AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಕೌತುಕ ಮೂಡಿಸಿದೆ.

ವಿಮಾನ ನಿಲ್ದಾಣದಲ್ಲಿ ಗಾಬರಿಯಿಂದ ಓಡಿ ಹೋದ ನಟಿ ಆಲಿಯಾ ಭಟ್​; ವೈರಲ್​ ವಿಡಿಯೋದ ಸತ್ಯಾಂಶ ಏನು?
ಆಲಿಯಾ ಭಟ್
TV9 Web
| Edited By: |

Updated on:May 04, 2022 | 2:24 PM

Share

ಇದು ಸೋಶಿಯಲ್​ ಮೀಡಿಯಾ ಜಗತ್ತು. ಕೆಲವು ವಿಡಿಯೋಗಳು ಕ್ಷಣಾರ್ಧದಲ್ಲಿ ವೈರಲ್​ ಆಗುತ್ತವೆ. ಅದರ ಸತ್ಯಾಸತ್ಯತೆ ಏನು ಎಂಬುದು ತಿಳಿಯುವುದಕ್ಕಿಂತ ಮುನ್ನವೇ ಜನರು ಅದನ್ನು ನಂಬಿಬಿಡುತ್ತಾರೆ. ಈಗ ನಟಿ ಆಲಿಯಾ ಭಟ್​ (Alia Bhatt) ಅವರು ವಿಮಾನ ನಿಲ್ದಾಣದಲ್ಲಿ ತುಂಬ ಗಾಬರಿಯಿಂದ ಓಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಅದನ್ನು ಕಂಡು ಕೆಲವರು ನಿಜ ಎಂದು ನಂಬಿದ್ದಾರೆ. ಆ ವಿಡಿಯೋದಲ್ಲಿ ಆಲಿಯಾ ಭಟ್​ ಅವರು ತುಂಬ ಆತಂಕಕ್ಕೆ ಒಳಗಾದಂತೆ ಕಾಣಿಸುತ್ತಾರೆ. ಟ್ರಾಲಿಯಲ್ಲಿ ತಮ್ಮ ಲಗೇಜ್​ಗಳನ್ನು ಹಾಕಿಕೊಂಡು ಅವರು ಓಡುತ್ತಿರುವ ದೃಶ್ಯ ಅದರಲ್ಲಿ ಇದೆ. ಆಲಿಯಾ ಭಟ್​ ಅವರಿಗೆ ಏನಾಯಿತು? ಅವರೇನಾದರೂ ಫ್ಲೈಟ್​ ಮಿಸ್​ ಮಾಡಿಕೊಂಡ್ರಾ? ಇತ್ಯಾದಿ ಪ್ರಶ್ನೆಗಳನ್ನು ಅಭಿಮಾನಿಗಳು ಕೇಳುತ್ತಿದ್ದಾರೆ. ಗಾಬರಿ ಆಗುವಂಥದ್ದು ಏನೂ ಆಗಿಲ್ಲ. ಇದು ಸಿನಿಮಾದ ಶೂಟಿಂಗ್​ ದೃಶ್ಯ! ಕರಣ್​ ಜೋಹರ್​ (Karan Johar) ನಿರ್ದೇಶನ ಮಾಡುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahani) ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆ ಸಂದರ್ಭದ ಒಂದು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಮಾಡಲಾಗಿದೆ.

ನಟಿ ಆಲಿಯಾ ಭಟ್​ ಅವರಿಗೆ ಸಖತ್​ ಬೇಡಿಕೆ ಇದೆ. ‘ಆರ್​ಆರ್​ಆರ್​’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್​ ಇಂಡಿಯಾ ನಾಯಕಿಯಾಗಿ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೇ ನಟ ರಣಬೀರ್​ ಕಪೂರ್​ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಅವರು ಮದುವೆಗಾಗಿ ಹೆಚ್ಚು ದಿನಗಳ ಕಾಲ ಬ್ರೇಕ್​ ಪಡೆದುಕೊಳ್ಳಲಿಲ್ಲ. ಮದುವೆ ಮುಗಿದು ಕೆಲವೇ ದಿನ ಕಳೆದ ಬಳಿಕ ಚಿತ್ರೀಕರಣಕ್ಕೆ ಹಾಜರಾಗಿದ್ದರು. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಸೆರೆಯಾದ ವಿಡಿಯೋ ಇಲ್ಲಿದೆ.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ಹಲವು ಕಾರಣಗಳಿಂದಾಗಿ ಈ ಸಿನಿಮಾ ಕೌತುಕ ಮೂಡಿಸಿದೆ. ಈ ಹಿಂದೆ ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಜೋಡಿ ಮೋಡಿ ಮಾಡಿತ್ತು. ಈಗ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ ಅವರು ಯಾವ ಕಥೆ ಹೇಳಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತು.

‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಬಗ್ಗೆ ಹಬ್ಬಿತ್ತು ವದಂತಿ:

ನಿರ್ದೇಶಕ ಕರಣ್​ ಜೋಹರ್​ ಅವರ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳು ಕೂಡ ಹೈಲೈಟ್​ ಆಗುತ್ತವೆ. ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲೂ ಅತಿಥಿ ಪಾತ್ರಗಳಿದ್ದು, ಅದರಲ್ಲಿ ಶಾರುಖ್​ ಖಾನ್​ ಮತ್ತು ಕಾಜೋಲ್​ ನಟಿಸಲಿದ್ದಾರೆ ಎಂದು ವದಂತಿ ಹಬ್ಬಿಸಲಾಗಿತ್ತು. ಆ ಸುದ್ದಿ ಕೇಳಿ ಅಭಿಮಾನಿಗಳಿಗೆ ಖುಷಿ ಆಗಿತ್ತು. ಎಸ್​ಆರ್​ಕೆ ಹಾಗೂ ಕಾಜೋಲ್ ಅವರದ್ದು ಬಾಲಿವುಡ್​ನಲ್ಲಿ ಹಿಟ್ ಜೋಡಿ. ಕಾಜೋಲ್​-ಶಾರುಖ್​ ಖಾನ್​ ‘ಕುಚ್​ ಕುಚ್​ ಹೋತಾ ಹೈ’, ‘ಕಭಿ ಖುಷಿ ಕಭಿ ಗಮ್​’, ‘ಮೈ ನೇಮ್ ಈಸ್ ಖಾನ್​’, ‘ಡಿಡಿಎಲ್​ಜೆ’ ಸೇರಿ ಹಲವು ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರಿಬ್ಬರೂ ಕರಣ್ ಜೋಹರ್ ನಿರ್ದೇಶನ ಮಾಡುತ್ತಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಬಾಲಿವುಡ್ ಮಂದಿ ಈ ವದಂತಿ ಹಬ್ಬಿಸಿದ್ದಾರೆ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

Alia Bhatt: ‘ಆರ್​ಆರ್​ಆರ್​’ ಚಿತ್ರ ನೋಡಿ ನಿರಾಸೆಗೊಂಡ ಆಲಿಯಾ ಭಟ್​ ಫ್ಯಾನ್ಸ್

ನೆರವೇರಿತು ಆಲಿಯಾ ಭಟ್​-ರಣಬೀರ್ ಕಪೂರ್ ಮದುವೆ; ಕ್ಯೂಟ್​ ದಂಪತಿಯ ಫೋಟೋಗಳು ಇಲ್ಲಿವೆ

Published On - 2:24 pm, Wed, 4 May 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ