AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್’ ಸಿನಿಮಾದಲ್ಲಿ ಆಲಿಯಾ ಭಟ್​ ಕಾಣಿಸಿಕೊಳ್ಳೋದು ಕೇವಲ ಇಷ್ಟು ನಿಮಿಷನಾ?

ನಟಿ ಆಲಿಯಾ ಭಟ್​ ಈ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಕೇವಲ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಅವರನ್ನು ಈಗ ಅಭಿಮಾನಿಗಳು ದಕ್ಷಿಣ ಭಾರತದ ಸಿನಿಮಾದಲ್ಲೂ ಕಣ್ತುಂಬಿಕೊಳ್ಳೋಕೆ ಕಾತುರರಾಗಿದ್ದಾರೆ.

‘ಆರ್​ಆರ್​ಆರ್’ ಸಿನಿಮಾದಲ್ಲಿ ಆಲಿಯಾ ಭಟ್​ ಕಾಣಿಸಿಕೊಳ್ಳೋದು ಕೇವಲ ಇಷ್ಟು ನಿಮಿಷನಾ?
TV9 Web
| Edited By: |

Updated on: Nov 27, 2021 | 2:03 PM

Share

‘ಆರ್​ಆರ್​ಆರ್​’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದೊಡ್ಡ ಬಜೆಟ್​ನ ಚಿತ್ರ ಅನ್ನೋ ವಿಚಾರ ಒಂದು ಕಡೆಯಾದರೆ, ಈ ಸಿನಿಮಾದಲ್ಲಿ ಸ್ಟಾರ್​ ಪಾತ್ರವರ್ಗವಿದೆ ಅನ್ನೋದು ಮತ್ತೊಂದು ಕಡೆ. ರಾಜಮೌಳಿ ಈ ಚಿತ್ರವನ್ನು ತುಂಬಾನೇ ಕಾಳಜಿಯಿಂದ ಮಾಡಿದ್ದಾರೆ ಎಂಬುದಕ್ಕೆ ಚಿತ್ರದ ಟೀಸರ್​ ಹಾಗೂ ಪೋಸ್ಟರ್​ಗಳು ಸಾಕ್ಷ್ಯ ನೀಡಿವೆ. ಡಿಸೆಂಬರ್​ ತಿಂಗಳಲ್ಲಿ ಪ್ರಚಾರ ಕಾರ್ಯ ಆರಂಭಿಸೋಕೆ ಚಿತ್ರತಂಡ ನಿರ್ಧರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಿ-ರಿಲೀಸ್​ ಇವೆಂಟ್​ ನಡೆಸೋ ಆಲೋಚನೆಯನ್ನು ಚಿತ್ರತಂಡ ಹೊಂದಿದೆ. ಈ ಮಧ್ಯೆ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳು ಕೇಳಿ ಬರುತ್ತಿವೆ. ಚಿತ್ರದ ನಾಯಕಿ ಆಲಿಯಾ ಭಟ್​ ಬಗ್ಗೆ ಹೊಸದೊಂದು ಸುದ್ದಿ ಹರಿದಾಡಿದೆ. ಅವರು ಪರದೆಯಮೇಲೆ ಕೇವಲ 15 ನಿಮಿಷ ಕಾಣಿಸಿಕೊಳ್ಳುತ್ತಾರೆ ಎಂದು ವರದಿ ಆಗಿದೆ.

ನಟಿ ಆಲಿಯಾ ಭಟ್​ ಈ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಕೇವಲ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಅವರನ್ನು ಈಗ ಅಭಿಮಾನಿಗಳು ದಕ್ಷಿಣ ಭಾರತದ ಸಿನಿಮಾದಲ್ಲೂ ಕಣ್ತುಂಬಿಕೊಳ್ಳೋಕೆ ಕಾತುರರಾಗಿದ್ದಾರೆ. ಸೀತಾ ಅನ್ನೋ ಪಾತ್ರವನ್ನು ಆಲಿಯಾ ಭಟ್​ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರದ ಅವಧಿ ಕೇವಲ 15 ನಿಮಿಷ ಇದೆ ಅನ್ನೋ ವಿಚಾರ ಕೇಳಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಮೌಳಿ ಸಿನಿಮಾ ಎಂದರೆ ಅಲ್ಲಿ ಬರುವ ಪ್ರತಿ ಪಾತ್ರಕ್ಕೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಚಿಕ್ಕ ವಿಚಾರಗಳನ್ನು ದೊಡ್ಡ ಮಟ್ಟದಲ್ಲಿ ಹೈಲೈಟ್​ ಮಾಡೋ ತಾಕತ್ತು ರಾಜಮೌಳಿಗೆ ಇದೆ. ಅವರ ಈ ಹಿಂದಿನ ಸಿನಿಮಾ ಮೂಲಕ ಅದು ಸಾಬೀತಾಗಿದೆ ಕೂಡ. ಈಗ ಆಲಿಯಾ ಇಷ್ಟು ಕಡಿಮೆ ಸಮಯ ಪರದೆಮೇಲೆ ಕಾಣಿಸಿಕೊಂಡರೂ ಅವರ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಸಾಧ್ಯತೆ ಇದೆ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರ್​ಆರ್​ಆರ್​ ಚಿತ್ರದ ‘ಜನನಿ..’ ಹಾಡನ್ನು ಬಿಡುಗಡೆ ಮಾಡೋಕೆ ರಾಜಮೌಳಿ ಅವರು ಶುಕ್ರವಾರ (ನವೆಂಬರ್​ 26) ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ಕರ್ನಾಟಕದಲ್ಲಿ ಗ್ರ್ಯಾಂಡ್​ ಇವೆಂಟ್​ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ಅಜಯ್​ ದೇವಗನ್​ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ಸಖತ್​’ ಸಿನಿಮಾದಿಂದ ಅಚಾತುರ್ಯ; ಅಂಧ ಸಮುದಾಯಕ್ಕೆ ಕ್ಷಮೆ ಕೋರಿದ ನಿರ್ದೇಶಕ‌ ಸಿಂಪಲ್ ಸುನಿ‌

ಸಂಗೀತ್​ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ ಭಟ್​; ಲೀಕ್​​ ಆಯ್ತು ವಿಡಿಯೋ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ