AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

Brahmastra Movie: ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ: ಪಾರ್ಟ್ ಒನ್​ ಶಿವ’ ಎಂದು ಶೀರ್ಷಿಕೆ ಇಡಲಾಗಿದೆ.

ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​
ಆಲಿಯಾ ಭಟ್, ರಣಬೀರ್​ ಕಪೂರ್​
TV9 Web
| Edited By: |

Updated on: Dec 18, 2021 | 12:29 PM

Share

ಕರ್ನಾಟಕದಲ್ಲಿ ಡಬ್ಬಿಂಗ್ (Dubbing Cinema) ಸಿನಿಮಾಗಳಿಗೆ ಹೆಬ್ಬಾಗಿಲು ತೆರೆದಿದೆ. ಎಲ್ಲ ಭಾಷೆಯ ಬಿಗ್​ ಬಜೆಟ್​ ಸಿನಿಮಾಗಳು ಏಕಕಾಲಕ್ಕೆ ಕನ್ನಡಕ್ಕೆ ಡಬ್​ ಆಗಿ ತೆರೆಕಾಣುತ್ತಿವೆ. ಇತ್ತೀಚೆಗಷ್ಟೇ ‘ಪುಷ್ಪ’ ಸಿನಿಮಾದ ಕನ್ನಡ ವರ್ಷನ್​ ಬಿಡುಗಡೆ ಆಗಿದೆ. ಆದರೆ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡದ ಅವತರಣಿಕೆ ರಿಲೀಸ್​ ​ಮಾಡಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಕೂಡ ಭುಗಿಲೆದ್ದಿದೆ. ಮುಂಬರುವ ದಿನಗಳಲ್ಲಿ ಕನ್ನಡಕ್ಕೆ ಡಬ್​ ಆಗಿ ತೆರೆಕಾಣಲು ಹಲವು ಚಿತ್ರಗಳು ಸಜ್ಜಾಗಿವೆ. ಜ.7ರಂದು ‘ಆರ್​ಆರ್​ಆರ್​’ ಚಿತ್ರದ ಕನ್ನಡ ವರ್ಷನ್​ ಬಿಡುಗಡೆ ಆಗಲಿದೆ. ಅದೇ ರೀತಿ ಬಾಲಿವುಡ್​ನ ‘ಬ್ರಹ್ಮಾಸ್ತ್ರ’ (Brahmastra Movie) ಸಿನಿಮಾ ಸಹ ಕನ್ನಡದಲ್ಲಿ ತೆರೆಕಾಣಲಿದೆ. ಆ ಚಿತ್ರದ ಬಗ್ಗೆ ನಟಿ ಆಲಿಯಾ ಭಟ್ (Alia Bhatt)​ ಅವರು ಕನ್ನಡದಲ್ಲೇ ಟ್ವೀಟ್​ ಮಾಡಿದ್ದಾರೆ.

ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ: ಪಾರ್ಟ್ ಒನ್​ ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ಇದರಲ್ಲಿ ನಟ ರಣಬೀರ್​ ಕಪೂರ್​ ಅವರು ಶಿವನ ಗೆಟಪ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಮೋಷನ್​ ಪೋಸ್ಟರ್​ನಿಂದ ಅಭಿಮಾನಿಗಳಲ್ಲಿ ಭಾರಿ ಕೌತುಕ ನಿರ್ಮಾಣ ಆಗಿದೆ.

‘ಬ್ರಹ್ಮಾಂಡದಲ್ಲಿ ಮಹಾಶಕ್ತಿಶಾಲಿಯಾದ ಅಸ್ತ್ರವೊಂದು ಉದ್ಭವಿಸಲಿದೆ. ಮಹಾಯೋಧನೊಬ್ಬನ ಉದಯವಾಗಲಿದೆ. 09.09.2022 ಈ ದಿನಾಂಕದೊಂದಿಗೆ ಬ್ರಹ್ಮಾಸ್ತ್ರ ಪಾರ್ಟ್​ ಒನ್​: ಶಿವನನ್ನು ನೀವು ತಪ್ಪಿಸಿಕೊಳ್ಳುವಂತಿಲ್ಲ​’ ಎಂದು ಆಲಿಯಾ ಭಟ್​ ಕನ್ನಡಲ್ಲೇ ಟ್ವೀಟ್​ ಮಾಡಿದ್ದಾರೆ. ಆ ಮೂಲಕ ಅವರು ಕನ್ನಡದ ಸಿನಿಪ್ರಿಯರನ್ನು ಸೆಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಡಬ್ಬಿಂಗ್​ ಸಿನಿಮಾಗಳ ಮೂಲಕ ಆಲಿಯಾ ಭಟ್​ ಅವರು ಕರ್ನಾಟಕದಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ.

ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇಟ್ಟುಕೊಂಡಿರುವ ಅವರು ಇದೇ ಮೊದಲ ಬಾರಿಗೆ ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಆ ಸಿನಿಮಾದ ಪ್ರಚಾರಕ್ಕಾಗಿ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಆಲಿಯಾ ನಟನೆಯ ‘ಸಡಕ್​ 2’ ಚಿತ್ರದ ಶೂಟಿಂಗ್​ ಮೈಸೂರು ಸುತ್ತಮುತ್ತ ನಡೆದಿತ್ತು. ಈಗ ‘ಬ್ರಹ್ಮಾಸ್ತ್ರ’ ಪ್ರಚಾರದ ಸಲುವಾಗಿ ಅವರು ಕನ್ನಡದಲ್ಲಿ ಟ್ವೀಟ್​ ಮಾಡಿದ್ದಾರೆ. ಈ ಚಿತ್ರಕ್ಕೆ ಅಯಾನ್​ ಮುಖರ್ಜಿ ನಿರ್ದೇಶನ ಮಾಡಿದ್ದಾರೆ. ತಮಿಳು, ತೆಲುಗು, ಮಲಯಾಳಂ ಮುಂತಾದ ಭಾಷೆಗಳಿಗೂ ಡಬ್​ ಆಗಿ ತೆರೆಕಾಣಲಿದೆ.

 ಇದನ್ನೂ ಓದಿ:

ಮದುವೆ ವಿಚಾರದಲ್ಲಿ ನಿರ್ಧಾರ ಬದಲಿಸಿದ ಆಲಿಯಾ ಭಟ್​-ರಣಬೀರ್​ ಕಪೂರ್​; ಹರಿದಾಡಿದ ಹೊಸ ಸುದ್ದಿ

ಮೊದಲ ದಿನವೇ ಲೀಕ್​ ಆಯ್ತು ರಶ್ಮಿಕಾ, ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ; ಕಲೆಕ್ಷನ್​ ಮೇಲೆ ಬೀಳಲಿದೆ ಪೆಟ್ಟು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ