AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ತ್ರೀ 2’ ರೀತಿ ಸೂಪರ್​ ಹಿಟ್​ ಆಗಲಿದೆ ‘ಜಿಗ್ರಾ’; ಟೀಸರ್​ ನೋಡಿ ಭವಿಷ್ಯ ನುಡಿದ ಸಿನಿಪ್ರಿಯರು

ಆಲಿಯಾ ಭಟ್​ ನಟನೆಯ ಹೊಸ ಸಿನಿಮಾ ‘ಜಿಗ್ರಾ’ ಅ.11ರಂದು ಬಿಡುಗಡೆ ಆಗಲಿದೆ. ಈಗ ಟೀಸರ್​ ಮೂಲಕ ಕೌತುಕ ಮೂಡಿಸಲಾಗಿದೆ. ವೇದಂಗ್​ ರೈನಾ ಅವರು ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಟಿ ಶ್ರದ್ಧಾ ಕಪೂರ್​ ಸೇರಿದಂತೆ ಅನೇಕರು ಈ ಸಿನಿಮಾದ ಟೀಸರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಹಿಟ್ ಆಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

‘ಸ್ತ್ರೀ 2’ ರೀತಿ ಸೂಪರ್​ ಹಿಟ್​ ಆಗಲಿದೆ ‘ಜಿಗ್ರಾ’; ಟೀಸರ್​ ನೋಡಿ ಭವಿಷ್ಯ ನುಡಿದ ಸಿನಿಪ್ರಿಯರು
‘ಜಿಗ್ರಾ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Sep 08, 2024 | 11:21 PM

Share

ನಟಿ ಆಲಿಯಾ ಭಟ್​ ಅವರು ಯಾವಾಗಲೂ ಗಟ್ಟಿ ಕಥಾಹಂದರದ ಸಿನಿಮಾಗಳನ್ನು ಮಾಡುತ್ತಾರೆ. ಈಗ ಅವರು ನಟಿಸಿರುವ ‘ಜಿಗ್ರಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಟೀಸರ್​ ನೋಡಿದ ಅಭಿಮಾನಿಗಳು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈ ವರ್ಷ ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅದೇ ರೀತಿ ‘ಜಿಗ್ರಾ’ ಚಿತ್ರ ಕೂಡ ಹಿಟ್​ ಆಗಲಿದೆ ಎಂದು ಸಿನಿಪ್ರಿಯರು ಭವಿಷ್ಯ ನುಡಿಯುತ್ತಿದ್ದಾರೆ. ಆಲಿಯಾ ಭಟ್​ ಅವರ ಅಭಿಮಾನಿಗಳ ವಲಯದಲ್ಲಿ ‘ಜಿಗ್ರಾ’ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಿದೆ.

‘ಜಿಗ್ರಾ’ ಸಿನಿಮಾಗೆ ವಾಸನ್ ಬಾಲ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಕಥೆ ಏನು ಎಂಬ ಬಗ್ಗೆ ಟೀಸರ್​ನಲ್ಲಿ ಸುಳಿವು ಬಿಟ್ಟುಕೊಡಲಾಗಿದೆ. ಪೊಲೀಸರ ವಶದಲ್ಲಿ ಇರುವ ತಮ್ಮನನ್ನು ಬಿಡಿಸಿಕೊಂಡು ಬರಲು ಕಷ್ಟಪಡುವ ಅಕ್ಕನ ಪಾತ್ರದಲ್ಲಿ ಆಲಿಯಾ ಭಟ್​ ಅವರು ನಟಿಸಿದ್ದಾರೆ. ಅಕ್ಕ-ತಮ್ಮನ ನಡುವಿನ ಭಾಂದವ್ಯದ ಕಥೆ ಈ ಸಿನಿಮಾದಲ್ಲಿ ಇದೆ. ಆ ಕಾರಣಕ್ಕಾಗಿ ಆಲಿಯಾ ಭಟ್​ ಪಾಲಿಗೆ ಇದು ವಿಶೇಷ ಸಿನಿಮಾ ಆಗಲಿದೆ. ವೇದಂಗ್​ ರೈನಾ ಅವರು ಈ ಚಿತ್ರದಲ್ಲಿ ಆಲಿಯಾ ಭಟ್​ ಸಹೋದರನ ಪಾತ್ರವನ್ನು ಮಾಡಿದ್ದಾರೆ.

ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಜಿಗ್ರಾ’ ಸಿನಿಮಾದ ಟೀಸರ್​ ನೋಡಿ ಫಿದಾ ಆಗಿದ್ದಾರೆ. ನಟಿ ಶ್ರದ್ಧಾ ಕಪೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಟೀಸರ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಈ ಸಿನಿಮಾವನ್ನು ಥಿಯೇಟರ್​ನಲ್ಲಿ ಅಣ್ಣ-ತಮ್ಮನ ಜೊತೆ ನೋಡಬೇಕು. ಆಲಿಯಾ ಭಟ್​ ಎಂಥ ಅದ್ಭುತ ಹುಡುಗಿ. ಈ ಟ್ರೇಲರ್​ ಅದ್ಭುತವಾಗಿದೆ’ ಎಂದು ಶ್ರದ್ಧಾ ಕಪೂರ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಪಾಪರಾಜಿಗಳಿಗೆ ಕ್ಯೂಟ್​ ಆಗಿ ಪೋಸ್​ ನೀಡುವುದು ಕಲಿತ ಆಲಿಯಾ ಭಟ್​ ಮಗಳು ರಹಾ ಕಪೂರ್​

2023ರಲ್ಲಿ ಆಲಿಯಾ ಭಟ್​ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಯಶಸ್ಸು ಕಂಡಿದ್ದರು. ಆ ಸಿನಿಮಾದ ಬಳಿಕ ಅವರು ಸಣ್ಣ ಬ್ರೇಕ್​ ತೆಗೆದುಕೊಂಡರು. 2024ರಲ್ಲಿ ಬಿಡುಗಡೆ ಆಗುತ್ತಿರುವ ಆಲಿಯಾ ಭಟ್​ ಅವರ ಮೊದಲ ಸಿನಿಮಾ ‘ಜಿಗ್ರಾ’. ಈ ಸಿನಿಮಾ ಅಕ್ಟೋಬರ್​ 11ರಂದು ತೆರೆಕಾಣಲಿದೆ. ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಆಲಿಯಾ ಭಟ್​ ಅವರು ಸಹ-ನಿರ್ಮಾಪಕಿ ಕೂಡ ಹೌದು. ಕರಣ್​ ಜೋಹರ್​ ಅವರು ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ