AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಂತರ ರೂಪಾಯಿ ಕಾರು ಇದ್ದರೂ ಆಟೋದಲ್ಲಿ ಪ್ರಯಾಣ ಮಾಡಿದ ಆಲಿಯಾ ಭಟ್

ಆಲಿಯಾ ಭಟ್ ಅವರ ಶ್ರೀಮಂತಿಕೆಗೆ ಏನೂ ಕೊರತೆ ಇಲ್ಲ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಕಾರುಗಳು ಅವರ ಬಳಿ ಇವೆ. ಆದರೂ ಸಹ ಅವರು ಆಟೋದಲ್ಲಿ ಪ್ರಯಾಣ ಮಾಡುವ ಮೂಲಕ ಸುದ್ದಿ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಲಿಯಾ ಭಟ್ ಅವರ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಕೋಟ್ಯಂತರ ರೂಪಾಯಿ ಕಾರು ಇದ್ದರೂ ಆಟೋದಲ್ಲಿ ಪ್ರಯಾಣ ಮಾಡಿದ ಆಲಿಯಾ ಭಟ್
ಆಲಿಯಾ ಭಟ್
ಮದನ್​ ಕುಮಾರ್​
|

Updated on: Dec 08, 2024 | 3:24 PM

Share

ನಟಿ ಆಲಿಯಾ ಭಟ್​ ಅವರ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿ ಇದೆ. ಹತ್ತಾರು ಐಷಾರಾಮಿ ಕಾರುಗಳು ಇವೆ. ಹಾಗಿದ್ದರೂ ಕೂಡ ಅವರು ಆಟೋ ರಿಕ್ಷಾದಲ್ಲಿ ಪ್ರಯಾಣ ಮಾಡಿದ್ದಾರೆ. ಶನಿವಾರ (ಡಿಸೆಂಬರ್​ 7) ಸಂಜೆ ಆಲಿಯಾ ಭಟ್ ಅವರು ಮುಂಬೈನಲ್ಲಿ ಆಟೋ ಸವಾರಿ ಮಾಡಿದ ವಿಡಿಯೋ ವೈರಲ್ ಆಗಿದೆ. ಅದನ್ನು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ನೋಡಿದ ಜನರು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ಕೆಲವರು ಇದನ್ನು ನಾಟಕ ಎಂದಿದ್ದಾರೆ, ಇನ್ನೂ ಕೆಲವರು ಆಲಿಯಾ ಭಟ್​ ಪರವಾಗಿ ಕಮೆಂಟ್ ಮಾಡಿದ್ದಾರೆ.

ಆಲಿಯಾ ಭಟ್​ ಅವರು ಸರಳತೆಯನ್ನು ತೋರ್ಪಡಿಸುವ ಸಲುವಾಗಿ ಆಟೋದಲ್ಲಿ ಪ್ರಯಾಣ ಮಾಡಿದ್ದಾರೆ ಎಂಬುದು ಕೆಲವರ ವಾದ. ಆದರೆ ಅಸಲಿ ವಿಚಾರ ಬೇರೆ ಇದೆ. ಅವರು ಹೋಗಬೇಕಿದ್ದ ದಾರಿ ತುಂಬ ಕಿರಿದಾಗಿದೆ. ಹಾಗಾಗಿ, ಅಷ್ಟು ಚಿಕ್ಕ ರಸ್ತೆಯಲ್ಲಿ ದೊಡ್ಡ ಕಾರುಗಳನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಆ ಕಾರಣದಿಂದಲೇ ಅವರು ಆಟೋದಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಅಭಿಮಾನಿಗಳು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಳೇ ಬಟ್ಟೆ ಧರಿಸಿ ಪಾರ್ಟಿಗೆ ಬಂದ ಆಲಿಯಾ ಭಟ್​; ನೆಟ್ಟಿಗರಿಂದ ಮೆಚ್ಚುಗೆ

ಸೆಲೆಬ್ರಿಟಿಗಳು ಎಲ್ಲಿಯೋ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಆಲಿಯಾ ಭಟ್ ಅವರಿಗಾಗಿ ಆಟೋ ಕಾಯುತ್ತಿತ್ತು. ಅಲ್ಲಿಯ ತನಕ ಅವರು ನಡೆದು ಬಂದಿದ್ದಾರೆ. ಆಲಿಯಾ ಭಟ್ ಜೊತೆ ಅವರ ಬಾಡಿ ಗಾರ್ಡ್ಸ್​ ಕೂಡ ಇದ್ದರು. ಆಲಿಯಾ ಅವರನ್ನು ಕಂಡ ಪಾಪರಾಜಿಗಳು ಫೋಟೋ, ವಿಡಿಯೋ ಸಲುವಾಗಿ ಫಾಲೋ ಮಾಡಿದ್ದಾರೆ. ತಮಗಾಗಿ ಒಂದು ಪೋಸ್ ನೀಡುವಂತೆ ಪಾಪರಾಜಿಗಳು ಮನವಿ ಮಾಡಿದ್ದಾರೆ.

ಬಾಲಿವುಡ್​ನಲ್ಲಿ ಬಹುಬೇಡಿಕೆಯ ನಟಿಯಾಗಿ ಆಲಿಯಾ ಭಟ್ ಅವರು ಗುರುತಿಸಿಕೊಂಡಿದ್ದಾರೆ. ಅವರು ನಟಿಸಿದ ಅನೇಕ ಸಿನಿಮಾಗಳು ಸೂಪರ್​ ಹಿಟ್ ಆಗಿವೆ. ಸಖತ್ ಬೇಡಿಕೆ ಇರುವಾಗಲೇ ಅವರು ರಣಬೀರ್​ ಕಪೂರ್​ ಜೊತೆ ಮದುವೆಯಾಗುವ ನಿರ್ಧಾರಕ್ಕೆ ಬಂದರು. ಈ ಜೋಡಿಗೆ ರಹಾ ಹೆಸರಿನ ಹೆಣ್ಣು ಮಗು ಇದೆ. ವೈಯಕ್ತಿಕ ಜೀವನ ಮತ್ತು ವೃತ್ತಿ ಜೀವನ ಎರಡನ್ನೂ ಆಲಿಯಾ ಭಟ್​ ಅವರು ಸರಿ ದೂಗಿಸಿಕೊಂಡು ಸಾಗುತ್ತಿದ್ದಾರೆ. ಹಲವು ಸಿನಿಮಾಗಳ ಆಫರ್​ ಅವರ ಕೈಯಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ