Sign In

By signing in or creating an account, you agree with Associated Broadcasting Company's Terms & Conditions and Privacy Policy.

Alia Bhatt: ಮಾನಸಿಕವಾಗಿ ರಣಬೀರ್​ ಜತೆ ನನ್ನ ಮದುವೆ ಆಗಿದೆ ಎಂದ ಆಲಿಯಾ ಭಟ್​  

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅನೇಕ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅತ್ತ, ರಣಬೀರ್​ ಕಪೂರ್​ ಕೂಡ ಈಗಾಗಲೇ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡು ಕಾರ್ಯನಿರತರಾಗಿದ್ದಾರೆ.

Alia Bhatt: ಮಾನಸಿಕವಾಗಿ ರಣಬೀರ್​ ಜತೆ ನನ್ನ ಮದುವೆ ಆಗಿದೆ ಎಂದ ಆಲಿಯಾ ಭಟ್​  
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 11, 2022 | 1:56 PM

ರಣಬೀರ್​ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್ (Alia Bhatt)​ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ. ಈ ವಿಚಾರವನ್ನು ಅವರು ಈಗ ಗುಟ್ಟಾಗಿ ಇಟ್ಟಿಲ್ಲ. ಮದುವೆ ಆಗುವ ಆಲೋಚನೆಯಲ್ಲಿರುವ ಈ ಜೋಡಿ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದಿದೆ. ಆಲಿಯಾ ಈ ಬಗ್ಗೆ ಓಪನ್​ ಆಗಿಯೇ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲ, ರಣಬೀರ್​ ಜತೆಗೆ ಕಳೆದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ (Social Media) ಅನೇಕ ಬಾರಿ ಹಂಚಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಜೋಡಿ ಈಗಾಗಲೇ ಮದುವೆ ಆಗಿರಬೇಕಿತ್ತು. ಆದರೆ, ಕೋವಿಡ್ ಕಾರಣದಿಂದ ಇವರ ವಿವಾಹ ಮುಂದೂಡಲ್ಪಡುತ್ತಲೇ ಇದೆ. ಈಗ ಆಲಿಯಾ ಅಚ್ಚರಿ ವಿಚಾರ ಒಂದನ್ನು ಹೇಳಿಕೊಂಡಿದ್ದಾರೆ. ಮಾನಸಿಕವಾಗಿ ಈಗಾಗಲೇ ರಣಬೀರ್​ ಅವರನ್ನು ಆಲಿಯಾ ವಿವಾಹ ಆಗಿದ್ದಾರೆ! ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಎನ್​ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಆಲಿಯಾ ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ರಣಬೀರ್​ ಅವರನ್ನು ಈಗಾಗಲೇ ನನ್ನ ಮನಸ್ಸಿನಲ್ಲಿ ಮದುವೆ ಆಗಿದ್ದೇನೆ. ಯಾವುದೇ ಘಟನೆ ಸಂಭವಿಸಿದರೂ ಅದಕ್ಕೊಂದು ಕಾರಣ ಇರುತ್ತದೆ. ಸಮಯ ಕೂಡಿ ಬಂದಾಗ ನಮ್ಮ ಮದುವೆ ಆಗುತ್ತದೆ’ ಎಂದಿದ್ದಾರೆ ಆಲಿಯಾ​.

ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿ ಆಲಿಯಾ ಮಿಂಚುತ್ತಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ. ಅನೇಕ ಚಿತ್ರದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅತ್ತ, ರಣಬೀರ್​ ಕಪೂರ್​ ಕೂಡ ಈಗಾಗಲೇ ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡು ಕಾರ್ಯನಿರತರಾಗಿದ್ದಾರೆ. ಒಪ್ಪಿಕೊಂಡಿರುವ ಎಲ್ಲ ಸಿನಿಮಾಗಳ ಕೆಲಸಗಳನ್ನು ಮುಗಿಸಲು ಈ ಜೋಡಿಗೆ ಸ್ವಲ್ಪ ಸಮಯ ಹಿಡಿಯಲಿದೆ. ಹಾಗಾಗಿ ಕಳೆದ ವರ್ಷ ಇವರು ಮದುವೆ ಆಗಿಲ್ಲ. ಈ ವರ್ಷ ಈ ಜೋಡಿ ಸಪ್ತಪದಿ ತುಳಿಯಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ಅವರು ಹೇಳಿಕೊಂಡಿಲ್ಲ.

ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಾಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಸಿನಿಮಾದಲ್ಲಿ ಏನೆಲ್ಲ ಇದೆ ಎಂಬುದರ ಝಲಕ್​ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್​ನಲ್ಲಿತ್ತು. ಇಡೀ ಟ್ರೇಲರ್​ನಲ್ಲಿ ಆಲಿಯಾ ಭಟ್​ ಅವರ ನಟನೆ, ಬನ್ಸಾಲಿ ಸಿನಿಮಾ ಮೇಕಿಂಗ್​ ಗಮನ ಸೆಳೆದಿದೆ.   ಇಡೀ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್​ ರಿಲೀಸ್​ ಆದ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸಿದ್ದಾರೆ. ಈ ಸಿನಿಮಾ ಜನವರಿ 7ರಂದು ತೆರೆಗೆ ಬರಬೇಕಿತ್ತು. ಆದರೆ, ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಮಾರ್ಚ್​ 25ರಂದು ಈ ಸಿನಿಮಾ ತೆರೆಗೆ ಬರುತ್ತಿದೆ.

‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ಅವರು ಸೀತಾ ಎಂಬ ಪಾತ್ರವನ್ನು ನಿಭಾಯಿಸಿದ್ದಾರೆ. ಆದರೆ ಅದೊಂದು ಚಿಕ್ಕ ಪಾತ್ರ ಎಂಬ ಮಾಹಿತಿ ಈಗ ತಿಳಿದುಬಂದಿದೆ. ಆ ಬಗ್ಗೆ ರಾಜಮೌಳಿ ಕೂಡ ಯಾವುದೇ ಮುಚ್ಚುಮರೆ ಮಾಡಿಲ್ಲ. ‘ಆಲಿಯಾ ಮತ್ತು ಅಜಯ್​ ದೇವಗನ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅದನ್ನು ಮುಚ್ಚಿಟ್ಟು ನಾನು ಪ್ರೇಕ್ಷಕರಿಗೆ ಮೋಸ ಮಾಡುವುದಿಲ್ಲ. ಆದರೆ ಆ ಪಾತ್ರಗಳಿಗೆ ಹೀರೋಗಳಷ್ಟೇ ಮಹತ್ವ ಇದೆ’ ಎಂದು ರಾಜಮೌಳಿ ಹೇಳಿದ್ದರು.

ಇದನ್ನೂ ಓದಿ: ಪುರುಷರ ಟಾಯ್ಲೆಟ್​ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ-ಆಲಿಯಾ ಭಟ್​; ಇದರ ಹಿಂದಿದೆ ಅಚ್ಚರಿಯ ಕಥೆ 

80 ಕೋಟಿ ರೂಪಾಯಿಗೆ ಸೇಲ್​ ಆದ ಶಾರುಖ್​ ಖಾನ್ ಮತ್ತು ಆಲಿಯಾ ಭಟ್ ಹೊಸ​ ಚಿತ್ರ​

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ