‘ಸ್ತ್ರೀ 2’ ರೀತಿ ಸೂಪರ್​ ಹಿಟ್​ ಆಗಲಿದೆ ‘ಜಿಗ್ರಾ’; ಟೀಸರ್​ ನೋಡಿ ಭವಿಷ್ಯ ನುಡಿದ ಸಿನಿಪ್ರಿಯರು

ಆಲಿಯಾ ಭಟ್​ ನಟನೆಯ ಹೊಸ ಸಿನಿಮಾ ‘ಜಿಗ್ರಾ’ ಅ.11ರಂದು ಬಿಡುಗಡೆ ಆಗಲಿದೆ. ಈಗ ಟೀಸರ್​ ಮೂಲಕ ಕೌತುಕ ಮೂಡಿಸಲಾಗಿದೆ. ವೇದಂಗ್​ ರೈನಾ ಅವರು ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಟಿ ಶ್ರದ್ಧಾ ಕಪೂರ್​ ಸೇರಿದಂತೆ ಅನೇಕರು ಈ ಸಿನಿಮಾದ ಟೀಸರ್​ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಹಿಟ್ ಆಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

‘ಸ್ತ್ರೀ 2’ ರೀತಿ ಸೂಪರ್​ ಹಿಟ್​ ಆಗಲಿದೆ ‘ಜಿಗ್ರಾ’; ಟೀಸರ್​ ನೋಡಿ ಭವಿಷ್ಯ ನುಡಿದ ಸಿನಿಪ್ರಿಯರು
‘ಜಿಗ್ರಾ’ ಸಿನಿಮಾ ಪೋಸ್ಟರ್​
Follow us
|

Updated on: Sep 08, 2024 | 11:21 PM

ನಟಿ ಆಲಿಯಾ ಭಟ್​ ಅವರು ಯಾವಾಗಲೂ ಗಟ್ಟಿ ಕಥಾಹಂದರದ ಸಿನಿಮಾಗಳನ್ನು ಮಾಡುತ್ತಾರೆ. ಈಗ ಅವರು ನಟಿಸಿರುವ ‘ಜಿಗ್ರಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಗಿದೆ. ಟೀಸರ್​ ನೋಡಿದ ಅಭಿಮಾನಿಗಳು ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈ ವರ್ಷ ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅದೇ ರೀತಿ ‘ಜಿಗ್ರಾ’ ಚಿತ್ರ ಕೂಡ ಹಿಟ್​ ಆಗಲಿದೆ ಎಂದು ಸಿನಿಪ್ರಿಯರು ಭವಿಷ್ಯ ನುಡಿಯುತ್ತಿದ್ದಾರೆ. ಆಲಿಯಾ ಭಟ್​ ಅವರ ಅಭಿಮಾನಿಗಳ ವಲಯದಲ್ಲಿ ‘ಜಿಗ್ರಾ’ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಿದೆ.

‘ಜಿಗ್ರಾ’ ಸಿನಿಮಾಗೆ ವಾಸನ್ ಬಾಲ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಕಥೆ ಏನು ಎಂಬ ಬಗ್ಗೆ ಟೀಸರ್​ನಲ್ಲಿ ಸುಳಿವು ಬಿಟ್ಟುಕೊಡಲಾಗಿದೆ. ಪೊಲೀಸರ ವಶದಲ್ಲಿ ಇರುವ ತಮ್ಮನನ್ನು ಬಿಡಿಸಿಕೊಂಡು ಬರಲು ಕಷ್ಟಪಡುವ ಅಕ್ಕನ ಪಾತ್ರದಲ್ಲಿ ಆಲಿಯಾ ಭಟ್​ ಅವರು ನಟಿಸಿದ್ದಾರೆ. ಅಕ್ಕ-ತಮ್ಮನ ನಡುವಿನ ಭಾಂದವ್ಯದ ಕಥೆ ಈ ಸಿನಿಮಾದಲ್ಲಿ ಇದೆ. ಆ ಕಾರಣಕ್ಕಾಗಿ ಆಲಿಯಾ ಭಟ್​ ಪಾಲಿಗೆ ಇದು ವಿಶೇಷ ಸಿನಿಮಾ ಆಗಲಿದೆ. ವೇದಂಗ್​ ರೈನಾ ಅವರು ಈ ಚಿತ್ರದಲ್ಲಿ ಆಲಿಯಾ ಭಟ್​ ಸಹೋದರನ ಪಾತ್ರವನ್ನು ಮಾಡಿದ್ದಾರೆ.

ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ‘ಜಿಗ್ರಾ’ ಸಿನಿಮಾದ ಟೀಸರ್​ ನೋಡಿ ಫಿದಾ ಆಗಿದ್ದಾರೆ. ನಟಿ ಶ್ರದ್ಧಾ ಕಪೂರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಟೀಸರ್​ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ಈ ಸಿನಿಮಾವನ್ನು ಥಿಯೇಟರ್​ನಲ್ಲಿ ಅಣ್ಣ-ತಮ್ಮನ ಜೊತೆ ನೋಡಬೇಕು. ಆಲಿಯಾ ಭಟ್​ ಎಂಥ ಅದ್ಭುತ ಹುಡುಗಿ. ಈ ಟ್ರೇಲರ್​ ಅದ್ಭುತವಾಗಿದೆ’ ಎಂದು ಶ್ರದ್ಧಾ ಕಪೂರ್​ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಪಾಪರಾಜಿಗಳಿಗೆ ಕ್ಯೂಟ್​ ಆಗಿ ಪೋಸ್​ ನೀಡುವುದು ಕಲಿತ ಆಲಿಯಾ ಭಟ್​ ಮಗಳು ರಹಾ ಕಪೂರ್​

2023ರಲ್ಲಿ ಆಲಿಯಾ ಭಟ್​ ಅವರು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಮೂಲಕ ಯಶಸ್ಸು ಕಂಡಿದ್ದರು. ಆ ಸಿನಿಮಾದ ಬಳಿಕ ಅವರು ಸಣ್ಣ ಬ್ರೇಕ್​ ತೆಗೆದುಕೊಂಡರು. 2024ರಲ್ಲಿ ಬಿಡುಗಡೆ ಆಗುತ್ತಿರುವ ಆಲಿಯಾ ಭಟ್​ ಅವರ ಮೊದಲ ಸಿನಿಮಾ ‘ಜಿಗ್ರಾ’. ಈ ಸಿನಿಮಾ ಅಕ್ಟೋಬರ್​ 11ರಂದು ತೆರೆಕಾಣಲಿದೆ. ಬಾಕ್ಸ್ ಆಫೀಸ್​ನಲ್ಲಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಆಲಿಯಾ ಭಟ್​ ಅವರು ಸಹ-ನಿರ್ಮಾಪಕಿ ಕೂಡ ಹೌದು. ಕರಣ್​ ಜೋಹರ್​ ಅವರು ‘ಧರ್ಮ ಪ್ರೊಡಕ್ಷನ್ಸ್​’ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು