ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

Brahmastra Movie: ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ: ಪಾರ್ಟ್ ಒನ್​ ಶಿವ’ ಎಂದು ಶೀರ್ಷಿಕೆ ಇಡಲಾಗಿದೆ.

ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​
ಆಲಿಯಾ ಭಟ್, ರಣಬೀರ್​ ಕಪೂರ್​
Follow us
| Updated By: ಮದನ್​ ಕುಮಾರ್​

Updated on: Dec 18, 2021 | 12:29 PM

ಕರ್ನಾಟಕದಲ್ಲಿ ಡಬ್ಬಿಂಗ್ (Dubbing Cinema) ಸಿನಿಮಾಗಳಿಗೆ ಹೆಬ್ಬಾಗಿಲು ತೆರೆದಿದೆ. ಎಲ್ಲ ಭಾಷೆಯ ಬಿಗ್​ ಬಜೆಟ್​ ಸಿನಿಮಾಗಳು ಏಕಕಾಲಕ್ಕೆ ಕನ್ನಡಕ್ಕೆ ಡಬ್​ ಆಗಿ ತೆರೆಕಾಣುತ್ತಿವೆ. ಇತ್ತೀಚೆಗಷ್ಟೇ ‘ಪುಷ್ಪ’ ಸಿನಿಮಾದ ಕನ್ನಡ ವರ್ಷನ್​ ಬಿಡುಗಡೆ ಆಗಿದೆ. ಆದರೆ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡದ ಅವತರಣಿಕೆ ರಿಲೀಸ್​ ​ಮಾಡಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಕೂಡ ಭುಗಿಲೆದ್ದಿದೆ. ಮುಂಬರುವ ದಿನಗಳಲ್ಲಿ ಕನ್ನಡಕ್ಕೆ ಡಬ್​ ಆಗಿ ತೆರೆಕಾಣಲು ಹಲವು ಚಿತ್ರಗಳು ಸಜ್ಜಾಗಿವೆ. ಜ.7ರಂದು ‘ಆರ್​ಆರ್​ಆರ್​’ ಚಿತ್ರದ ಕನ್ನಡ ವರ್ಷನ್​ ಬಿಡುಗಡೆ ಆಗಲಿದೆ. ಅದೇ ರೀತಿ ಬಾಲಿವುಡ್​ನ ‘ಬ್ರಹ್ಮಾಸ್ತ್ರ’ (Brahmastra Movie) ಸಿನಿಮಾ ಸಹ ಕನ್ನಡದಲ್ಲಿ ತೆರೆಕಾಣಲಿದೆ. ಆ ಚಿತ್ರದ ಬಗ್ಗೆ ನಟಿ ಆಲಿಯಾ ಭಟ್ (Alia Bhatt)​ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿದ್ದಾರೆ.

ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ: ಪಾರ್ಟ್ ಒನ್​ ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ಇದರಲ್ಲಿ ನಟ ರಣಬೀರ್​ ಕಪೂರ್​ ಅವರು ಶಿವನ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಮೋಷನ್​ ಪೋಸ್ಟರ್​ನಿಂದ ಅಭಿಮಾನಿಗಳಲ್ಲಿ ಭಾರಿ ಕೌತುಕ ನಿರ್ಮಾಣ ಆಗಿದೆ.

‘ಬ್ರಹ್ಮಾಂಡದಲ್ಲಿ ಮಹಾಶಕ್ತಿಶಾಲಿಯಾದ ಅಸ್ತ್ರವೊಂದು ಉದ್ಭವಿಸಲಿದೆ. ಮಹಾಯೋಧನೊಬ್ಬನ ಉದಯವಾಗಲಿದೆ. 09.09.2022 ಈ ದಿನಾಂಕದೊಂದಿಗೆ ಬ್ರಹ್ಮಾಸ್ತ್ರ ಪಾರ್ಟ್​ ಒನ್​: ಶಿವನನ್ನು ನೀವು ತಪ್ಪಿಸಿಕೊಳ್ಳುವಂತಿಲ್ಲ​’ ಎಂದು ಆಲಿಯಾ ಭಟ್​ ಕನ್ನಡಲ್ಲೇ ಟ್ವೀಟ್​ ಮಾಡಿದ್ದಾರೆ. ಆ ಮೂಲಕ ಅವರು ಕನ್ನಡದ ಸಿನಿಪ್ರಿಯರನ್ನು ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಡಬ್ಬಿಂಗ್​ ಸಿನಿಮಾಗಳ ಮೂಲಕ ಆಲಿಯಾ ಭಟ್​ ಅವರು ಕರ್ನಾಟಕದಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ.

ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇಟ್ಟುಕೊಂಡಿರುವ ಅವರು ಇದೇ ಮೊದಲ ಬಾರಿಗೆ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಆ ಸಿನಿಮಾದ ಪ್ರಚಾರಕ್ಕಾಗಿ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಆಲಿಯಾ ನಟನೆಯ ‘ಸಡಕ್​ 2’ ಚಿತ್ರದ ಶೂಟಿಂಗ್​ ಮೈಸೂರು ಸುತ್ತಮುತ್ತ ನಡೆದಿತ್ತು. ಈಗ ‘ಬ್ರಹ್ಮಾಸ್ತ್ರ’ ಪ್ರಚಾರದ ಸಲುವಾಗಿ ಅವರು ಕನ್ನಡದಲ್ಲಿ ಟ್ವೀಟ್​ ಮಾಡಿದ್ದಾರೆ. ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ತಮಿಳು, ತೆಲುಗು, ಮಲಯಾಳಂ ಮುಂತಾದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ.

 ಇದನ್ನೂ ಓದಿ:

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಮೊದಲ ದಿನವೇ ಲೀಕ್​ ಆಯ್ತು ರಶ್ಮಿಕಾ, ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ; ಕಲೆಕ್ಷನ್​ ಮೇಲೆ ಬೀಳಲಿದೆ ಪೆಟ್ಟು

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?