AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಹರುಗೆ ಸಂಬಂಧಿಸಿದ ಎರಡು ದೃಶ್ಯಗಳಿಗೆ ಸೆನ್ಸಾರ್​ ಕತ್ತರಿ; ‘ಗಂಗೂಬಾಯಿ..’ ಚಿತ್ರಕ್ಕೆ ಸಿಕ್ಕ ಪ್ರಮಾಣ ಪತ್ರ ಯಾವುದು?

ಮುಂಬೈನ ಕಾಮಾಟಿಪುರದ ಡಾನ್​ ಆಗಿ ಮೆರೆದ ಗಂಗೂಬಾಯಿ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಫೆ.25ರಂದು ಅದ್ದೂರಿಯಾಗಿ ರಿಲೀಸ್​ ಆಗಲಿದೆ.

ನೆಹರುಗೆ ಸಂಬಂಧಿಸಿದ ಎರಡು ದೃಶ್ಯಗಳಿಗೆ ಸೆನ್ಸಾರ್​ ಕತ್ತರಿ; ‘ಗಂಗೂಬಾಯಿ..’ ಚಿತ್ರಕ್ಕೆ ಸಿಕ್ಕ ಪ್ರಮಾಣ ಪತ್ರ ಯಾವುದು?
ಆಲಿಯಾ ಭಟ್​
TV9 Web
| Edited By: |

Updated on: Feb 10, 2022 | 3:47 PM

Share

ಆಲಿಯಾ ಭಟ್​ (Alia Bhatt) ನಟನೆಯ ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಆದರೆ ಹೈಪ್​ ಸೃಷ್ಟಿ ಮಾಡುವುದರ ಜೊತೆ ಕೆಲವು ವಿವಾದಗಳನ್ನೂ ಮಾಡಿಕೊಳ್ಳುತ್ತಿದೆ. ಸಂಜಯ್​ ಲೀಲಾ ಬನ್ಸಾಲಿ ಅವರ ಎಲ್ಲ ಸಿನಿಮಾಗಳು ಕೂಡ ರಿಲೀಸ್​ ಸಮಯದಲ್ಲಿ ಕಿರಿಕ್​ ಮಾಡಿಕೊಳ್ಳುತ್ತವೆ. ‘ಗಂಗೂಬಾಯಿ ಕಾಠಿಯಾವಾಡಿ’ (Gangubai Kathiawadi) ಕೂಡ ಕೆಲವರ ಅಸಮಾಧಾನಕ್ಕೆ ಕಾರಣ ಆಗಿದೆ. ಇಷ್ಟೆಲ್ಲ ವಿವಾದಗಳನ್ನು ಮಾಡಿಕೊಂಡಿರುವ ಈ ಚಿತ್ರಕ್ಕೆ ಸೆನ್ಸಾರ್​ ಮಂಡಳಿಯಿಂದ ಯಾವ ಪ್ರಮಾಣ ಪತ್ರ ಸಿಗಬಹುದು ಎಂಬ ಕುತೂಹಲ ಮೂಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಚರ್ಚೆಯ ವಿಚಾರ ಏನೆಂದರೆ, ಈ ಸಿನಿಮಾದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್​ ನೆಹರು (Jawaharlal Nehru) ಕುರಿತ ಕೆಲವು ದೃಶ್ಯಗಳು ಇವೆ ಎನ್ನಲಾಗಿದೆ. ಈ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೆನ್ಸಾರ್​ ಮಂಡಳಿ ಸದಸ್ಯರು ಸೂಚಿಸಿದ್ದಾರೆ. ಬಳಿಕ ಚಿತ್ರಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ. ಸಂಜಯ್​ ಲೀಲಾ ಬನ್ಸಾಲಿ ಅಭಿಮಾನಿಗಳು ಈ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಫೆ.25ರಂದು ಅದ್ದೂರಿಯಾಗಿ ರಿಲೀಸ್​ ಆಗಲಿದೆ. 

‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾದ ದೃಶ್ಯವೊಂದರಲ್ಲಿ ಸಣ್ಣದೊಂದು ಬದಲಾವಣೆ ಮಾಡಬೇಕು ಮತ್ತು ನಾಲ್ಕು ಕಡೆಗಳಲ್ಲಿ ಕತ್ತರಿ ಹಾಕಬೇಕು ಎಂದು ಸೆನ್ಸಾರ್​ ಮಂಡಳಿಯು ನಿರ್ದೇಶಕರಿಗೆ ಸೂಚಿಸಿದೆ. ಅಲ್ಲದೇ, ನೆಹರು ಅವರ ಬಗ್ಗೆ ಪ್ರಸ್ತಾಪಿಸಲಾಗಿರುವ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ಆದೇಶಿಸಲಾಗಿದೆ ಎಂದು ‘ಬಾಲಿವುಡ್​ ಲೈಫ್​’ ವರದಿ ಮಾಡಿದೆ. ಸೆನ್ಸಾರ್​ ಮಂಡಳಿ ಸೂಚಿಸಿರುವ ಈ ಎಲ್ಲ ಬದಲಾವಣೆಗಳನ್ನು ಮಾಡಿದರೆ ಚಿತ್ರದ ಅವಧಿ ಕೊಂಚ ಕಡಿಮೆ ಆಗಲಿದೆ.

ಮುಂಬೈನ ಕಾಮಾಟಿಪುರದ ಡಾನ್​ ಆಗಿ ಮೆರೆದ ಗಂಗೂಬಾಯಿ ಜೀವನದ ವಿವರಗಳನ್ನು ಆಧರಿಸಿ ಈ ಸಿನಿಮಾ ನಿರ್ಮಾಣ ಆಗಿದೆ. ಆಲಿಯಾ ಜೊತೆ ವಿಜಯ್​ ರಾಝ್​, ಹುಮಾ ಖುರೇಶಿ ಮತ್ತು ಅಜಯ್​ ದೇವಗನ್​ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಗಮನ ಸೆಳೆದಿದೆ. ಈವರೆಗೂ 5 ಕೋಟಿಗೂ ಹೆಚ್ಚು ಬಾರಿ ಈ ಟ್ರೇಲರ್​ ವೀಕ್ಷಣೆ ಕಂಡಿದೆ.

ಸಂಜಯ್​ ಲೀಲಾ ಬನ್ಸಾಲಿ ಸಿನಿಮಾಗಳಲ್ಲಿ ಹಾಡುಗಳಿಗೆ ಹೆಚ್ಚು ಮಹತ್ವ ನೀಡಲಾಗಿರುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಆಲಿಯಾ ಭಟ್​ ಭರ್ಜರಿಯಾಗಿ ಸ್ಟೆಪ್​ ಹಾಕಿರುವ ‘ಡೋಲಿಡಾ..’ ಹಾಡು ಇಂದು (ಫೆ.10) ಬಿಡುಗಡೆ ಆಗಿದೆ. ಯೂಟ್ಯೂಬ್​ನಲ್ಲಿ ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ಈ ಹಾಡು 5 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ.

ಇದನ್ನೂ ಓದಿ:

Alia Bhatt: ರಿಲೀಸ್​ಗೂ ಮುನ್ನವೇ ‘ಗಂಗೂಬಾಯಿ ಕಾಠಿಯಾವಾಡಿ’ ವಿರುದ್ಧ ಆಕ್ರೋಶದ ಸುರಿಮಳೆ; ಕಾರಣ ಒಂದೆರಡಲ್ಲ!

ವಿವಾದದಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರ; ಕನ್ನಡದ ಖ್ಯಾತ ಗಾಯಕಿಗೆ ಅಪಮಾನ ಆರೋಪ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ