AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

Brahmastra Movie: ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ: ಪಾರ್ಟ್ ಒನ್​ ಶಿವ’ ಎಂದು ಶೀರ್ಷಿಕೆ ಇಡಲಾಗಿದೆ.

ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​
ಆಲಿಯಾ ಭಟ್, ರಣಬೀರ್​ ಕಪೂರ್​
TV9 Web
| Edited By: |

Updated on: Dec 18, 2021 | 12:29 PM

Share

ಕರ್ನಾಟಕದಲ್ಲಿ ಡಬ್ಬಿಂಗ್ (Dubbing Cinema) ಸಿನಿಮಾಗಳಿಗೆ ಹೆಬ್ಬಾಗಿಲು ತೆರೆದಿದೆ. ಎಲ್ಲ ಭಾಷೆಯ ಬಿಗ್​ ಬಜೆಟ್​ ಸಿನಿಮಾಗಳು ಏಕಕಾಲಕ್ಕೆ ಕನ್ನಡಕ್ಕೆ ಡಬ್​ ಆಗಿ ತೆರೆಕಾಣುತ್ತಿವೆ. ಇತ್ತೀಚೆಗಷ್ಟೇ ‘ಪುಷ್ಪ’ ಸಿನಿಮಾದ ಕನ್ನಡ ವರ್ಷನ್​ ಬಿಡುಗಡೆ ಆಗಿದೆ. ಆದರೆ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡದ ಅವತರಣಿಕೆ ರಿಲೀಸ್​ ​ಮಾಡಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಕೂಡ ಭುಗಿಲೆದ್ದಿದೆ. ಮುಂಬರುವ ದಿನಗಳಲ್ಲಿ ಕನ್ನಡಕ್ಕೆ ಡಬ್​ ಆಗಿ ತೆರೆಕಾಣಲು ಹಲವು ಚಿತ್ರಗಳು ಸಜ್ಜಾಗಿವೆ. ಜ.7ರಂದು ‘ಆರ್​ಆರ್​ಆರ್​’ ಚಿತ್ರದ ಕನ್ನಡ ವರ್ಷನ್​ ಬಿಡುಗಡೆ ಆಗಲಿದೆ. ಅದೇ ರೀತಿ ಬಾಲಿವುಡ್​ನ ‘ಬ್ರಹ್ಮಾಸ್ತ್ರ’ (Brahmastra Movie) ಸಿನಿಮಾ ಸಹ ಕನ್ನಡದಲ್ಲಿ ತೆರೆಕಾಣಲಿದೆ. ಆ ಚಿತ್ರದ ಬಗ್ಗೆ ನಟಿ ಆಲಿಯಾ ಭಟ್ (Alia Bhatt)​ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿದ್ದಾರೆ.

ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ: ಪಾರ್ಟ್ ಒನ್​ ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ಇದರಲ್ಲಿ ನಟ ರಣಬೀರ್​ ಕಪೂರ್​ ಅವರು ಶಿವನ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಮೋಷನ್​ ಪೋಸ್ಟರ್​ನಿಂದ ಅಭಿಮಾನಿಗಳಲ್ಲಿ ಭಾರಿ ಕೌತುಕ ನಿರ್ಮಾಣ ಆಗಿದೆ.

‘ಬ್ರಹ್ಮಾಂಡದಲ್ಲಿ ಮಹಾಶಕ್ತಿಶಾಲಿಯಾದ ಅಸ್ತ್ರವೊಂದು ಉದ್ಭವಿಸಲಿದೆ. ಮಹಾಯೋಧನೊಬ್ಬನ ಉದಯವಾಗಲಿದೆ. 09.09.2022 ಈ ದಿನಾಂಕದೊಂದಿಗೆ ಬ್ರಹ್ಮಾಸ್ತ್ರ ಪಾರ್ಟ್​ ಒನ್​: ಶಿವನನ್ನು ನೀವು ತಪ್ಪಿಸಿಕೊಳ್ಳುವಂತಿಲ್ಲ​’ ಎಂದು ಆಲಿಯಾ ಭಟ್​ ಕನ್ನಡಲ್ಲೇ ಟ್ವೀಟ್​ ಮಾಡಿದ್ದಾರೆ. ಆ ಮೂಲಕ ಅವರು ಕನ್ನಡದ ಸಿನಿಪ್ರಿಯರನ್ನು ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಡಬ್ಬಿಂಗ್​ ಸಿನಿಮಾಗಳ ಮೂಲಕ ಆಲಿಯಾ ಭಟ್​ ಅವರು ಕರ್ನಾಟಕದಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ.

ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇಟ್ಟುಕೊಂಡಿರುವ ಅವರು ಇದೇ ಮೊದಲ ಬಾರಿಗೆ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಆ ಸಿನಿಮಾದ ಪ್ರಚಾರಕ್ಕಾಗಿ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಆಲಿಯಾ ನಟನೆಯ ‘ಸಡಕ್​ 2’ ಚಿತ್ರದ ಶೂಟಿಂಗ್​ ಮೈಸೂರು ಸುತ್ತಮುತ್ತ ನಡೆದಿತ್ತು. ಈಗ ‘ಬ್ರಹ್ಮಾಸ್ತ್ರ’ ಪ್ರಚಾರದ ಸಲುವಾಗಿ ಅವರು ಕನ್ನಡದಲ್ಲಿ ಟ್ವೀಟ್​ ಮಾಡಿದ್ದಾರೆ. ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ತಮಿಳು, ತೆಲುಗು, ಮಲಯಾಳಂ ಮುಂತಾದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ.

 ಇದನ್ನೂ ಓದಿ:

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಮೊದಲ ದಿನವೇ ಲೀಕ್​ ಆಯ್ತು ರಶ್ಮಿಕಾ, ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ; ಕಲೆಕ್ಷನ್​ ಮೇಲೆ ಬೀಳಲಿದೆ ಪೆಟ್ಟು

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್