AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್​ vs ಆಲಿಯಾ ಭಟ್: ಬಾಕ್ಸ್​ ಆಫೀಸ್​ನಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಮತ್ತು ಆರ್​ಆರ್​​ಆರ್​ ಮುಖಾಮುಖಿ

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲೂ ಆಲಿಯಾ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳು ಒಂದು ದಿನದ ಅಂತರದಲ್ಲಿ ತೆರೆಗೆ ಬರುತ್ತಿದೆ.

ಆಲಿಯಾ ಭಟ್​ vs ಆಲಿಯಾ ಭಟ್: ಬಾಕ್ಸ್​ ಆಫೀಸ್​ನಲ್ಲಿ ‘ಗಂಗೂಬಾಯಿ ಕಾಠಿಯಾವಾಡಿ’ ಮತ್ತು ಆರ್​ಆರ್​​ಆರ್​ ಮುಖಾಮುಖಿ
ಆಲಿಯಾ ಭಟ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 02, 2021 | 11:51 PM

ಕೊವಿಡ್​ ಎರಡನೇ ಅಲೆ ತಣ್ಣಗಾಗುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಅನೌನ್ಸ್​ ಮಾಡುತ್ತಿವೆ. ಸಾಲುಸಾಲು ಸ್ಟಾರ್​ ಸಿನಿಮಾಗಳು ಒಟ್ಟೊಟ್ಟಿಗೆ ರಿಲೀಸ್​ ಆಗುತ್ತಿರುವುದರಿಂದ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತಿದೆ. ಅಚ್ಚರಿ ಎಂದರೆ ನಟಿ ಆಲಿಯಾ ಭಟ್ ಅವರ ಎರಡು​  ಸಿನಿಮಾ ಈಗ ಮುಖಾಮುಖಿ​ ಆಗುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಎಸ್​.ಎಸ್​. ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಸಿನಿಮಾದಲ್ಲಿ ಆಲಿಯಾ ಭಟ್​ ನಟಿಸುತ್ತಿದ್ದಾರೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದಲ್ಲೂ ಆಲಿಯಾ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳು ಒಂದು ದಿನದ ಅಂತರದಲ್ಲಿ ತೆರೆಗೆ ಬರುತ್ತಿದೆ. ಹೀಗಾಗಿ, ಎರಡೂ ಸಿನಿಮಾಗಳಿಗೆ ಒಟ್ಟಿಗೆ ಪ್ರಚಾರ ಮಾಡೋದು ಆಲಿಯಾಗೆ ಅನಿವಾರ್ಯವಾಗಿದೆ.

‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಜನವರಿ 6ರಂದು ತೆರೆಗೆ ಬರುತ್ತಿದೆ. ಸಂಜಯ್​ ಲೀಲಾ ಬನ್ಸಾಲಿ ನಿರ್ದೇಶನದ ಈ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಪ್ರೇಕ್ಷಕರು. ಕಮಾಟಿಪುರದ ಡಾನ್​ ಆಗಿ ಮೆರೆದಿದ್ದ ಗಂಗೂಬಾಯಿ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಚಿತ್ರದ ಟೀಸರ್​ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಬನ್ಸಾಲಿ ಸಿನಿಮಾ ಕೆಲಸದ ಬಗ್ಗೆ ಗೊತ್ತಿದ್ದವರು ಖಂಡಿತವಾಗಿಯೂ ಸಿನಿಮಾ ನೋಡೋಕೆ ತೆರಳುತ್ತಾರೆ.

ಇನ್ನು, ‘ಆರ್​ಆರ್​ಆರ್​’ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವ್​​ಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲೂರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚಿದ್ದಾರೆ. ಆಲಿಯಾ ಭಟ್​ಗೆ ಸೀತಾ ಹೆಸರಿನ ಪಾತ್ರ ನೀಡಲಾಗಿದೆ. ‘ಬಾಹುಬಲಿ 2’ ನಂತರ ತೆರೆಗೆ ಬರುತ್ತಿರುವ ರಾಜಮೌಳಿ ನಿರ್ದೇಶನದ ಸಿನಿಮಾ ಇದಾಗಿದೆ. ಈ ಕಾರಣಕ್ಕೆ ಈ ಸಿನಿಮಾ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಚಿತ್ರ ಆಗಿದ್ದು, ಹಿಂದಿಯಲ್ಲೂ ರಿಲೀಸ್​ ಆಗುತ್ತಿದೆ. ರಾಜಮೌಳಿ ಈಗಾಗಲೇ ‘ಬಾಹುಬಲಿ’ ಸಿನಿಮಾ ಮೂಲಕ ಬಾಲಿವುಡ್​ನಲ್ಲಿ ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಆರ್​ಆರ್​ಆರ್​ ಸಿನಿಮಾಗೆ ಬಾಲಿವುಡ್​​ನಲ್ಲಿ ಬೇಡಿಕೆ ಇದೆ.

ಇದನ್ನೂ ಓದಿ: ಬಿಡುವಿಲ್ಲದೆ ದುಡಿಯುವ ಬಾಲಿವುಡ್ ತಾರೆಯರು ಸೆಟ್​ಗಳಲ್ಲಿ ಮೂರ್ಛೆ ಹೋದ ಪ್ರಸಂಗಳು ಒಂದೆರಡಲ್ಲ!

ಟಾಲಿವುಡ್​ಗೆ ನಡುಕ ಹುಟ್ಟಿಸಿದ ರಾಜಮೌಳಿ; ಬಿಗ್​ ಬಜೆಟ್​ ಚಿತ್ರಗಳ ಗತಿಯೇನು?

ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ