬಹುದು, ನನ್ನ ಕೆಲ ರೋಗಿಗಳಿಗೂ ಹೀಗೆ ಆಗಿತ್ತು, ಅದನ್ನು ಸೂಕ್ತ ಚಿಕಿತ್ಸೆ ಮೂಲಕ ಸರಿಪಡಿಸಬಹುದು’ ಎಂದಿದ್ದರು.

ವೈದ್ಯ ಸಾಯಿ ಗಣಪತಿಯ ಈ ವಿಡಿಯೋ ಭಾರಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆಲಿಯಾರ ಹಳೆಯ ಫೋಟೊ ಮತ್ತು ಈಗಿನ ಫೋಟೊ ವಿಡಿಯೋಗಳನ್ನು ಹೋಲಿಸಿ ನೋಡಿ ಆಲಿಯಾಗೆ ಪಾರ್ಶ್ವವಾಯು ಆಗಿದೆ. ಅವರ ಬೋಟಾಕ್ಸ್ ಶಸ್ತ್ರಚಿಕಿತ್ಸೆ ವಿಫಲವಾಗಿದೆ ಎಂದು ಹಲವರು ಸಂದೇಶಗಳನ್ನು ಹಂಚಿಕೊಂಡಿದ್ದರು. ಆದರೆ ಈಗ ನಟಿ ಆಲಿಯಾ ಭಟ್ ಸುದೀರ್ಘ ಪೋಸ್ಟ್ ಒಂದರ ಮೂಲಕ ಎಲ್ಲದಕ್ಕೂ ಉತ್ತರ ನೀಡಿದ್ದಾರೆ.

ಇದನ್ನೂ ಓದಿ:ಹಳೇ ಬಟ್ಟೆ ಧರಿಸಿ ಪಾರ್ಟಿಗೆ ಬಂದ ಆಲಿಯಾ ಭಟ್​; ನೆಟ್ಟಿಗರಿಂದ ಮೆಚ್ಚುಗೆ

‘ಸೌಂದರ್ಯವರ್ಧಕ ಚಿಕಿತ್ಸೆ ಪಡೆಯುವವರ ಬಗ್ಗೆ ನನಗೆ ಯಾವುದೇ ದೂರು ಅಥವಾ ಬೇಸರ ಇಲ್ಲ. ನಿಮ್ಮ ದೇಹ ನಿಮ್ಮ ಇಷ್ಟ. ಆದರೆ ನನ್ನ ಬಗ್ಗೆ ಹಬ್ಬಿಸಲಾಗುತ್ತಿರುವ ಸುದ್ದಿಗಳು ನನಗೇ ನಂಬಲು ಸಾಧ್ಯವಾಗುತ್ತಿಲ್ಲ. ನನ್ನದು ಸೊಟ್ಟ ನಗೆ, ವಿಚಿತ್ರ ರೀತಿಯ ಮಾತುಗಾರಿಕೆ ಎಂದೆಲ್ಲ ಹೇಳುತ್ತಿದ್ದಾರೆ. ಒಬ್ಬ ವ್ಯಕ್ತಿಯ ಮುಖದ ಬಗ್ಗೆ ಹೀಗೆಲ್ಲ ಮಾತನಾಡಲು ಹೇಗೆ ಸಾಧ್ಯ? ಇದು ಅವಶ್ಯಕತೆ ಇಲ್ಲ ಸೂಕ್ಷ್ಮ ವಿಮರ್ಶೆ. ಈ ಸುಳ್ಳುಗಳಿಗೆ ‘ಸೈಂಟಿಫಿಕ್’ ವ್ಯಾಖ್ಯೆಗಳನ್ನು ಸಹ ನೀಡುತ್ತಿದ್ದೀರಿ. ನನಗೆ ಪಾರ್ಶ್ವವಾಯು ಆಗಿದೆಯೇ? ನೀವೇನು ತಮಾಷೆ ಮಾಡುತ್ತಿದ್ದೀರಾ? ಇಂಥಹಾ ಒಂದು ಗಂಭೀರ ಹೇಳಿಕೆಯನ್ನು ಯಾವುದೇ ಸಾಕ್ಷಿ, ವಿಚಾರಣೆ ಇಲ್ಲದೆ ನೀವು ನೀಡಿದ್ದೀರಿ’ ಎಂದು ಆಲಿಯಾ ಸಿಟ್ಟಾಗಿದ್ದಾರೆ.

‘ಇದನ್ನೆಲ್ಲ ನೀವು ಮಾಡುತ್ತಿರುವುದು ಏಕೆ? ಜನಪ್ರಿಯತೆಗೆ? ಕ್ಲಿಕ್ ಬೇಟ್​ಗೆ? ಹಣ ಮಾಡಲು? ಇದರಿಂದ ಯುವ ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದೀರಿ. ಮಹಿಳೆಯ ದೇಹ, ಮುಖ, ಖಾಸಗಿ ಜೀವನ, ನಮ್ಮ ‘ಉಬ್ಬು-ತಗ್ಗು’ಗಳ ಬಗ್ಗೆ ಚರ್ಚೆ ಮಾಡುವ ಹೀನ ಮನಸ್ಥಿತಿಯವರ ಬಗ್ಗೆ ನಾವು ದನಿ ಎತ್ತಲೇ ಬೇಕಿದೆ. ನಮ್ಮ ದೇಹ ವಿಮರ್ಶೆಯ, ಚರ್ಚೆಯ ವಸ್ತು ಆಗಿಬಿಟ್ಟಿದ್ದೆಯೇ? ವ್ಯಕ್ತಿಗಳ ಭಿನ್ನತೆಯನ್ನು, ವ್ಯಕ್ತಿತ್ವವನ್ನು ನಾವು ಸಂಭ್ರಮಿಸಬೇಕಿದೆ, ಅದರ ಹೊರತಾಗಿ ಹೀಗೆ ಜಡ್ಜ್​ಮೆಂಟಲ್ ಆಗುವುದು ವಿಮರ್ಶೆ, ಟೀಕೆ ಮಾಡುವುದು ಹಾನಿಕಾರಕ, ಅದು ಸಾಕಾಗಿ ಹೋಗಿದೆ’ ಎಂದಿದ್ದಾರೆ ಆಲಿಯಾ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Sat, 26 October 24

ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
ಕೋರಿಕೆ ಈಡೇರಿಕೆಗೆ ಶಿವನ ಧ್ಯಾನ ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
Nithya Bhavishya: ಈ ರಾಶಿಯವರಿಗೆ ಇಂದು ಹೂಡಿಕೆಯಿಂದ ಲಾಭವಾಗುತ್ತದೆ
ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ
ಹಾಸನಾಂಬೆ ಬಳಿ ಡಿಕೆ ಶಿವಕುಮಾರ್​ ಬೇಡಿಕೊಂಡಿದ್ದು ಹೀಗಂತೆ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
10 ಸೆಕೆಂಡ್​ನಲ್ಲಿ 5 ಬಾರಿ ಬಿಜೆಪಿ ನಾಯಕನಿಗೆ ನಮಸ್ಕರಿಸಿದ ಐಎಎಸ್​ ಅಧಿಕಾರಿ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ದರ್ಶನ್​ಗೆ 4 ಹೆಜ್ಜೆ ನಡೆಯಲೂ ಆಗ್ತಿಲ್ಲ; ಕಣ್ಣೀರು ಹಾಕುವಂತಿದೆ ಈ ವಿಡಿಯೋ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ದೇವರಾಜೇಗೌಡ ಹೆಸರು ಪ್ರಸ್ತಾಪವಾಗುತ್ತಿದ್ದಂತೆಯೇ ವರಸೆ ಬದಲಿಸಿದ ರೇವಣ್ಣ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ಆ ಹೆಸರು ಹೇಳಲೂ ಹನುಮಂತನಿಗೆ ನಾಚಿಕೆ: ವಿಡಿಯೋ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ನನ್ನ ಮನವೊಲಿಕೆಗೆ ಯಾವ ನಾಯಕನೂ ಪ್ರಯತ್ನಿಸಿಲ್ಲ: ಅಜ್ಜಂಪೀರ್ ಖಾದ್ರಿ
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್
ಚನ್ನಪಟ್ಟಣ: ನಿಖಿಲ್ ಸ್ಪರ್ಧಿಸಬಾರದು ಅಂತ ಹೇಳೋದಿಕ್ಕಾಗುತ್ತೆಯೇ? ಶಿವಕುಮಾರ್