AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangubai Kathiawadi: ಬೆಳ್ಳಿತೆರೆಯ ಮೇಲೆ ಮಿಂಚಲು ‘ಗಂಗೂಬಾಯಿ ಕಾಠಿಯಾವಾಡಿ’ ರೆಡಿ; ಯಾವಾಗ ಬಿಡುಗಡೆ?

Alia Bhatt: ಬಾಲಿವುಡ್​ನ ಖ್ಯಾತ ನಟಿ ಆಲಿಯಾ ಭಟ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ.

Gangubai Kathiawadi: ಬೆಳ್ಳಿತೆರೆಯ ಮೇಲೆ ಮಿಂಚಲು ‘ಗಂಗೂಬಾಯಿ ಕಾಠಿಯಾವಾಡಿ’ ರೆಡಿ; ಯಾವಾಗ ಬಿಡುಗಡೆ?
‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್
TV9 Web
| Edited By: |

Updated on: Sep 30, 2021 | 4:39 PM

Share

ಮಹಾರಾಷ್ಟ್ರದಲ್ಲಿ ಮುಚ್ಚಿದ್ದ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅನುಮತಿಸಿರುವ ಬೆನ್ನಲ್ಲಿಯೇ ಬಿಗ್ ಬಜೆಟ್ ಚಿತ್ರಗಳ ಬಿಡುಗಡೆಯ ದಿನಾಂಕಗಳು ಸಾಲಾಗಿ ಘೋಷಣೆಯಾಗುತ್ತಿವೆ. ಬಾಲಿವುಡ್​ ಚಿತ್ರಗಳಿಗೆ ಮಹಾರಾಷ್ಟ್ರ ಬಹುದೊಡ್ಡ ಮಾರುಕಟ್ಟೆಯಾಗಿದ್ದು, ಅಲ್ಲಿ ಚಿತ್ರಮಂದಿರಗಳ ಲಭ್ಯತೆ ಇಲ್ಲದೇ ಇದ್ದರೂ ಬಿಡುಗಡೆಯಾಗಿದ್ದ ‘ಬೆಲ್​ಬಾಟಂ’, ‘ತಲೈವಿ’ ಮೊದಲಾದ ಚಿತ್ರಗಳು ಸೋಲು ಕಂಡಿದ್ದವು. ಆದ್ದರಿಂದಲೇ ಪ್ರಸ್ತುತ ದೊಡ್ಡ ಚಿತ್ರಗಳು ಮಹಾರಾಷ್ಟ್ರದಲ್ಲಿ ಚಿತ್ರಮಂದಿರಗಳು ಲಭ್ಯವಾಗುವ ತನಕ ಬಿಡುಗಡೆ ಮುಂದೂಡಿದ್ದವು. ಇದೀಗ ಮಹಾರಾಷ್ಟ್ರದಲ್ಲಿ ಚಿತ್ರಮಂದಿರಗಳು ತೆರೆದಿದ್ದು, ಚಿತ್ರ ಬಿಡುಗಡೆಯನ್ನು ಘೋಷಿಸಿದ ಪಟ್ಟಿಗೆ ಖ್ಯಾತ ನಟಿ ಆಲಿಯಾ ಭಟ್  ಅಭಿನಯದ ‘ಗಂಗೂಬಾಯಿ ಕಾಠಿಯಾವಾಡಿ’ ಸೇರಿದೆ.

‘ಪದ್ಮಾವತ್’, ‘ಬಾಜಿರಾವ್ ಮಸ್ತಾನಿ’ ಮೊದಲಾದ ಹಿಟ್ ಚಿತ್ರಗಳ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಆಕ್ಷನ್ ಕಟ್ ಹೇಳಿರುವ ‘ಗಂಗೂಬಾಯಿ ಕಾಠಿಯಾವಾಡಿ’ ಚಿತ್ರದಲ್ಲಿ ಆಲಿಯಾ ಭಟ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ಬಿಡುಗಡೆಯ ನೂತನ ದಿನಾಂಕ ಘೋಷಣೆಯಾಗಿದ್ದು, ಹೊಸ ವರ್ಷದ ಸಮಯದಲ್ಲಿ ತೆರೆಕಾಣಲಿದೆ. ಜನವರಿ 6ರಂದು ಈ ಚಿತ್ರವು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ಕುರಿತು ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಅಜಯ್ ದೇವಗನ್ ಟ್ವೀಟ್ ಮಾಡಿದ್ದಾರೆ.

ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಚಿತ್ರವನ್ನು ತಯಾರಿಸಲಾಗಿದೆ. ಈಗಾಗಲೇ ಚಿತ್ರವು ತನ್ನ ಟೀಸರ್ ಮುಖಾಂತರ ವೀಕ್ಷಕರ ಮನ ಗೆದ್ದಿದ್ದು, ಬೆಳ್ಳಿ ತೆರೆಯಲ್ಲಿ ಚಿತ್ರವನ್ನು ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಸಂಜಯ್ ಲೀಲಾ ಬನ್ಸಾಲಿಯವರ ಈ ಹಿಂದಿನ ಚಿತ್ರಗಳಂತೆಯೇ ಈ ಚಿತ್ರ ಕೂಡ ಅದ್ದೂರಿಯಾಗಿ ಮೂಡಿಬಂದಿದೆ.

ಚಿತ್ರದ ಟ್ರೈಲರ್ ಇಲ್ಲಿದೆ:

ಅಜಯ್ ದೇವಗನ್ ನಟನೆಯ ಮತ್ತೊಂದು ಬಹು ನಿರೀಕ್ಷಿತ ‘ಮೈದಾನ್’ ಚಿತ್ರದ ಬಿಡುಗಡೆಯ ದಿನಾಂಕವನ್ನೂ ಇಂದು ಘೋಷಿಸಲಾಗಿದೆ. ಆ ಚಿತ್ರವು 2022ರ ಜೂನ್ 3ರಂದು ಬಿಡುಗಡೆಯಾಗಲಿದೆ ಎಂದು ಅಜಯ್ ದೇವಗನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:

ಸಮಂತಾರ ಖಾಸಗಿ ಅಂಗದ ಬಗ್ಗೆ ಕೆಟ್ಟದಾಗಿ ಕಮೆಂಟ್​ ಮಾಡಿದ್ದ ನಟಿ ಶ್ರೀರೆಡ್ಡಿಗೆ ಈಗ ಅವರ ದಾಂಪತ್ಯದ್ದೇ ಚಿಂತೆ

Maidaan: ಅಜಯ್ ದೇವಗನ್ ನಟನೆಯ ಬಹುನಿರೀಕ್ಷಿತ ‘ಮೈದಾನ್’ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆ

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ಭಾವುಕ ಪೋಸ್ಟ್​ ಹಾಕಿದ್ದ ಸ್ಯಾಂಡಲ್​ವುಡ್​ ನಟಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ