AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರ್​ಆರ್​ಆರ್’ ಸಿನಿಮಾದಲ್ಲಿ ಆಲಿಯಾ ಭಟ್​ ಕಾಣಿಸಿಕೊಳ್ಳೋದು ಕೇವಲ ಇಷ್ಟು ನಿಮಿಷನಾ?

ನಟಿ ಆಲಿಯಾ ಭಟ್​ ಈ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಕೇವಲ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಅವರನ್ನು ಈಗ ಅಭಿಮಾನಿಗಳು ದಕ್ಷಿಣ ಭಾರತದ ಸಿನಿಮಾದಲ್ಲೂ ಕಣ್ತುಂಬಿಕೊಳ್ಳೋಕೆ ಕಾತುರರಾಗಿದ್ದಾರೆ.

‘ಆರ್​ಆರ್​ಆರ್’ ಸಿನಿಮಾದಲ್ಲಿ ಆಲಿಯಾ ಭಟ್​ ಕಾಣಿಸಿಕೊಳ್ಳೋದು ಕೇವಲ ಇಷ್ಟು ನಿಮಿಷನಾ?
TV9 Web
| Edited By: |

Updated on: Nov 27, 2021 | 2:03 PM

Share

‘ಆರ್​ಆರ್​ಆರ್​’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದೊಡ್ಡ ಬಜೆಟ್​ನ ಚಿತ್ರ ಅನ್ನೋ ವಿಚಾರ ಒಂದು ಕಡೆಯಾದರೆ, ಈ ಸಿನಿಮಾದಲ್ಲಿ ಸ್ಟಾರ್​ ಪಾತ್ರವರ್ಗವಿದೆ ಅನ್ನೋದು ಮತ್ತೊಂದು ಕಡೆ. ರಾಜಮೌಳಿ ಈ ಚಿತ್ರವನ್ನು ತುಂಬಾನೇ ಕಾಳಜಿಯಿಂದ ಮಾಡಿದ್ದಾರೆ ಎಂಬುದಕ್ಕೆ ಚಿತ್ರದ ಟೀಸರ್​ ಹಾಗೂ ಪೋಸ್ಟರ್​ಗಳು ಸಾಕ್ಷ್ಯ ನೀಡಿವೆ. ಡಿಸೆಂಬರ್​ ತಿಂಗಳಲ್ಲಿ ಪ್ರಚಾರ ಕಾರ್ಯ ಆರಂಭಿಸೋಕೆ ಚಿತ್ರತಂಡ ನಿರ್ಧರಿಸಿದೆ. ಭಾರತದ ಪ್ರಮುಖ ನಗರಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಿ-ರಿಲೀಸ್​ ಇವೆಂಟ್​ ನಡೆಸೋ ಆಲೋಚನೆಯನ್ನು ಚಿತ್ರತಂಡ ಹೊಂದಿದೆ. ಈ ಮಧ್ಯೆ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳು ಕೇಳಿ ಬರುತ್ತಿವೆ. ಚಿತ್ರದ ನಾಯಕಿ ಆಲಿಯಾ ಭಟ್​ ಬಗ್ಗೆ ಹೊಸದೊಂದು ಸುದ್ದಿ ಹರಿದಾಡಿದೆ. ಅವರು ಪರದೆಯಮೇಲೆ ಕೇವಲ 15 ನಿಮಿಷ ಕಾಣಿಸಿಕೊಳ್ಳುತ್ತಾರೆ ಎಂದು ವರದಿ ಆಗಿದೆ.

ನಟಿ ಆಲಿಯಾ ಭಟ್​ ಈ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಕೇವಲ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ಅವರನ್ನು ಈಗ ಅಭಿಮಾನಿಗಳು ದಕ್ಷಿಣ ಭಾರತದ ಸಿನಿಮಾದಲ್ಲೂ ಕಣ್ತುಂಬಿಕೊಳ್ಳೋಕೆ ಕಾತುರರಾಗಿದ್ದಾರೆ. ಸೀತಾ ಅನ್ನೋ ಪಾತ್ರವನ್ನು ಆಲಿಯಾ ಭಟ್​ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಅವರ ಪಾತ್ರದ ಅವಧಿ ಕೇವಲ 15 ನಿಮಿಷ ಇದೆ ಅನ್ನೋ ವಿಚಾರ ಕೇಳಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಮೌಳಿ ಸಿನಿಮಾ ಎಂದರೆ ಅಲ್ಲಿ ಬರುವ ಪ್ರತಿ ಪಾತ್ರಕ್ಕೂ ಅದರದ್ದೇ ಆದ ಪ್ರಾಮುಖ್ಯತೆ ಇರುತ್ತದೆ. ಚಿಕ್ಕ ವಿಚಾರಗಳನ್ನು ದೊಡ್ಡ ಮಟ್ಟದಲ್ಲಿ ಹೈಲೈಟ್​ ಮಾಡೋ ತಾಕತ್ತು ರಾಜಮೌಳಿಗೆ ಇದೆ. ಅವರ ಈ ಹಿಂದಿನ ಸಿನಿಮಾ ಮೂಲಕ ಅದು ಸಾಬೀತಾಗಿದೆ ಕೂಡ. ಈಗ ಆಲಿಯಾ ಇಷ್ಟು ಕಡಿಮೆ ಸಮಯ ಪರದೆಮೇಲೆ ಕಾಣಿಸಿಕೊಂಡರೂ ಅವರ ಪಾತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ಇರುವ ಸಾಧ್ಯತೆ ಇದೆ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆರ್​ಆರ್​ಆರ್​ ಚಿತ್ರದ ‘ಜನನಿ..’ ಹಾಡನ್ನು ಬಿಡುಗಡೆ ಮಾಡೋಕೆ ರಾಜಮೌಳಿ ಅವರು ಶುಕ್ರವಾರ (ನವೆಂಬರ್​ 26) ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅವರು ಕರ್ನಾಟಕದಲ್ಲಿ ಗ್ರ್ಯಾಂಡ್​ ಇವೆಂಟ್​ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ಅಜಯ್​ ದೇವಗನ್​ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ‘ಸಖತ್​’ ಸಿನಿಮಾದಿಂದ ಅಚಾತುರ್ಯ; ಅಂಧ ಸಮುದಾಯಕ್ಕೆ ಕ್ಷಮೆ ಕೋರಿದ ನಿರ್ದೇಶಕ‌ ಸಿಂಪಲ್ ಸುನಿ‌

ಸಂಗೀತ್​ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ ಭಟ್​; ಲೀಕ್​​ ಆಯ್ತು ವಿಡಿಯೋ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್